Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 500 ಕೋಟಿ ಹವಾಲಾ ಕಾಂಡ ಬಯಲು ಮಾಡಿದ...

500 ಕೋಟಿ ಹವಾಲಾ ಕಾಂಡ ಬಯಲು ಮಾಡಿದ ಎಸ್ಪಿಗೆ ನೋಟೀಸಿನ ಬಹುಮಾನ ಕೊಟ್ಟ ಗೃಹ ಸಚಿವ !

ಭ್ರಷ್ಟರನ್ನು ಬಗ್ಗು ಬಡಿದೇ ತೀರುತ್ತೇನೆ ಎಂದ ಗೌರವ್ ತಿವಾರಿ

ವಾರ್ತಾಭಾರತಿವಾರ್ತಾಭಾರತಿ24 Jan 2017 10:36 PM IST
share
500 ಕೋಟಿ ಹವಾಲಾ ಕಾಂಡ ಬಯಲು ಮಾಡಿದ ಎಸ್ಪಿಗೆ ನೋಟೀಸಿನ ಬಹುಮಾನ ಕೊಟ್ಟ ಗೃಹ ಸಚಿವ !

ಭೋಪಾಲ್: ಮಧ್ಯಪ್ರದೇಶದಲ್ಲಿ 500 ಕೋಟಿ ರೂ. ಹವಾಲಾ ಹಗರಣವನ್ನು ಭೇದಿಸಿದ ಕಾಟ್ನಿ ಜಿಲ್ಲಾ ಎಸ್‌ಪಿ ಗೌರವ್ ತಿವಾರಿ, ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಎಸ್ಪಿ ಗೌರವ್ ಅವರು ಜಾರಿಗೊಳಿಸಿದ ಆದೇಶವೊಂದರಲ್ಲಿ, ಯಾವುದೇ ಪೊಲೀಸ್ ಠಾಣೆ ಅಥವಾ ಚೌಕಿಯ ಯಾವುದೇ ಪೊಲೀಸ್ ಉದ್ಯೋಗಿ, ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಲ್ಲಿ ,ಅಲ್ಲಿನ ಠಾಣಾಧಿಕಾರಿಯನ್ನು ತಕ್ಷಣವೇ ಅಮಾನತುಗೊಳಿಸಲಾಗುವುದು ಎಂದು ತಿಳಿಸಿದ್ದರು. ಈ ಆದೇಶದ ಒಂದು ಪ್ರತಿಯು ಗೃಹ ಸಚಿವ ಭೂಪೇಂದ್ರ ಸಿಂಗ್ ಅವರಿಗೂ ಕಳುಹಿಸಲಾಗಿದ್ದು, ಅದನ್ನು ಓದಿ ಅವರು ಕೆಂಡಾಮಂಡಲವಾಗಿದ್ದಾರೆ.

   ಎಸ್ಪಿ ಗೌರವ್ ತಿವಾರಿಯ ಆದೇಶ ತಪ್ಪೆಂದು ಗೃಹ ಸಚಿವ ಭೂಪೇಂದ್ರ ಸಿಂಗ್ ಅಸಮಾಧಾನ ವ್ಯಕ್ದಪಡಿಸಿದ್ದಾರೆ. ಒಂದು ವೇಳೆ ಟ್ರಾಫಿಕ್ ಇನ್ಸ್‌ಪೆಕ್ಟರ್ ತಪ್ಪು ಮಾಡಿದಲ್ಲಿ, ಎಸ್ಪಿಯನ್ನು ಅಮಾನತುಗೊಳಿಸಬೇಕೇ ಎಂದವರು ಪ್ರಶ್ನಿಸಿದ್ದಾರೆ. ಯಾವುದೇ ಪೊಲೀಸ್ ಉದ್ಯೋಗಿ ತಪ್ಪು ಮಾಡಿದಲ್ಲಿ, ಅದರ ಜವಾಬ್ದಾರಿಯನ್ನು ಠಾಣಾಧಿಕಾರಿ ಯಾಕೆ ವಹಿಸಿಕೊಳ್ಳಬೇಕು ಎಂದಿದ್ದಾರೆ. ಎಸ್ಪಿ ಗೌರವ್ ಅವರ ಆದೇಶದ ಬಗ್ಗೆ ಪರಿಶೀಲನೆ ನಡೆಸುವಂತೆ ಗೃಹ ಸಚಿವರು ಸೂಚನೆ ನೀಡಿದ್ದು, ಒಂದು ವೇಳೆ ಆದೇಶವು ಅಕ್ರಮವೆಂದು ಮನಗಂಡಲ್ಲಿ, ಎಸ್ಪಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದ್ದಾರೆ.

ಆದರೆ ಎಸ್ಪಿ ಗೌರವ್ ತಿವಾರಿ, ತಾನು ಜಾರಿಗೊಳಿಸಿದ ಆದೇಶವು ಸರಕಾರದ ನಿಯಮಾವಳಿಗೆ ಅನುಗುಣವಾಗಿಯೇ ಇದೆಯೆಂದು ಸಮರ್ಥಿಸಿಕೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ಈ ಆದೇಶವನ್ನು ರಾಜ್ಯ ಪೊಲೀಸ್ ಪ್ರಧಾನ ಕಾರ್ಯಾಲಯವು ಜಾರಿಗೊಳಿಸಿತ್ತು. ತಾನು ಆ ಆದೇಶವನ್ನು ಪಾಲಿಸುತ್ತಿದ್ದೇನಷ್ಟೇ ಎಂದವರು ಹೇಳಿದ್ದಾರೆ. ತನಗೆ ಸರಕಾರದಿಂದ ತನಗೆ ಇನ್ನೂ ನೋಟಿಸ್ ಬಂದಿಲ್ಲವೆಂದು ಗೌರವ್ ತಿಳಿಸಿದ್ದು, ಅದು ಬಂದ ಮೇಲಷ್ಟೇ ಉತ್ತರ ನೀಡುವೆ ಎಂದು ತಿಳಿಸಿದ್ದಾರೆ.

ಜನಮೆಚ್ಚಿದ ಎಸ್ಪಿ: ಎಸ್ಪಿ ಗೌರವ್ ತಿವಾರಿಯವರ ಕಾರ್ಯನಿರ್ವಹಣೆಯು ಕಾಟ್ನಿ ಜಿಲ್ಲೆಯ ಜನತೆಗೆ ಅಪಾರ ಮೆಚ್ಚುಗೆಯಿದೆ.ಅವರೊಬ್ಬ ಪ್ರಾಮಾಣಿಕ ಹಾಗೂ ದಕ್ಷ ಪೊಲೀಸ್ ಅಧಿಕಾರಿಯೆಂದೇ ಜನಪ್ರಿಯರಾಗಿದಾರೆ. 5 ಕೋಟಿ ಹವಾಲಾಕಾಂಡವನ್ನು ಭೇದಿಸಿದ ಬಳಿಕ ಗೌರವ್ ತಿವಾರಿಯವರನ್ನು ತನಿಖೆಯಿಂದ ಮುಕ್ತಗೊಳಿಸಲಾಗಿತ್ತು. ಆನಂತರ ಅವರ ಕಚೇರಿಯ ಮುಂದೆ ಪ್ರತಿದಿನವೂ ಜನಸಂದಣಿ ಕಂಡುಬರುತ್ತಿದೆ. ಫೇಸ್‌ಬುಕ್‌ನಲ್ಲಿ ಗೌರವ್‌ಗೆ 14 ಸಾವಿರಕ್ಕೂ ಅಧಿಕ ಫಾಲೋವರ್‌ಗಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X