Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡ ಶಾಲೆಗಳು ಎಂದಿಗೂ ಸೋಲಬಾರದು :...

ಕನ್ನಡ ಶಾಲೆಗಳು ಎಂದಿಗೂ ಸೋಲಬಾರದು : ಡಾ.ಮೋಹನ್ ಆಳ್ವ

ಹರೇಕಳ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ಸ್ವರ್ಣ ಸಂಭ್ರಮ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ21 Jan 2017 7:13 PM IST
share
ಕನ್ನಡ ಶಾಲೆಗಳು ಎಂದಿಗೂ ಸೋಲಬಾರದು : ಡಾ.ಮೋಹನ್ ಆಳ್ವ

ಕೊಣಾಜೆ , ಜ.21 : ಇಂದು ಕನ್ನಡ ಮಾಧ್ಯಮ ಶಾಲೆಗಳ ಪ್ರಭಾವ ಕಡಿಮೆಯಾಗುತ್ತಿದ್ದು,ಒಂದು ವೇಳೆ ಕನ್ನಡ ಮಾಧ್ಯಮ ಶಾಲೆಗಳು ಸೋತರೆ ನಾವು, ನಮ್ಮ ಸಂಸ್ಕೃತಿ ಸೋತಂತೆ. ನಾವುಗಳು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯ ಇದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಅವರು ಹೇಳಿದರು.

ಅವರು ಶುಕ್ರವಾರದಂದು ಪಾವೂರು-ಹರೇಕಳದ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ಸ್ವರ್ಣ ಮಹೋತ್ಸವದ ಸಮಾಪನ ಕಾರ್ಯಕ್ರಮದಲ್ಲಿ ಶಾಲೆಯ"ಸ್ವರ್ಣ ಕಲಶ"ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕನ್ನಡ ಶಾಲೆಗಳನ್ನು ಕಟ್ಟಿ ನಾವಿಂದು 50,70 ವರುಷಗಳನ್ನು ಪೂರೈಸಿದ್ದೇವೆಯೇ ಹೊರತು ಅದನ್ನು ಕಾಲ,ಕಾಲಕ್ಕೆ ತಕ್ಕಂತೆ ಮೇಲ್ದರ್ಜೆಗೇರಿಸುವ ಪ್ರಾಮಾಣಿಕ ಪ್ರಯತ್ನವೇ ನಡೆಸಿಲ್ಲ. ಕನ್ನಡ ಮಾಧ್ಯಮಗಳಲ್ಲಿ ಸರಕಾರಿ ಮತ್ತು ಅನುದಾನಿತ ಎಂಬ ಪದಗಳ ಬಳಕೆಯೇ ದೊಡ್ಡ ಕಳಂಕವಾಗಿದೆ. ರಾಜ್ಯ ಸರಕಾರವು ಕನ್ನಡ ಮಾಧ್ಯಮ ಶಾಲೆಗಳಿಗೆ ವರುಷಕ್ಕೆ 17,700 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದ್ದರೂ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಯತ್ನ ಮಾಡಿಲ್ಲ .  ಪರಿಣಾಮ ಪೋಷಕರು ಖಾಸಗಿ ವಿದ್ಯಾಸಂಸ್ಥೆಗಳಿಗೇ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ ಎಂದು ಹೇಳಿದರು.
 

ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದ ಶ್ರೀಕ್ಷೇತ್ರ ಒಡಿಯೂರಿನ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಭಾರತೀಯ ಸಂಸ್ಕೃತಿಯು ಆಧ್ಯಾತ್ಮಿಕ ನೆಲೆಯಲ್ಲಿ ನಿಂತಿದೆ. ವೃತ್ತಿಗಾಗಿ ಶಿಕ್ಷಣವು ಅಗತ್ಯವಾಗಿದ್ದರೆ,ಪರಿಪೂರ್ಣ ವ್ಯಕ್ತಿತ್ವಕ್ಕಾಗಿ ಮೌಲ್ಯಾಧರಿತ ಆಧ್ಯಾತ್ಮಿಕ ಶಿಕ್ಷಣ ಅತ್ಯಗತ್ಯವಾಗಿದೆ.ಆಧುನಿಕತೆಯ ಜತೆಗೆ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಸ್ವರ್ಣ ಮಹೋತ್ಸವದ ಅಂಗವಾಗಿ ದಾನಿಗಳ ಸಹಕಾರದಲ್ಲಿ ಶಾಲಾ ಆವರಣದಲ್ಲಿ ನಿರ್ಮಿಸಲಾದ ನೂತನ ಆಧುನಿಕ ಶೌಚಾಲಯವನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕರಾದ ಅಜಿತ್ ಕುಮಾರ್ ರೈ ಮಾಲಾಡಿ ಅವರು ಉದ್ಘಾಟಿಸಿದರು.

ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಡಿಸೋಜಾ,ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಸಂತ ಸೆಬೆಸ್ತಿಯನ್ ಧರ್ಮಕೇಂದ್ರ ಪೆರ್ಮನ್ನೂರಿನ ಧರ್ಮಗುರುಗಳಾದ ರೆ.ಫಾ.ಜೆ.ಬಿ ಸಲ್ದಾನ, ಶ್ರೀ ದೇವಿ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸದಾನಂದ ಶೆಟ್ಟಿ, ಮುಂಬೈ ಕೈಗಾರಿಕೋದ್ಯಮಿ ವಿವೇಕ್ ಶೆಟ್ಟಿ ಬೊಳ್ಯಗುತ್ತು, ಕರ್ನಾಟಕ ಬ್ಯಾಂಕ್ ಪ್ರದಾನ ಕಚೇರಿ ಜನರಲ್ ಮ್ಯಾನೇಜರ್ ಚಂದ್ರಶೇಖರ್ ರಾವ್ ಬಿ, ಬಶೀರ್ ಕೂಳೂರು, ಸ್ಥಳೀಯ ಮುಖಂಡರಾದ ವಿಜಯ್ ಶಂಕರ್ ರೈ, ಕೆ.ಎನ್ ಆಳ್ವ, ಪ್ರಸಾದ್ ರೈ ಕಳ್ಳಿಮಾರ್, ಜಗಜೀವನ್ ಶೆಟ್ಟಿ, ಜಯರಾಮ ಆಳ್ವ, ಕಡೆಂಜ ಸೋಮಶೇಖರ್ ಚೌಟ, ಮನೋಜ್ ಕುಮಾರ್ ಹೆಗಡೆ, ಭರತ್ ರಾಜ್ ಶೆಟ್ಟಿ ಪಜೀರುಗುತ್ತು, ರಾಜೇಶ್ ಶೆಟ್ಟಿ ಪಜೀರುಗುತ್ತು, ಶಾಲಾ ಮುಖ್ಯೋಪಾಧ್ಯಾಯರಾದ ರವೀಂದ್ರ ರೈ ಹರೇಕಳ,ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಮೊದಲಾದವರು ಇದ್ದರು.

ಕಾರ್ಯಕ್ರಮದಲ್ಲಿ ರಾಮಕೃಷ್ಣ ಶಾಲೆಯ ನಿವೃತ್ತ ಮುಖ್ಯೋಪಾಧ್ಯಯರು ಹಾಗೂ ಹಿರಿಯ ಸಾಧಕರನ್ನು ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X