ಸಂತೋಷ್ ಕೊಲೆಪ್ರಕರಣ: ಆರು ಸಿಪಿಎಂ ಕಾರ್ಯಕರ್ತರ ಬಂಧನ

ಕಣ್ಣೂರ್, ಜ.21: ಬಿಜೆಪಿ ಕಾರ್ಯಕರ್ತ ಅಂಡಲ್ಲೂರ್ ಸಂತೋಷ್ ಕೊಲೆಪ್ರಕರಣದಲ್ಲಿ ಆರು ಮಂದಿ ಸಿಪಿಎಂ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಧರ್ಮಡಂದ ಮಿಥುನ್, ರೋಹಿತ್ ,ಪ್ರಜುಲ್,ಶಮೀಂ, ಅಜೇಶ್, ರಿಜೇಶ್ ಬಂಧಿಸಲಾದ ಆರೋಪಿಗಳು. ಪಾನೂರ್ ಸರ್ಕಲ್ ಇನ್ಸ್ಪೆಕ್ಟರ್ ಫಿಲಿಪ್ರ ನೇತೃತ್ವದಲ್ಲಿ ವಿಶೇಷ ಸ್ಕ್ವಾಡ್ ಬಂಧಿಸಿದ್ದು, ಈ ಹಿಂದೆಯೇ ಇವರನ್ನು ಬಿಜೆಪಿ ಕಾರ್ಯಕರ್ತ ರಜೀಶ್ನ ದೂರಿನಲ್ಲಿ ಪೊಲೀಸರು ಕಸ್ಟಡಿಗೆ ಪಡೆದಿದ್ದರು ಎಂದು ವರದಿಯಾಗಿದೆ.
ಬುಧವಾರ ರಾತ್ರಿ ಹತ್ತೂವರೆಗಂಟೆಗೆ ಸಂತೋಷ್ರಿಗೆ ಇರಿತವಾಗಿತ್ತು. ನೆರೆಯವರು ಮತ್ತು ಪೊಲೀಸರು ಅವರನ್ನು ತಲಶ್ಶೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಆಸ್ಪತ್ರೆಯಲ್ಲಿ ಅಸುನೀಗಿದ್ದರು ಎಂದು ವರದಿತಿಳಿಸಿದೆ.
Next Story





