Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಊರುಗಳನ್ನು ಬೆಸೆಯುವ ಸುಳ್ಯದ ಗಿರೀಶ್...

ಊರುಗಳನ್ನು ಬೆಸೆಯುವ ಸುಳ್ಯದ ಗಿರೀಶ್ ಭಾರದ್ವಾಜ್‌ರಿಗೆ ಪದ್ಮಶ್ರಿ ಪ್ರಶಸ್ತಿಯ ಗರಿ

ಕರ್ನಾಟಕದ ಪದ್ಮ ಪುರಸ್ಕೃತರಲ್ಲಿ ಕರಾವಳಿಯ ಸಾಧಕ

ವಾರ್ತಾಭಾರತಿವಾರ್ತಾಭಾರತಿ25 Jan 2017 9:24 PM IST
share
ಊರುಗಳನ್ನು ಬೆಸೆಯುವ ಸುಳ್ಯದ ಗಿರೀಶ್ ಭಾರದ್ವಾಜ್‌ರಿಗೆ ಪದ್ಮಶ್ರಿ ಪ್ರಶಸ್ತಿಯ ಗರಿ

ಸುಳ್ಯ , ಜ.25 : ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ಅವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ಘೋಷಣೆಯಗಿದೆ . ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಅರಂಬೂರಿನ ಗಿರೀಶ್ ಭಾರದ್ವಾಜ್ ಮೆಕ್ಯಾನಿಕಲ್ ಎಂಜಿನಿಯರ್. ಪದವಿ ಪಡೆದ ನಂತರ ಅಪ್ಪನ ಅಣತಿಯಂತೆ ಸುಳ್ಯದಲ್ಲಿ ಸಣ್ಣದೊಂದು ವರ್ಕ್‌ಶಾಪ್ ಶುರು ಮಾಡಿದರು. 1986ರಲ್ಲಿ ತಮ್ಮದೇ ಊರಲ್ಲಿ ಮೊದಲ ತೂಗು ಸೇತುವೆ ನಿರ್ಮಿಸಿದ ಬಳಿಕ ಅವರು ಹಿಂತಿರುಗಿ ನೋಡಿಲ್ಲ. ಆ ದಿನಗಳಲ್ಲಿ ತೂಗು ಸೇತುವೆಯ ಕಲ್ಪನೆಯೇ ಹೊಸತು. 40 ಸ್ವಯಂ ಸೇವಕ ಯುವಕ ತಂಡದೊಂದಿಗೆ ಕೆಲಸ ಶುರು ಮಾಡಿದ ಗಿರೀಶ್ ಕೆಲವೇ ದಿನಗಳಲ್ಲಿ ಬಲಾಢ್ಯ ಸೇತುವೆ ಕಟ್ಟಿಬಿಟ್ಟರು. 30 ವರ್ಷಗಳ ನಂತರವೂ ಆ ಸೇತುವೆ ಜನರ ಸಂಪರ್ಕ ಕೊಂಡಿಯಾಗಿದೆ.

ಇದುವರೆಗೂ 127 ತೂಗು ಸೇತುವೆಗಳನ್ನು ಗಿರೀಶ್ ನಿರ್ಮಿಸಿದ್ದಾರೆ. ಈ ಪೈಕಿ 2 ಒಡಿಶಾದಲ್ಲಿ ಹಾಗೂ 3 ಆಂಧ್ರದಲ್ಲಿವೆ. ಉಳಿದವು ಕೇರಳ ಹಾಗೂ ಕರ್ನಾಟಕದಲ್ಲಿ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿವೆ. ಆಂಧ್ರದ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಗಿರೀಶ್ ಇವರ ಕೆಲಸವನ್ನು ಮನಸಾರೆ ಹೊಗಳಿದ್ದಾರೆ. ತೂಗು ಸೇತುವೆ ನಿರ್ಮಿಸಿಕೊಡಿ ಎಂದು ನಾನಾ ರಾಜ್ಯಗಳಿಂದ 30ಕ್ಕೂ ಹೆಚ್ಚು ಪ್ರಸ್ತಾಪಗಳು ಬಂದಿವೆ.

67 ವರ್ಷದ ಗಿರೀಶ್ ಭಾರದ್ವಾಜ್ ಸೇವೆ ಉಚಿತ. ಸರ್ವೆ ಮಾಡುವುದರಿಂದ ಹಿಡಿದು ವಿನ್ಯಾಸ, ತಾಂತ್ರಿಕ ಸಲಹೆಗೂ ಹಣ ಪಡೆಯುವುದಿಲ್ಲ. ಅನೇಕ ಹಳ್ಳಿಗಳಲ್ಲಿ ಜನರ ಬಳಿ ಹಣ ಇಲ್ಲ ಎಂದು ಗೊತ್ತಾದಾಗ ತಮ್ಮ ಸ್ವಂತ ಹಣವನ್ನು ಹಾಕಿ ಸೇತುವೆ ನಿರ್ಮಿಸಿಕೊಟ್ಟಿದ್ದಾರೆ. ಗಿರೀಶ್ ನೈಪುಣ್ಯತೆ ಅದೆಷ್ಟು ಜನಪ್ರಿಯವಾಗಿದೆ ಎಂದರೆ, ಈಗ ಸೇನೆ ಸಹ ಬುಲಾವ್ ನೀಡಿದೆ. ಜಮ್ಮು ಕಾಶ್ಮೀರದ ಪೂಂಛ್ ಬಳಿ ತೂಗು ಸೇತುವೆ ನಿರ್ಮಿಸಿಕೊಡಿ ಎಂದು ಸೇನಾಧಿಕಾರಿಗಳು ಪತ್ರ ಬರೆದಿದ್ದಾರೆ. ಪ್ರತಿ ಗ್ರಾಮದ ಪ್ರತಿ ವ್ಯಕ್ತಿಯೂ ತೂಗು ಸೇತುವೆಯ ತಂತ್ರಜ್ಞಾನಿಯಾಗಿ ರೂಪುಗೊಳ್ಳಬೇಕು ಎನ್ನುವುದು ಗಿರೀಶ್ ಅವರ ಆಶಯ. ಅವರ ಸಾಧನೆಯನ್ನು ಅರಸಿ ಹಲವು ಪ್ರತಿಷ್ಥಿತ ಪ್ರಶಸ್ತಿಗಳು ಇವರ ಮುಡಿಗೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X