Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂರು ಹೆದ್ದಾರಿ ಸುರಕ್ಷಾ ಗಸ್ತು...

ಮೂರು ಹೆದ್ದಾರಿ ಸುರಕ್ಷಾ ಗಸ್ತು ವಾಹನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Jan 2017 7:54 PM IST
share
ಮೂರು ಹೆದ್ದಾರಿ ಸುರಕ್ಷಾ ಗಸ್ತು ವಾಹನಕ್ಕೆ ಚಾಲನೆ

ಉಡುಪಿ, ಜ.23: ಹೆದ್ದಾರಿ ಸುರಕ್ಷೆ ಯೋಜನೆಯಡಿ ಉಡುಪಿ ಜಿಲ್ಲಾ ಪೊಲೀಸ್ ಘಟಕಕ್ಕೆ ರಾಜ್ಯ ಸರಕಾರ ಒದಗಿಸಿದ ಮೂರು ಹೊಸ ಹೆದ್ದಾರಿ ಗಸ್ತು ಇನೋವಾ ವಾಹನಗಳಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ. ಬಾಲಕೃಷ್ಣ ಇಂದು ಎಸ್ಪಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.

ಈ ಯೋಜನೆಯಡಿ ರಾಜ್ಯಾದ್ಯಂತ ಒಟ್ಟು 100 ವಾಹನಗಳು ಮಂಜೂ ರಾಗಿದ್ದು, ಅದರಲ್ಲಿ ಮೂರನ್ನು ಉಡುಪಿ ಜಿಲ್ಲೆಗೆ ಒದಗಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾತ್ರ ಕಾರ್ಯಾಚರಿಸಲಿರುವ ಈ ಮೂರು ವಾಹನಗಳು, ಜಿಲ್ಲೆಯ ಗಡಿ ಪ್ರದೇಶವಾಗಿರುವ ಹೆಜಮಾಡಿಯಿಂದ ಉದ್ಯಾವರವರೆಗೆ, ಉದ್ಯಾವರದಿಂದ ಕುಂಭಾಶಿಯವರೆಗೆ, ಕುಂಭಾಶಿಯಿಂದ ಶಿರೂರು ಗಡಿಯ ವರೆಗೆ ಗಸ್ತು ತಿರುಗಲಿವೆ. ಇವುಗಳು ಜಿಲ್ಲಾ ನಿಯಂತ್ರಣ ಕೊಠಡಿಯ ಹತೋಟಿಯಲ್ಲಿರುತ್ತವೆ ಎಂದು ಎಸ್ಪಿ ಬಾಲಕೃಷ್ಣ ತಿಳಿಸಿದರು.

ಈ ವಾಹನಗಳ ಸಂಪೂರ್ಣ ಮೇಲುಸ್ತುವಾರಿಯನ್ನು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಿರ್ವಹಿಸಲಿದ್ದು, ಆಯಾ ಸರಹದ್ದಿನ ಸಹಾಯಕ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಉಸ್ತುವಾರಿ ನೋಡಿ ಕೊಳ್ಳಲಿದ್ದಾರೆ. ಒಂದು ವಾಹನದಲ್ಲಿ ಚಾಲಕ, ಓರ್ವ ಸಹಾಯಕ ಪೊಲೀಸ್ ಉಪನಿರೀಕ್ಷಕರು ಹಾಗೂ ಓರ್ವ ಕಾನ್‌ಸ್ಟೇಬಲ್ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ವಾಹನವು ದಿನದ 24ಗಂಟೆಗಳ ಕಾಲವೂ ಕಾರ್ಯ ಪ್ರವೃತ್ತವಾಗಿರುತ್ತದೆ ಎಂದರು.

ವಾಹನದ ವೈಶಿಷ್ಯತೆ: ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಫೋಲ್ಡಿಂಗ್ ಸ್ಟ್ರೆಚರ್, ರೆಕಾರ್ಡಿಂಗ್ ಸೌಲಭ್ಯದ ಜೊತೆಗೆ 180ಡಿಗ್ರಿ ತಿರುಗುವ ಆಧುನಿಕ ತಂತ್ರ ಜ್ಞಾನ ಹೊಂದಿರುವ ಸಿಸಿ ಕೆಮೆರಾ, 180 ಡಿಗ್ರಿ ತಿರುಗುವ ಗರಿಷ್ಠ ಸಾಮರ್ಥ್ಯ ದ ಟಾಪ್ ಸರ್ಚ್‌ಲೈಟ್, ಮೂರು ಬಣ್ಣದ ಬಾರ್‌ಲೈಟ್ ಸೌಲಭ್ಯ, ಬಹು ಶಬ್ದಗಳನ್ನೊಳಗೊಂಡ ಪಬ್ಲಿಕ್ ಅಡ್ರೆಸ್ಸಿಂಗ್ ಸಿಸ್ಟಮ್, ಪವರ್ ಬ್ಯಾಕ್‌ಅಪ್ ನೊಂದಿಗೆ ಇನ್ವರ್ಟರ್ ಸೌಲಭ್ಯ, ಜಿಪಿಆರ್‌ಎಸ್ ಜಿಪಿಎಸ್ ಸೌಲಭ್ಯ ಹಾಗೂ ವಯರ್‌ಲೆಸ್ ಸೌಲಭ್ಯವನ್ನು ಈ ವಾಹನ ಹೊಂದಿದೆ ಎಂದು ಎಸ್ಪಿ ತಿಳಿಸಿದರು.

ರಸ್ತೆ ಅಪಘಾತ ಸಂಭವಿಸಿದರೆ ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಸ್ಪಂದಿಸುವ ಹಾಗೂ ಆಸ್ಪತ್ರೆಗೆ ಸಾಗಿಸುವ ಕೆಲಸವೂ ಮಾಡುತ್ತದೆ. ಇದರಲ್ಲಿ ತರಬೇತಿ ಪಡೆದ ಸಿಬ್ಬಂದಿಗಳು ಇರುವುದರಿಂದ ತಕ್ಷಣ ಬೇಕಾದ ಪ್ರಥಮ ಚಿಕಿತ್ಸೆಯನ್ನು ಗಾಯಾಳುಗಳಿಗೆ ನೀಡಲಿದ್ದಾರೆ. ಅಪಘಾತದ ವೇಳೆ ಮುಕ್ತ ಸಂಚಾರಕ್ಕೆ ಈ ವಾಹನದ ಸಿಬ್ಬಂದಿಗಳು ಕ್ರಮ ಕೈಗೊಳ್ಳುತ್ತಾರೆ. ಹೆದ್ದಾರಿಗಳಲ್ಲಿ ಸಂಭವಿಸಬಹುದಾದಂತಹ ದರೋಡೆ, ಸುಲಿಗೆ, ಸರಗಳ್ಳತನ, ಅಕ್ರಮ ಸಾಗಾಣಿಕೆ ಮುಂತಾದ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವಾಹನಗಳು ಕಾರ್ಯಾಚರಿಸಲಿವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

ರಾ.ಹೆ.ಯಲ್ಲಿ 53 ಕಡೆ ಸಿಸಿ ಕ್ಯಾಮೆರಾ

ರಾಜ್ಯ ಸರಕಾರವು ಕರಾವಳಿ ಕರ್ನಾಟಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಯೋಜನೆ ಹಾಕಿಕೊಂಡಿದ್ದು, ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಹೆದ್ದಾರಿಯ 53 ಕಡೆಗಳಲ್ಲಿ ಕ್ಯಾಮೆರಾ ಅಳವಡಿಸಲು ಮಂಜೂರಾತಿ ನೀಡಿದೆ ಎಂದು ಎಸ್ಪಿ ಕೆ.ಟಿ.ಬಾಲಕೃಷ್ಣ ತಿಳಿಸಿದರು.

ಅಪರಾಧ ಹಾಗೂ ಸಂಚಾರ ನಿಯಮ ಉಲ್ಲಂಘನೆಯನ್ನು ನಿಯಂತ್ರಿಸುವ ಉದ್ದೇಶದೊಂದಿಗೆ ಅತ್ಯಾಧುನಿಕ ಹಾಗೂ ಹೈಡೆಫಿನೇಶನ್ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಈ ಕ್ಯಾಮೆರಾ ವಾಹನದ ನಂಬರ್ ಮಾತ್ರವಲ್ಲದೆ ಅದರೊಳಗೆ ಕುಳಿತವರ ಚಿತ್ರೀಕರಣ ಕೂಡ ಮಾಡುತ್ತದೆ. ಇದರಿಂದ ಅಪ ರಾಧ ಎಸಗಿ ಪರಾರಿಯಾಗುವವರನ್ನು ಗುರುತಿಸಬಹುದಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X