Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇರಾನಿ ಕಪ್: ಶೇಷಭಾರತಕ್ಕೆ 379 ರನ್ ಗುರಿ

ಇರಾನಿ ಕಪ್: ಶೇಷಭಾರತಕ್ಕೆ 379 ರನ್ ಗುರಿ

ವೃದ್ದಿಮಾನ್ ಸಹಾ ಅಜೇಯ ಶತಕ

ವಾರ್ತಾಭಾರತಿವಾರ್ತಾಭಾರತಿ23 Jan 2017 11:10 PM IST
share
ಇರಾನಿ ಕಪ್: ಶೇಷಭಾರತಕ್ಕೆ 379 ರನ್ ಗುರಿ

ಮುಂಬೈ, ಜ.23: ಇಲ್ಲಿ ನಡೆಯುತ್ತಿರುವ ಇರಾನಿ ಕಪ್‌ನಲ್ಲಿ ಹಾಲಿ ರಣಜಿ ಚಾಂಪಿಯನ್ ಗುಜರಾತ್ ತಂಡ ಶೇಷ ಭಾರತ ತಂಡದ ಗೆಲುವಿಗೆ 379 ರನ್ ಗುರಿ ನೀಡಿದೆ.

ಗೆಲ್ಲಲು ಕಠಿಣ ಸವಾಲು ಪಡೆದಿದ್ದ ಶೇಷ ಭಾರತ ನಾಲ್ಕನೆ ದಿನವಾದ ಸೋಮವಾರ ಆಟ ಕೊನೆಗೊಂಡಾಗ 4 ವಿಕೆಟ್‌ಗಳನಷ್ಟಕ್ಕೆ 266 ರನ್ ಗಳಿಸಿದ್ದು, ಅಂತಿಮ ದಿನವಾದ ಮಂಗಳವಾರ 6 ವಿಕೆಟ್ ನೆರವಿನಿಂದ ಇನ್ನೂ 113 ರನ್ ಗಳಿಸಬೇಕಾಗಿದೆ.

ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ(ಅಜೇಯ 123 ರನ್, 214 ಎಸೆತ, 16 ಬೌಂಡರಿ, 3 ಸಿಕ್ಸರ್) ಹಾಗೂ ನಾಯಕ ಚೇತೇಶ್ವರ ಪೂಜಾರ(ಅಜೇಯ 83 ರನ್, 181 ಎಸೆತ, 10 ಬೌಂಡರಿ) ಶೇಷ ಭಾರತದ ಗೆಲುವಿಗಾಗಿ ಶ್ರಮಿಸುತ್ತಿದ್ದು, ಆಟವನ್ನು ಐದನೆ ದಿನಕ್ಕೆ ಕಾಯ್ದಿರಿಸಿದ್ದಾರೆ. ಶೇಷ ಭಾರತ 63 ರನ್‌ಗೆ 4 ವಿಕೆಟ್ ಕಳೆದುಕೊಂಡು ಒಂದಾದ ಈ ಜೋಡಿ 5ನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 203 ರನ್ ಜೊತೆಯಾಟ ನಡೆಸಿ ರಣಜಿ ಚಾಂಪಿಯನ್ ಗುಜರಾತ್‌ಗೆ ಸವಾಲಾಗಿ ನಿಂತಿದ್ದಾರೆ.

ಗುಜರಾತ್‌ನ ಪರ ಹಾರ್ದಿಕ್ ಪಟೇಲ್(2-59) ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ. ಶೇಷ ಭಾರತದ ಅಗ್ರ ಕ್ರಮಾಂಕದ ಆಟಗಾರರಾದ ಹೇರ್ವಾಡ್ಕರ್(20), ಕರುಣ್ ನಾಯರ್ ಹಾಗೂ ಮುಕುಂದ್(19)ರನ್ನು ಹಾರ್ದಿಕ್ ಪಟೇಲ್ ಹಾಗೂ ಕೆಪಿ ಪಟೇಲ್ ಬೇಗನೆ ಔಟ್ ಮಾಡಿ ಗುಜರಾತ್‌ಗೆ ಮೇಲುಗೈ ಒದಗಿಸಿದ್ದರು.

ಇದಕ್ಕೆ ಮೊದಲು 8 ವಿಕೆಟ್ ನಷ್ಟಕ್ಕೆ 227 ರನ್‌ನಿಂದ 2ನೆ ಇನಿಂಗ್ಸ್ ಮುಂದುವರಿಸಿದ ಗುಜರಾತ್ ತಂಡ 246 ರನ್‌ಗೆ ಆಲೌಟಾಯಿತು. ಚಿರಾಗ್ ಗಾಂಧಿ(70) ನಿನ್ನೆಯ ಮೊತ್ತಕ್ಕೆ 15 ರನ್ ಸೇರಿಸಿ ಔಟಾದರು. ಹರ್ಷಲ್ ಪಟೇಲ್(15) ಹಾಗೂ ಥಡಾನಿ(11) ಬೇಗನೆ ಔಟಾದರು.

ಶೇಷ ಭಾರತದ ಪರ ಸ್ಪಿನ್ನರ್ ಎಸ್.ನದೀಮ್(4-64) ಯಶಸ್ವಿ ಬೌಲರ್ ಎನಿಸಿಕೊಂಡರೆ, ಸಿದ್ದಾರ್ಥ್ ಕೌಲ್(3-70) ಹಾಗೂ ಮುಹಮ್ಮದ್ ಸಿರಾಜ್(2-39) ನದೀಮ್‌ಗೆ ಉತ್ತಮ ಸಾಥ್ ನೀಡಿದರು.

ಸಂಕ್ಷಿಪ್ತ ಸ್ಕೋರ್

ಗುಜರಾತ್ ಮೊದಲ ಇನಿಂಗ್ಸ್: 358

ಗುಜರಾತ್ ಎರಡನೆ ಇನಿಂಗ್ಸ್:246

(ಪಾಂಚಾಲ್ 73, ಗಾಂಧಿ 70, ನದೀಮ್ 4-64, ಕೌಲ್ 3-70)

ರೆಸ್ಟ್ ಆಫ್ ಇಂಡಿಯಾ ಮೊದಲ ಇನಿಂಗ್ಸ್: 226

ರೆಸ್ಟ್ ಆಫ್ ಇಂಡಿಯಾ ಎರಡನೆ ಇನಿಂಗ್ಸ್: 266/4

(ಸಹಾ ಅಜೇಯ 123, ಪೂಜಾರ ಅಜೇಯ 83, ಪಟೇಲ್ 2-59)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X