Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿಳ್ಳೆಕ್ಯಾತ ಸಮುದಾಯದ ಪ್ರತಿ...

ಶಿಳ್ಳೆಕ್ಯಾತ ಸಮುದಾಯದ ಪ್ರತಿ ಕುಟುಂಬಕ್ಕೆ 2 ಎಕರೆ ಭೂಮಿ: ಎಚ್.ಆಂಜನೇಯ

ವಾರ್ತಾಭಾರತಿವಾರ್ತಾಭಾರತಿ24 Jan 2017 9:23 PM IST
share
ಶಿಳ್ಳೆಕ್ಯಾತ ಸಮುದಾಯದ ಪ್ರತಿ ಕುಟುಂಬಕ್ಕೆ 2 ಎಕರೆ ಭೂಮಿ: ಎಚ್.ಆಂಜನೇಯ

ಬೆಂಗಳೂರು, ಜ.24: ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿರುವ ಶಿಳ್ಳೆಕ್ಯಾತ ಸಮುದಾಯದ ಪ್ರತಿ ಕುಟುಂಬಕ್ಕೆ ಎರಡು ಎಕರೆ ಕೊಡಲು ಯೋಜನೆ ರೂಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ಮಂಗಳವಾರ ರಾಜ್ಯ ಶಿಳ್ಳೆಕ್ಯಾತಾಸ್ ಜನಾಂಗಾಭಿವೃದ್ಧಿ ವೇದಿಕೆ ನಗರದ ಯಡಿಯೂರು ಸಮುದಾಯದ ಭವನದಲ್ಲಿ ಆಯೋಜಿಸಿದ್ದ ಶಿಳ್ಳೆಕ್ಯಾತ ಸಮುದಾಯದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಸೌಲಭ್ಯಗಳನ್ನು ಕೇವಲ ಮಾದಿಗ, ಹೊಲೆಯ, ಭೋವಿ ಸಮುದಾಯಗಳೇ ಪಡೆದುಕೊಳ್ಳುತ್ತಿವೆ. ಇದರಿಂದಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಉಳಿದ 98 ಜಾತಿಗಳು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಇದನ್ನು ಸರಿತೂಗಿಸುವ ನಿಟ್ಟಿನಲಿ ಅಲೆಮಾರಿ ಸಮುದಾಯಗಳಿಗೆ ಅಗತ್ಯ ಸೌಲಭ್ಯಗಳನ್ನು ನೀಡಲು ಸರಕಾರ ಬದ್ಧವಿದೆ ಎಂದು ಅವರು ತಿಳಿಸಿದರು.

ಅಲೆಮಾರಿ ಸಮುದಾಯ ಇತರೆ ಸಮುದಾಯಗಳೊಂದಿಗೆ ಘನತೆಯಿಂದ ಬದುಕಬೇಕು. ಈ ನಿಟ್ಟಿನಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುತ್ತಿರುವ ಶಿಳ್ಳೆಕ್ಯಾತಾ ಸಮುದಾಯ ಸೇರಿದಂತೆ ಎಲ್ಲ ಅಲೆಮಾರಿ ಸಮುದಾಯಗಳಿಗೂ ಎರಡು ಎಕರೆ ಜಮೀನು ಹಾಗೂ ಗಂಗಾ-ಕಲ್ಯಾಣ ಯೋಜನೆಯ ಮುಖಾಂತರ ನೀರಾವರಿ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅವರು ಹೇಳಿದರು.

ಅಲೆಮಾರಿ ಸಮುದಾಯಗಳನ್ನು ಒಂದು ನಿರ್ದಿಷ್ಟವಾದ ಪ್ರದೇಶದಲ್ಲಿ ನೆಲೆಸುವಂತೆ ಮಾಡುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರಕಾರದ ವತಿಯಿಂದಲೆ ಮನೆಗಳನ್ನು ಕಟ್ಟಿಸಿಕೊಡಲು ಸುಮಾರು 200ಕೋಟಿ ರೂ.ವನ್ನು ಮೀಸಲಿರಿಸಲಾಗಿದೆ. ಇದು ಯಶಸ್ವಿಯಾಗುವಂತೆ ಅಲೆಮಾರಿ ಸಮುದಾಯಗಳ ಸಂಘ, ಸಂಸ್ಥೆಗಳು ತಮ್ಮ ಸಮುದಾಯದವರಿಗೆ ಸರಕಾರಿ ಸೌಲಭ್ಯಗಳನ್ನು ತಲುಪಿಸಲು ಮುಂದಾಗಬೇಕು ಎಂದು ಸಚಿವ ಆಂಜನೇಯ ತಿಳಿಸಿದರು..

ಶಿಕ್ಷಣದಿಂದ ಮಾತ್ರ ಶೋಷಿತರ ಅಭಿವೃದ್ಧಿ ಸಾಧ್ಯವೆಂದು ಡಾ.ಬಿ.ಆರ್.ಅಂಬೇಡ್ಕರ್ ಬಲವಾಗಿ ನಂಬಿದ್ದರು. ಹೀಗಾಗಿ ಅವರು ಸಂವಿಧಾನದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಈ ಸೌಲಭ್ಯವನ್ನು ಅಲೆಮಾರಿ ಸಮುದಾಯ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.

ಸರಕಾರಿ ಶಿಕ್ಷಣ ಸಂಸ್ಥೆಗಳಾದ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆಯಿಲ್ಲದೆ ಅಲೆಮಾರಿ ಸಮುದಾಯದ ಮಕ್ಕಳಿಗೆ ನೇರವಾಗಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಆ ಮೂಲಕ ಅಲೆಮಾರಿ ಸಮುದಾಯದ ಪ್ರತಿಯೊಬ್ಬರು ವಿದ್ಯಾವಂತರಾಗಬೇಕು ಎಂದು ಅವರು ಆಶಿಸಿದರು.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವೀರಭದ್ರೇಶ್ವರ ಲೀಲಾಮಠದ ಕಲ್ಲೀನಾಥ ಸ್ವಾಮೀಜಿ, ಶಿಳ್ಳೇಕ್ಯಾತಾಸ್ ಜನಾಂಗಾಭಿವೃದ್ದಿ ವೇದಿಕೆಯ ಅಧ್ಯಕ್ಷ ನರಸಿಂಹಯ್ಯ, ಕಾರ್ಯದರ್ಶಿ ಬಿ.ಎಚ್.ಮಂಜುನಾಥ ಮತ್ತಿತರರಿದ್ದರು.

ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್ ನಿರ್ಮಾಣಕ್ಕೆ ಶಿಳ್ಳೇಕ್ಯಾತ ಸಮುದಾಯಕ್ಕೆ ಸೇರಿದ ವೀರಭದ್ರೇಶ್ವರ ಲೀಲಾಮಠದ ಕಲ್ಲೀನಾಥ ಸ್ವಾಮೀಜಿಗೆ ಸುಮಾರು 50ಲಕ್ಷ ರೂ. ಕೊಡಲಾಗುವುದು. ಇದನ್ನು ಬಳಸಿಕೊಂಡು ತಮ್ಮ ಸಮುದಾಯವನ್ನು ಶೈಕ್ಷಣಿಕವಾಗಿ ವುುಂದೆ ತರಬೇಕು.

-ಎಚ್.ಆಂಜನೇಯ ಸಚಿವ, ಸಮಾಜ ಕಲ್ಯಾಣ ಇಲಾಖೆ

ಹಕ್ಕೊತ್ತಾಯಗಳು

-ತೊಗಲುಗೊಂಬೆ ಕಲೆ ಉಳಿಸುವ ನಿಟ್ಟಿನಲ್ಲಿ ಅಧ್ಯಯನ ಹಾಗೂ ತರಬೇತಿ ಕೇಂದ್ರ ಸ್ಥಾಪನೆ.

-ಶಿಳ್ಳೇಕ್ಯಾತಾಸ್ ಅಭಿವೃದ್ದಿ ನಿಗಮ ಸ್ಥಾಪನೆ ಾಗೂ ಸ್ವ ಉದ್ಯೋಗಕ್ಕೆ ಧನಸಹಾಯ

-ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತೊಗಲುಗೊಂಬೆ ಕಲೆಯಲ್ಲಿರುವ ಕಲಾಕಾರರಿಗೆ ಪ್ರೋತ್ಸಾಹಧನ ನೀಡುವುದು.

-ಲೋಕೋಪಯೋಗಿ ಇಲಾಖೆಯಲ್ಲಿ ಕಾಮಗಾರಿ ನಿರ್ವಹಣೆಯಲ್ಲಿ ತಾಲೂಕು, ಜಿಲ್ಲೆ ಹಾಗೂ ಪಟ್ಟಣ ಪಂಚಾಯತ್ ಪುರಸಭೆಗಳಲ್ಲಿ ಆದ್ಯತೆ ನೀಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X