Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾರ್ಚ್‌ನಲ್ಲಿ ಗರೋಡಿಗಳ ಗುರಿಕಾರರ...

ಮಾರ್ಚ್‌ನಲ್ಲಿ ಗರೋಡಿಗಳ ಗುರಿಕಾರರ ಸನ್ಮಾನ- ಸಮ್ಮಿಲನ

ವಾರ್ತಾಭಾರತಿವಾರ್ತಾಭಾರತಿ20 Jan 2017 11:04 PM IST
share

ಉಡುಪಿ, ಜ.20: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ಗರೋಡಿಗಳ ಗುರಿಕಾರರ ಸನ್ಮಾನ- ಸಮ್ಮಿಲನ ಕಾರ್ಯಕ್ರಮವನ್ನು ಮಾರ್ಚ್ ಅಂತ್ಯದೊಳಗೆ ನಡೆಸಲು ನಿರ್ಧರಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಪ್ರವೀಣ್ ಎಂ.ಪೂಜಾರಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗರೋಡಿಯ ನಿರಂತರ ಏಳಿಗೆಗಾಗಿ ಮತ್ತು ದಿನನಿತ್ಯದ ಆಗುಹೋಗುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವ ಸೇವಾ ಮನೋಭಾವದ ಆಡಳಿತ ಮುಖ್ಯಸ್ಥರು, ಗುರಿಕಾರರು, ಅರ್ಚಕರು, ಕೂಡುಕಟ್ಟಿನವರೆಲ್ಲರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದರು.

 ಜಿಲ್ಲೆಯಲ್ಲಿ 236 ಗರೋಡಿಗಳಿದ್ದು, ಸುಮಾರು 2 ಸಾವಿರ ಗುರಿಕಾರರಿ ದ್ದಾರೆ. ಗರೋಡಿಗಳ ಜೀವಾಳವಾಗಿರುವ ಇವರು ಸಾಂಸ್ಕೃತಿಕ ರಾಯಭಾರಿ ಗಳು. ಸಾಮರಸ್ಯದ ಕೇಂದ್ರವಾಗಿರುವ ಗರೋಡಿ ಅಸ್ತಿತ್ವದಲ್ಲಿರುವುದು ಗುರಿಕಾರರಿಂದ ಎಂದು ವೇದಿಕೆಯ ಗೌರವಾಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ದಿವಾಕರ್ ಸನಿಲ್, ಮಹೇಶ್ ಸುವರ್ಣ, ಶರತ್ ಉಪಸ್ಥಿತರಿದ್ದರು.

‘ಬಿಲ್ಲವರ ಭಾವನೆಗೆ ಧಕ್ಕೆ’

ಜ.24ರಂದು ನಡೆಯುವ ಗರಡಿ ಮಹಾಸಮ್ಮೇಳನದ ಕಟೌಟ್‌ನಲ್ಲಿ ದೇವರಂತೆ ಪೂಜಿಸುವ ಕೋಟಿಚೆನ್ನಯ್ಯರ ಫೋಟೋವನ್ನು ತಟ್ಟಿರಾಯನ ರೀತಿಯಲ್ಲಿ ಬಳಸುವ ಮೂಲಕ ಬಿಲ್ಲವರ ಭಾವನೆಗೆ ಧಕ್ಕೆ ಉಂಟು ಮಾಡ ಲಾಗಿದೆ ಎಂದು ಅಚ್ಯುತ ಕಲ್ಮಾಡಿ ಆರೋಪಿಸಿದರು.

ಈ ಮಹಾಸಮ್ಮೇಳನಕ್ಕೂ ಗರಡಿಗೂ ಯಾವುದೇ ಸಂಬಂಧವಿಲ್ಲ. ಗರಡಿ ಗಳಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆಯೇ ಹೊರತು ಅವುಗಳ ಪಾಲ್ಗೊಳ್ಳುವಿಕೆ ಇದರಲ್ಲಿ ಇಲ್ಲ. ಸಮ್ಮೇಳನದಲ್ಲಿ ಭಕ್ತರಿಗೆ ನೋವು ಅಥವಾ ಅವಮಾನ ವಾಗುವ ರೀತಿಯಲ್ಲಿ ವರ್ತಿಸಿದರೆ ಮುಂದೆ ತೀವ್ರ ಪ್ರತಿಭಟನೆ ನಡೆಸಲಾಗು ವುದು ಎಂದು ಅವರು ಎಚ್ಚರಿಕೆ ನೀಡಿದರು.

‘ಕೋಟಿ-ಚೆನ್ನಯರು ದೈವಗಳಲ್ಲ’

ಕೋಟಿ-ಚೆನ್ನಯರನ್ನು ಬಿಲ್ಲವರು ಕುಲದೇವರಂತೆ ಪೂಜಿಸುತ್ತಾರೆ. ಅವರು ದೈವಗಳಲ್ಲ. ದೈವಾರಾಧನೆಯ ನೆಲೆಗಟ್ಟಿನಲ್ಲಿ ಗರೋಡಿಗಳ ಸಮ್ಮೇಳನವಾಗುತ್ತಿ ರುವುದು ಖಂಡನೀಯ. ಎಲ್ಲ ಗರೋಡಿಗಳ ಮಾಹಿತಿಯನ್ನೂ ಪಡೆಯದೆ, ಗುರಿಕಾರರನ್ನು ಸಂಪರ್ಕಿಸದೆ ಸಂಘಟನೆಯೊಂದು ಗರೋಡಿಗಳ ಸಮ್ಮೇಳನ ನಡೆಸುವುದು ಸರಿಯಲ್ಲ. ದೈವಗಳ ಬಗ್ಗೆ ಸಮ್ಮೇಳನ ನಡೆಸಲಿ. ತುಳುನಾಡ ಗರೋಡಿಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗಬೇಕಿದೆ. ಸಮ್ಮೇಳನದ ಹೆಸರಿನಲ್ಲಿರುವ ಬ್ಯಾನರ್, ಕಟೌಟ್‌ಗಳಲ್ಲಿ ಕೋಟಿ-ಚೆನ್ನಯರನ್ನು ಪ್ರತ್ಯೇಕವಾಗಿ ಬಿಂಬಿಸಿ ಅವಹೇಳನ ಮಾಡಿರುವುದೂ ಖಂಡನೀಯವಾಗಿದೆ ಎಂದು ಅಚ್ಯುತ ಅಮೀನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X