ಜೇಸಿಐ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ
ಮೂಡುಬಿದಿರೆ , ಜ.21 : ಜೇಸಿಐ ಮೂಡುಬಿದಿರೆ ತ್ರಿಭುವನ್ ಹಾಗೂ ಆರಕ್ಷಕ ಠಾಣೆ ಮೂಡುಬಿದಿರೆ ಸಂಯುಕ್ತ ಆಶ್ರಯದಲ್ಲಿ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಚಾಲನೆ ನೀಡಿದರು.
ಎಸ್.ಎನ್.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಜೆ.ಜೆ ಪಿಂಟೋ ಸಪ್ತಾಹಕ್ಕೆ ಚಾಲನೆ ನೀಡಿದರು.
ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕ ದೇಜಪ್ಪ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.
ಜೇಸಿಐ ಮೂಡುಬಿದಿರೆ ತ್ರಿಭುವನ್ನ ಅಧ್ಯಕ್ಷ ಸಂತೋಷ್ ಕುಮಾರ್ ಆರ್.ಎಲ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ತರಬೇತುದಾರ ಧೀರೇಂದ್ರ ಜೈನ್, ಲೆಕ್ಕಪರಿಶೋಧಕ ಉಮೇಶ್ ರಾವ್ ಮುಖ್ಯ ಅತಿಥಿಯಾಗಿದ್ದರು.
ಜೇಸಿರೇಟ್ ಅಧ್ಯಕ್ಷೆ ಶ್ವೇತಾ ಜೈನ್, ಜೇಸಿಐ ಕಾರ್ಯದರ್ಶಿ ಸಂತೋಷ್ ಕುಮಾರ್, ಸಪ್ತಾಹದ ನಿರ್ದೇಶಕಿ ಸಂಗೀತಾ ಪ್ರಭು, ಕಾರ್ಯಕ್ರಮದ ಯೋಜನಾ ನಿರ್ದೇಶಕ ರಾಮ್ ಪ್ರಸಾದ್, ಕೋಶಾಧಿಕಾರಿ ಗುರುಪ್ರಸಾದ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
Next Story