Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಗಾಮು ಕಳೆದುಕೊಂಡ ಶರದ್ ಯಾದವ್ ನಾಲಗೆ...

ಲಗಾಮು ಕಳೆದುಕೊಂಡ ಶರದ್ ಯಾದವ್ ನಾಲಗೆ ಹೇಳಿದ್ದೇನು?

ಮಗಳ ಮರ್ಯಾದೆ ಹೋದರೆ...

ವಾರ್ತಾಭಾರತಿವಾರ್ತಾಭಾರತಿ25 Jan 2017 12:58 PM IST
share
ಲಗಾಮು ಕಳೆದುಕೊಂಡ ಶರದ್ ಯಾದವ್ ನಾಲಗೆ ಹೇಳಿದ್ದೇನು?

ಪಾಟ್ನಾ, ಜ.25: ನಗರದಲ್ಲಿ ಜನವರಿ 24ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಜೆಡಿ(ಯು) ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರು ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ.ಮತವನ್ನು ಮಗಳ ಮಾನಕ್ಕಿಂತಲೂ ಮಿಗಿಲು ಎಂದು ಅವರು ಹೇಳಿದ್ದಾರೆ.'' ಈ ಬ್ಯಾಲಟ್ ಪೇಪರ್ ಇದೆಯಲ್ಲ, ಇದರ ಬಗ್ಗೆ ಜನರಿಗೆ ಬಹಳಷ್ಟು ತಿಳುವಳಿಕೆ ನೀಡುವ ಅಗತ್ಯವಿದೆ. ಮತ ಚಲಾಯಿಸುವ ಗೌರವ ನಿಮ್ಮ ಪುತ್ರಿಯ ಮಾನಕ್ಕಿಂತಲೂ ದೊಡ್ಡದು.'' ಎಂದಿದ್ದಾರೆ ಯಾದವ್. ಅಷ್ಟಕ್ಕೇ ನಿಲ್ಲಿಸದೆ''ಪುತ್ರಿಯ ಮಾನ ಕಳೆದು ಹೋದರೆ ಆಕೆಯ ಗ್ರಾಮದ ಮರ್ಯಾದೆ ಕೂಡ ಹೋಗುತ್ತದೆ, ಆದರೆ ಮತವೊಂದು ಮಾರಾಟವಾದರೆ ದೇಶದ ಮಾನವೇ ಹೋಗುತ್ತದೆ. ನಮ್ಮ ಎಲ್ಲಾ ಕನಸುಗಳು ಭಗ್ನವಾಗುತ್ತವೆ,'' ಎಂದು ಅವರು ಹೇಳಿದ್ದರು.

ಅವರ ಈ ಭಾಷಣದ ವರದಿಯೊಂದಿಗೆ ವೀಡಿಯೊವನ್ನು ನ್ಯೂಸ್ ಏಜೆನ್ಸಿ ಎಎನ್‌ಐ ಪ್ರಕಟಿಸಿತ್ತು. ಜೆಡಿ(ಯು) ಮಾಜಿ ಅಧ್ಯಕ್ಷರೂ, ರಾಜ್ಯಸಭಾ ಸಂಸದರೂ ಆಗಿರುವ ಶರದ್ ಯಾದವ್ ಅವರಿಂದ ಬಂದ ಇಂತಹ ಮಾತು ಹಲವರಿಗೆ ಆಶ್ಚರ್ಯ ತಂದಿದೆ. ಕಳೆದ ವರ್ಷ ಅಧಿಕಾರಕ್ಕೆ ಬಂದ ಬಿಹಾರದ ಮಹಾ ಮೈತ್ರಿ ಕೂಟದಲ್ಲಿ ಇವರ ಪಕ್ಷ ಕೂಡ ಭಾಗಿಯಾಗಿದೆ.

ಶರದ್ ಯಾದವ್ ಅವರು ಈ ಹಿಂದೆ ಕೂಡ ತಮ್ಮ ಹೇಳಿಕೆಗಳಿಂದ ವಿವಾದ ಸೃಷ್ಟಿಸಿದ್ದರು. ಮಾರ್ಚ್ 2015ರಲ್ಲಿ ರಾಜ್ಯಸಭೆಯಲ್ಲಿ ವಿಮಾ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಅವರು ದಕ್ಷಿಣದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿ ಭಾರೀ ಆಕ್ರೋಶವೆದುರಿಸಿದ್ದರು. ''ದಕ್ಷಿಣದ ಮಹಿಳೆಯರು ನೋಡುವುದಕ್ಕೆ ಎಷ್ಟು ಸುಂದರವಾಗಿದ್ದಾರೆಯೋ ಅವರ ದೇಹವೂ ಅಷ್ಟೇ ಸುಂದರವಾಗಿದೆ. ಅವರಿಗೆ ನೃತ್ಯವೂ ಬರುತ್ತದೆ,'' ಎಂದು ಅವರು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X