Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೆನಿಸ್ ಆಟಗಾರ್ತಿ ವೀನಸ್‌ಗೆ ‘ಗೊರಿಲ್ಲಾ’...

ಟೆನಿಸ್ ಆಟಗಾರ್ತಿ ವೀನಸ್‌ಗೆ ‘ಗೊರಿಲ್ಲಾ’ ಎಂದ ವೀಕ್ಷಕವಿವರಣೆಗಾರನಿಗೆ ಗೇಟ್‌ಪಾಸ್

ವಾರ್ತಾಭಾರತಿವಾರ್ತಾಭಾರತಿ20 Jan 2017 8:02 PM IST
share
ಟೆನಿಸ್ ಆಟಗಾರ್ತಿ ವೀನಸ್‌ಗೆ ‘ಗೊರಿಲ್ಲಾ’ ಎಂದ ವೀಕ್ಷಕವಿವರಣೆಗಾರನಿಗೆ ಗೇಟ್‌ಪಾಸ್

ಮೆಲ್ಬೋರ್ನ್, ಜ.20: ಹಿರಿಯ ಟೆನಿಸ್ ಆಟಗಾರ್ತಿ ವೀನಸ್ ವಿಲಿಯಮ್ಸ್‌ರನ್ನು ‘ಗೊರಿಲ್ಲಾ’ಗೆ ಹೋಲಿಸಿ ಅಚಾತುರ್ಯ ತೋರಿದ ಟೆನಿಸ್ ವೀಕ್ಷಕವಿವರಣೆಗಾರನನ್ನು ಅಮೆರಿಕದ ಇಎಸ್‌ಪಿಎನ್ ಸಮಿತಿಯಿಂದ ಹೊರ ಹಾಕಲಾಗಿದೆ.

ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್‌ನಲ್ಲಿ ವೀನಸ್ ಆಡುತ್ತಿದ್ದಾಗ ವೀಕ್ಷಕವಿವರಣೆಗಾರರಾದ ಡೌಗ್ ಆಡ್ಲೆರ್ ಗೋರಿಲ್ಲಾ ಶಬ್ದವನ್ನು ಬಳಸಿ ನಾಲಿಗೆ ಕಚ್ಚಿಕೊಂಡರು.

ಬುಧವಾರ ಇಲ್ಲಿ ನಡೆದಿದ್ದ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಏಳು ಬಾರಿಯ ಗ್ರಾನ್‌ಸ್ಲಾಮ್ ಚಾಂಪಿಯನ್ ವೀನಸ್ ಸ್ಟೆಫಾನಿ ವೊಗೆಲೆ ವಿರುದ್ಧ ಪಂದ್ಯದ ನೇರ ಪ್ರಸಾರದ ವೇಳೆ ಡೌಗ್ ಆಡ್ಲೆರ್ ಶಬ್ದದ ಆಯ್ಕೆಯ ವೇಳೆ ತುಂಬಾ ಎಚ್ಚರಿಕೆಯಿಂದಿರಬೇಕಾಗಿತ್ತು. ಅವರು ತಮ್ಮ ತಪ್ಪಿಗೆ ಕ್ಷಮೆ ಕೋರಿದ್ದಾರೆ. ಆದಾಗ್ಯೂ ಅವರನ್ನು ಟೂರ್ನಿಯ ಉಳಿದ ಪಂದ್ಯಗಳಲ್ಲಿ ಕಾರ್ಯನಿರ್ವಹಿಸದಂತೆ ನಿರ್ಬಂಧ ಹೇರಿದ್ದೇವೆ ಎಂದು ಇಎಸ್‌ಪಿಎನ್ ಪ್ರಕಟನೆಯೊಂದರಲ್ಲಿ ತಿಳಿಸಿದೆ.

13ನೆ ಶ್ರೇಯಾಂಕಿತೆ ಆಫ್ರಿಕದ ಅಮೆರಿಕನ್ ವಿಲಿಯಮ್ಸ್ ಅವರು ಆಡ್ಲೆರ್ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಪಂದ್ಯದತ್ತ ಗಮನ ಹರಿಸಿದ್ದಾರೆ. ಶುಕ್ರವಾರ ನಡೆದ 3ನೆ ಸುತ್ತಿನ ಪಂದ್ಯದಲ್ಲಿ ಡುಯಾಂಗ್ ಯಿಂಗ್ ವಿರುದ್ಧ 6-1, 6-0 ಅಂತರದಿಂದ ಗೆಲುವು ಸಾಧಿಸಿ ನಾಲ್ಕನೆ ಸುತ್ತಿಗೆ ತಲುಪಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನ ಎರಡನೆ ಸುತ್ತಿನ ಪಂದ್ಯದಲ್ಲಿ 59ರ ಪ್ರಾಯದ ಆಡ್ಲೆರ್ ವೀಕ್ಷಕವಿವರಣೆಯ ವೇಳೆ ‘‘ಸ್ಟೆಫಾನಿ ಮೊದಲ ಸರ್ವ್‌ನ್ನು ತಪ್ಪಿಸಿಕೊಂಡಿದ್ದಾರೆ. ವೀನಸ್ ಅವರ ಮೇಲೆ ಪ್ರಾಬಲ್ಯ ಸಾಧಿಸುತ್ತಿದ್ದಾರೆ. ಟೆನಿಸ್ ಕೋರ್ಟ್‌ನಲ್ಲಿ ವೀನಸ್ ಚಲನೆಯ ಮೇಲೆ ಗೊರಿಲ್ಲಾ ಪ್ರಭಾವವಿದೆ’’ ಎಂದು ಹೇಳಿದ್ದರು.

ವೀನಸ್‌ರನ್ನು ಗೊರಿಲ್ಲಾಗೆ ಹೋಲಿಕೆ ಮಾಡಿರುವ ಆಡ್ಲೆರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶವ್ಯಕ್ತವಾಯಿತು. ತನ್ನ ಹೇಳಿಕೆಗೆ ಕ್ಷಮೆ ಕೋರಿದ ಆಡ್ಲೆರ್, ತಾನು ಸ್ವಾತಂತ್ರ ಹೋರಾಟಗಾರರು ಅಥವಾ ಬಂಡಾಯ ಬಣಗಳನ್ನು ವರ್ಣಿಸುವ ವೇಳೆ ಗೊರಿಲ್ಲಾ ಪದವನ್ನು ಬಳಸಿದ್ದೇನೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X