Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರಂಭಗೊಳ್ಳುವ ಮುನ್ನವೇ ಅಂತ್ಯಗೊಂಡ...

ಆರಂಭಗೊಳ್ಳುವ ಮುನ್ನವೇ ಅಂತ್ಯಗೊಂಡ ಬಿಜೆಪಿಗೆ ತಿವಾರಿ ಸೇರ್ಪಡೆ ಅಧ್ಯಾಯ !

ವಾರ್ತಾಭಾರತಿವಾರ್ತಾಭಾರತಿ22 Jan 2017 3:38 PM IST
share
ಆರಂಭಗೊಳ್ಳುವ ಮುನ್ನವೇ ಅಂತ್ಯಗೊಂಡ ಬಿಜೆಪಿಗೆ ತಿವಾರಿ ಸೇರ್ಪಡೆ ಅಧ್ಯಾಯ !

ಹೊಸದಿಲ್ಲಿ,ಜ.22: ಕಾಂಗ್ರೆಸ್‌ನ ವಯೋವೃದ್ಧ ನಾಯಕ, ಉತ್ತರಾಖಂಡ-ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಆಂಧ್ರಪ್ರದೇಶದ ಮಾಜಿ ರಾಜ್ಯಪಾಲ ನಾರಾಯಣ ದತ್ ತಿವಾರಿ ಅವರು ಬಿಜೆಪಿಗೆ ಸೇರುವ ಅಧ್ಯಾಯ ಆರಂಭಗೊಳ್ಳುವ ಮೊದಲೇ ಅಂತ್ಯಗೊಂಡಿದೆ. ಅವರ ಪುತ್ರ ರೋಹಿತ್ ಶೇಖರ್‌ಗೆ ಉತ್ತರಾಖಂಡದಲ್ಲಿ ಹಲ್ದಾನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯುವ ಸಾಧ್ಯತೆಯೂ ಇತ್ತು. ಆದರೆ ಶನಿವಾರ ತಡರಾತ್ರಿ ಬಿಜೆಪಿಯು ಬಿಡುಗಡೆಗೊಳಿಸಿರುವ ಉತ್ತರಾಖಂಡ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಎರಡನೇ ಮತ್ತು ಅಂತಿಮ ಪಟ್ಟಿಯಲ್ಲಿ ರೋಹಿತ ಶೇಖರ್ ಹೆಸರೇ ಇಲ್ಲ!

ಬುಧವಾರ ತಿವಾರಿಯವರು ತನ್ನ ಪತ್ನಿ ಉಜ್ವಲಾ ಮತ್ತು ಪುತ್ರ ರೋಹಿತ್ ಜೊತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನುಭೇಟಿಯಾಗಿದ್ದರು. ಅದರ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿಯ ಮಾನ ಹರಾಜಾಗತೊಡಗಿತ್ತು. ನೆಟ್ಟಿಗರು ಟೀಕಾಸ್ತ್ರಗಳ ಮೂಲಕ ಪಕ್ಷವನ್ನು ತುಂಬ,ತುಂಬ ಗೇಲಿ ಮಾಡಿದ್ದರು. 91ರ ವೃದ್ಧ ತಿವಾರಿಯವರನ್ನು ಪಕ್ಷಕ್ಕೆ ಸೇರಿಸಿಕೊಂಡು ಯುವಕರಿಗೆ ಯಾವ ಸಂದೇಶವನ್ನು ನೀಡಲು ಬಿಜೆಪಿಯು ಬಯಸುತ್ತಿದೆ ಎಂದೂ ಹಲವರು ಪ್ರಶ್ನಿಸಿದ್ದರು.

ಆದರೆ ಸಂಜೆಯಾಗುತ್ತಿದ್ದಂತೆ ಬಿಜೆಪಿಯು ತಿವಾರಿ ಪಕ್ಷಕ್ಕೆ ಸೇರಿಲ್ಲ ಮತ್ತು ಅವರ ಪುತ್ರ ಮಾತ್ರ ಸೇರ್ಪಡೆಗೊಂಡಿದ್ದಾರೆ ಎಂದು ಸಮಜಾಯಿಷಿ ನೀಡಿತ್ತು. ರೋಹಿತ್‌ರನ್ನು ಹಲ್ದಾನಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಬಹುದು ಎಂದೂ ಬಿಜೆಪಿ ಮೂಲಗಳು ತಿಳಿಸಿದ್ದವು. ಖುದ್ದು ತಿವಾರಿಯವರೇ ಬಿಜೆಪಿಯನ್ನು ಬೆಂಬಲಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು ಎಂದು ಪಕ್ಷದ ನಾಯಕರು ಹೇಳಿಕೊಂಡಿದ್ದರು.

ಆದರೆ ಶನಿವಾರ ತಡರಾತ್ರಿ ಪ್ರಕಟಿಸಲಾದ ಉತ್ತರಾಖಂಡ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಲ್ದಾನಿ ಕ್ಷೇತ್ರದಲ್ಲಿ ಜೋಗೇಂದ್ರ ರೌತೇಲಾ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ರಾಜ್ಯದಲ್ಲಿಯ ಎಲ್ಲ 70 ವಿಧಾನಸಭಾ ಸ್ಥಾನಗಳಿಗ ತನ್ನ ಅಭ್ಯರ್ಥಿಗಳನ್ನು ಬಿಜೆಪಿಯು ಘೋಷಿಸಿದೆ.

ತಿವಾರಿ ಸೇರ್ಪಡೆ ವಿಷಯ ಪಕ್ಷಕ್ಕೆ ಕಿರಿಕಿರಿಯುಂಟು ಮಾಡಿದ್ದರಿಂದ ಅವರನ್ನು ದೂರವೇ ಇಡಲು ಬಿಜೆಪಿಯು ನಿರ್ಧರಿಸಿದೆ ಎನ್ನಲಾಗಿದೆ.

ತಿವಾರಿಯವರ ನಡೆ ಅವರ ಪರಿವಾರದಲ್ಲಿಯೂ ಅಸಂತೋಷಕ್ಕೆ ಕಾರಣವಾಗಿದೆ. ಜೀವನವಿಡೀ ಕಾಂಗ್ರೆಸ್‌ನ ಸೇವೆ ಮಾಡಿದ ಬಳಿಕ ತಿವಾರಿಯವರು ಈ ವಯಸ್ಸಿನಲ್ಲಿ ಪಕ್ಷವನ್ನು ಬಿಡಲು ಹೇಗೆ ಸಾದ್ಯ ಎಂದೂ ಅವರ ಪರಿವಾರದ ಕೆಲವು ಸದಸ್ಯರು ಬಹಿರಂಗವಾಗಿಯೇ ಕಳವಳವನ್ನು ವ್ಯಕ್ತಪಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X