Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಜಿ ಶಾಸಕ ಕುಮಾರಸ್ವಾಮಿಗೆ ಪತ್ನಿಯಿಂದ...

ಮಾಜಿ ಶಾಸಕ ಕುಮಾರಸ್ವಾಮಿಗೆ ಪತ್ನಿಯಿಂದ ನೋಟಿಸ್

ಜೀವನಾಂಶಕ್ಕಾಗಿ ದಾವೆ ಹೂಡಿದ ಪತ್ನಿ ಸವಿತಾ

ವಾರ್ತಾಭಾರತಿವಾರ್ತಾಭಾರತಿ23 Jan 2017 11:01 PM IST
share
ಮಾಜಿ ಶಾಸಕ ಕುಮಾರಸ್ವಾಮಿಗೆ ಪತ್ನಿಯಿಂದ ನೋಟಿಸ್

ಮೂಡಿಗೆರೆ, ಜ.23: ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮತ್ತು ಸವಿತಾ ಅವರ ದಾಂಪತ್ಯ ಜೀವನದಲ್ಲಿ ಮತ್ತೆ ಬಿರುಕು ಬಿಟ್ಟಿದ್ದು, ಸವಿತಾ ಕುಮಾರಸ್ವಾಮಿ ಅವರು ಜೀವನಾಂಶ, ಆಸ್ತಿ ಮತ್ತು ನ್ಯಾಯಾಲಯದ ವೆಚ್ಚ ಇವುಗಳನ್ನು ಕೋರಿ ಮೈಸೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.


ಆಸ್ತಿಯ ಪಾಲು 2.50 ಕೋಟಿ ರೂ., ತಿಂಗಳ ಜೀವನಾಂಶ 1.50 ಲಕ್ಷ ರೂ., ಕೋರ್ಟ್ ವೆಚ್ಚ 5 ಲಕ್ಷ ರೂ. ನೀಡುವಂತೆ ತಮ್ಮ ವಕೀಲರ ಮೂಲಕ ಮೈಸೂರಿನಲ್ಲಿ ದಾವೆ ಹೂಡಿದ್ದಾರೆ.


ಈ ಸಂಬಂಧ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜ.18ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಮೂಲಕ ಮಾಜಿ ಶಾಸಕರ ದಾಂಪತ್ಯ ಕಲಹ ಕೋರ್ಟಿಗೆ ವಿಚ್ಛೇದನಕ್ಕಾಗಿ ಮೊರೆ ಹೋದಂತಾಗಿದೆ.
ಎಂ.ಪಿ.ಕುಮಾರಸ್ವಾಮಿ ಮತ್ತು ಸವಿತಾ ದಾಂಪತ್ಯ ಜೀವನದಲ್ಲಿ ಹಿಂದಿನಿಂದಲೂ ಅನೇಕ ಬಾರಿ ಬಿರುಕು ಉಂಟಾಗಿತ್ತು. ಇತ್ತೀಚೆಗಷ್ಟೆ ಮೂಡಿಗೆರೆಯ ಕೆಲ ಹಿರಿಯ ಮುಖಂಡರ ಸಮ್ಮುಖದಲ್ಲಿ ರಾಜಿಯಾಗಿದ್ದರು. ಬಳಿಕ ದಂಪತಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಒಂದಾಗಿದ್ದೇವೆ ಎಂದಿದ್ದರು. ಅಲ್ಲದೆ ಹಳ್ಳಿಯಲ್ಲಿ ವಾಸವಾಗಿರಲು ಪತ್ನಿ ಒಪ್ಪದಿದ್ದ ಕಾರಣ ಪಟ್ಟಣದ ಬಿಳಗುಳದಲ್ಲಿ ಸುಸಜ್ಜಿತ ಬಾಡಿಗೆ ಮನೆ ಮಾಡಿ ಸಂಸಾರ ಹೂಡಿದ್ದರು. ತಮ್ಮ ಮೊಬೈಲನ್ನೂ ಪತ್ನಿ ಸುಪರ್ದಿಗೆ ವಹಿಸಿದ್ದರು ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಸವಿತಾ ಅವರು ಕುಮಾರಸ್ವಾಮಿ ಹೆಸರಿನಲ್ಲಿದ್ದ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದಾರೆಂಬ ಕಾರಣಕ್ಕೆ ಮತ್ತೆ ಜಗಳವಾಗಿ ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ ಎನ್ನಲಾಗಿದೆ.

ಇದೀಗ ಸವಿತಾ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಎಂ.ಪಿ.ಕೆ. ಹೆಸರಿನಲ್ಲಿದ್ದ ಬೆಂಗಳೂರಿನ ಮನೆ ಬಾಡಿಗೆ ಹಣ ಪತ್ನಿ ಸವಿತಾ ಅಕೌಂಟ್‌ಗೆ ಜಮಾ ಆಗುತ್ತಿತ್ತು. ಎಂಪಿಕೆಯ ಎಟಿಎಂ ಕಾರ್ಡ್ ಕೂಡ ಅವರ ಬಳಿ ಇದ್ದು, ಅದನ್ನು ಮತ್ತೆ ವಾಪಸು ಪಡೆದಿರುವ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X