Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎ, ಸಿಎಸ್ ಪರೀಕ್ಷೆಗಳಲ್ಲಿ ದೇಶಕ್ಕೇ...

ಸಿಎ, ಸಿಎಸ್ ಪರೀಕ್ಷೆಗಳಲ್ಲಿ ದೇಶಕ್ಕೇ ನಂ. 1 ಆದ ಇತಿ ಅಗರ್ವಾಲ್ ಗೆ ಐಎಎಸ್ ಕನಸು

ಪ್ರತಿಯೊಬ್ಬ ವಿದ್ಯಾರ್ಥಿಗೆ ಮಾದರಿ ಈ ಅನನ್ಯ ಸಾಧಕಿ

ವಾರ್ತಾಭಾರತಿವಾರ್ತಾಭಾರತಿ20 Jan 2017 9:18 AM IST
share
ಸಿಎ, ಸಿಎಸ್ ಪರೀಕ್ಷೆಗಳಲ್ಲಿ ದೇಶಕ್ಕೇ ನಂ. 1 ಆದ ಇತಿ ಅಗರ್ವಾಲ್ ಗೆ ಐಎಎಸ್ ಕನಸು

ಲಕ್ನೋ, ಜ.20: ಚಾರ್ಟರ್ಡ್ ಅಕೌಂಟೆಂಟ್ಸ್ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಇಲ್ಲಿನ ಇತಿ ಅಗರ್ವಾಲ್ ದೇಶಕ್ಕೇ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಐಸಿಎಐ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಕರೆ ಮಾಡಿ, 800ರ ಪೈಕಿ 599 ಅಂಕ (ಶೇ. 74.88) ಅಂಕ ಪಡೆದಿರುವ ಇತಿಯನ್ನು ಅಭಿನಂದಿಸಿದ್ದಾರೆ. ಭಿವಾಂಡಿಯ ಪಿಯೂಷ್ ರಮೇಶ್ ಲೋಹಿಯಾ (71.75 ಶೇಕಡ) ದ್ವಿತೀಯ ಹಾಗೂ ಜ್ಯೋತಿ ಮುಖೇಶ್‌ಭಾಯ್ ಮಹೇಶ್ವರಿ (70.75) ನಂತರದ ಸ್ಥಾನದಲ್ಲಿದ್ದಾರೆ. ದೇಶಾದ್ಯಂತ ಒಟ್ಟು 7192 ಮಂದಿ ಸಿಎ ಅರ್ಹತೆ ಪಡೆದಿದ್ದಾರೆ.

2011ರಲ್ಲಿ ಇತಿ ಐಎಸ್‌ಸಿ (12ನೇ ಕ್ಲಾಸ್) ಪರೀಕ್ಷೆಯಲ್ಲಿ ಶೇಕಡ 98.75 ಅಂಕ ಪಡೆದು ದೇಶದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದರು. ಗಣಿತ ಹಾಗೂ ವಾಣಿಜ್ಯದಲ್ಲಿ ಶೇಕಡ 100 ಅಂಕ ಪಡೆದಿದ್ದರು. ಬಳಿಕ ಲಾ ಮಾರ್ಟಿನ್ ಗರ್ಲ್ಸ್ ಹಳೇ ವಿದ್ಯಾರ್ಥಿನಿಯಾದ ಇವರು ದಿಲ್ಲಿ ವಿವಿಯ ಶ್ರೀರಾಂ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ ಕಾಲೇಜಿನಲ್ಲಿ ಬಿಕಾಂ (ಆನರ್ಸ್) ಪದವಿ ಪಡೆದರು. ಸಿಪಿಟಿ ಪರೀಕ್ಷೆಯಲ್ಲಿ ಡಿಸ್ಟಿಂಗ್ಷನ್‌ನಲ್ಲಿ ಉತ್ತೀರ್ಣರಾಗಿ ಸಿಎ ಪ್ರವೇಶಕ್ಕೆ 2011ರ ಜೂನ್‌ನಲ್ಲಿ ಅರ್ಹತೆ ಪಡೆದರು. ಐಪಿಸಿಸಿ ಎರಡನೆ ಹಂತದ ಸಿಎಯಲ್ಲಿ 2013ರ ನವೆಂಬರ್‌ನಲ್ಲಿ ದೇಶಕ್ಕೇ ಅಗ್ರಸ್ಥಾನಿಯಾದರು.

ಇವರ ಸಾಧನೆ ಇಷ್ಟಕ್ಕೆ ಕೊನೆಗೊಳ್ಳಲಿಲ್ಲ. 2015ರ ಜೂನ್‌ನಲ್ಲಿ, ಎಕ್ಯುಕ್ಯೂಟಿವ್ ಹಂತದ ಕಂಪನಿ ಸೆಕ್ರೆಟರಿ ಪರೀಕ್ಷೆ ತೆಗೆದುಕೊಂಡರು. ಅಲ್ಲೂ ದೇಶಕ್ಕೆ ಅಗ್ರಸ್ಥಾನಿಯಾದರು. ಇತಿ ಪದವೀಧರರಾಗಿದ್ದರಿಂದ ಸಿಎಸ್ ಫೌಂಡೇಷನ್ ಪರೀಕ್ಷೆಯಿಂದ ಅವರಿಗೆ ವಿನಾಯಿತಿ ನೀಡಲಾಗಿತ್ತು. 2016ರ ನವೆಂಬರ್‌ನಲ್ಲಿ ಸಿಎ ಅಂತಿಮ ಪರೀಕ್ಷೆಗೆ ಹಾಜರಾದ ಬಳಿಕ ಅವರು ಮುಂದಿನ ತಿಂಗಳು ಸಿಎಸ್ ಫೈನಲ್ ಪರೀಕ್ಷೆಯನ್ನೂ ತೆಗೆದುಕೊಂಡರು. ಅದರ ಫಲಿತಾಂಶ ನಿರೀಕ್ಷಿಸಲಾಗುತ್ತಿದೆ.

ದಿಲ್ಲಿಯಲ್ಲಿ ಉದ್ಯೋಗದಲ್ಲಿರುವ ಅವರು ದೂರವಾಣಿ ಮೂಲಕ ಟೈಮ್ಸ್ ಆಫ್ ಇಂಡಿಯಾ ಜತೆ ಮಾತನಾಡಿ, "ನಿಮ್ಮ ಕೆಲಸವನ್ನು ಯೋಜಿಸಿಕೊಳ್ಳಿ. ನಿಮ್ಮ ಯೋಜನೆಯಂತೆ ಕೆಲಸ ಮಾಡಿ. ಇದು ಶಾಲಾ ದಿನಗಳಿಂದಲೂ ನನ್ನ ದೃಢ ನಂಬಿಕೆ. ಇದು ನನಗೆ ಯಶಸ್ಸು ತಂದುಕೊಟ್ಟಿದೆ" ಎಂದು ಸಂತಸ ಹಂಚಿಕೊಂಡರು.

ಇತಿ ಇದೀಗ ನಾಗರಿಕ ಸೇವಾ ಪರೀಕ್ಷೆ ತೆಗೆದುಕೊಳ್ಳುವ ಗುರಿ ಹೊಂದಿದ್ದಾರೆ. "ಸಿಎ ಅರ್ಹತೆ ಪಡೆದ ಬಳಿಕ ಇದೀಗ ದೇಶಕ್ಕಾಗಿ ಸೇವೆ ಮಾಡಬೇಕು ಎನ್ನುವುದು ನನಗೆ ಮನವರಿಕೆಯಾಗಿದೆ. ಸಿಎ ಅಥವಾ ಸಿಎಸ್ ಆಗಿ ಕೆಲಸ ಮಾಡಿದರೆ ನಾನು ಬೇರೆಯವರಿಗಾಗಿ ಕೆಲಸ ಮಾಡುತ್ತೇನೆ. ಆದರೆ ನಾಗರಿಕ ಸೇವಾ ಪರೀಕ್ಷೆ ಉತ್ತೀರ್ಣರಾದರೆ ದೇಶಕ್ಕಾಗಿ ಸೇವೆ ಮಾಡಲು ಅವಕಾಶವಾಗುತ್ತದೆ" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X