Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜನ ಓಲೈಕೆಯ ನೀತಿ ಅಪಾಯಕಾರಿ : ಪೋಪ್

ಜನ ಓಲೈಕೆಯ ನೀತಿ ಅಪಾಯಕಾರಿ : ಪೋಪ್

ಹಿಟ್ಲರ್ ಉದಾಹರಿಸಿ ಟ್ರಂಪ್ ಗೆ ಪರೋಕ್ಷ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ22 Jan 2017 11:34 PM IST
share
ಜನ ಓಲೈಕೆಯ ನೀತಿ ಅಪಾಯಕಾರಿ : ಪೋಪ್

ವ್ಯಾಟಿಕನ್,ಜ.22: ‘ಜನಮರುಳು’ ರಾಜಕೀಯವು, ಅಡಾಲ್ಫ್ ಹಿಟ್ಲರ್‌ನಂತಹ ‘ಉದ್ಧಾರಕರ’ ಆಯ್ಕೆಗೆ ಕಾರಣವಾಗುವುದೆಂದು ಕ್ರೈಸ್ತರ ಪರಮೋಚ್ಛ ಧಾರ್ಮಿಕ ನಾಯಕ ಪೋಪ್ ಫ್ರಾನ್ಸಿಸ್ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಸ್ಪಾನಿಶ್ ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ವಿದೇಶಿಯರರು, ನಿರಾಶ್ರಿತರು ವಲಸೆಯನ್ನು ತಡೆಯಲು ಗೋಡೆಗಳನ್ನು ನಿರ್ಮಿಸುವ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಚಿಂತನೆಯನ್ನು ಖಂಡಿಸಿದರು.ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವನ್ನು ಅವರು 1933ರಲ್ಲಿ ಜರ್ಮನಿಯಲ್ಲಿ ಹಿಟ್ಲರ್‌ನ ಗೆಲುವಿಗೆ ಹೋಲಿಸಿದರು.

‘‘ಆ ಕಾಲದಲ್ಲಿ ಜರ್ಮನಿಯು ತನಗೆ ಅಸ್ತಿತ್ವವನ್ನು ಮರಳಿ ತಂದುಕೊಡಬಲ್ಲ ನಾಯಕನಿಗಾಗಿ ಎದುರುನೋಡುತ್ತಿತ್ತು. ಆಗ ಅವರಿಗೆ ನಾನದನ್ನು ಸಾಧಿಸಬಲ್ಲೆ ಎನ್ನುವ ಹಿಟ್ಲರ್ ಎಂಬಾತ ಸಿಕ್ಕಿದ’’ ಎಂದರು. ಹಿಟ್ಲರ್ ಅಧಿಕಾರವನ್ನು ಕಸಿಯಲಿಲ್ಲ. ಆತ ಜನರಿಂದಲೇ ಆಯ್ಕೆಯಾದ. ಆನಂತರ ಆತ ತನ್ನ ಜನರನ್ನೇ ನಾಶಪಡಿಸಿದನೆಂದು ಅವರು ಹೇಳಿದರು.

‘‘ಆ ಸಮಯದಲ್ಲಿ ಜರ್ಮನರು ಕೂಡಾ ಇತರರು ತಮ್ಮ ಅಸ್ತಿತ್ವವನ್ನು ಕಸಿಯಕೊಳ್ಳಬಾರದೆಂಬ ಆತಂಕದಿಂದ ಗೋಡೆಗಳನ್ನು ಹಾಗೂ ತಂತಿಬೇಲಿಗಳನ್ನು ನಿರ್ಮಿಸಿದ್ದರು. ಹಿಟ್ಲರ್ ಜರ್ಮನರಿಗೆ ವಿರೂಪಗೊಂಡ ‘ಗುರುತನ್ನು’ ತೋರಿಸಿಕೊಟ್ಟ. ಇದರಿಂದ ಏನೇನಾಯಿತೆಂದು ನಮಗೆಲ್ಲರಿಗೂ ಗೊತ್ತಿದೆಯೆಂದು ಪೋಪ್ ಫ್ರಾನ್ಸಿಸ್ ಮಾರ್ಮಿಕವಾಗಿ ಹೇಳಿದರು.

ಟ್ರಂಪ್ ಅವರ ವಿವಾದಾತ್ಮಕ ನೀತಿಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ‘‘ಆತ ಏನು ಮಾಡಲಿದ್ದಾನೆಂದು ನೋಡೋಣ. ಆನಂತರ ನಾವು ವೌಲ್ಯಮಾಪನ ಮಾಡೋಣು’’ ಎಂದರು.

ತಾನು ಅಧ್ಯಕ್ಷನಾದಲ್ಲಿ ಮೆಕ್ಸಿಕೊ ವಲಸಿಗರ ವಲಸೆಯನ್ನು ತಡೆಯುವುದಾಗಿ ಟ್ರಂಪ್ ಕಳೆದ ಫೆಬ್ರವರಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಘೋಷಿಸಿದಾಗ, ಪೋಪ್ ಅದನ್ನು ಬಲವಾಗಿ ಖಂಡಿಸಿದ್ದರು. ‘‘ ಯಾವ ವ್ಯಕ್ತಿಯು ಸೇತುವೆಯ ಬದಲು ಗೋಡೆಗಳನ್ನು ನಿರ್ಮಿಸುವ ಯೋಚಿಸುತ್ತಾನೋ, ಆತ ಕ್ರೈಸ್ತನಲ್ಲ’’ ಎಂದು ಅವರು, ಟ್ರಂಪ್ ವಿರುದ್ಧ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X