Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರ್ಭಯ ಫಂಡ್ ನ ಸಾವಿರ ಕೋಟಿ...

ನಿರ್ಭಯ ಫಂಡ್ ನ ಸಾವಿರ ಕೋಟಿ ರೂಪಾಯಿಯಲ್ಲಿ ಈವರೆಗೆ ಖರ್ಚಾಗಿದ್ದು ಎಷ್ಟು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ26 Jan 2017 9:11 AM IST
share
ನಿರ್ಭಯ ಫಂಡ್ ನ ಸಾವಿರ ಕೋಟಿ ರೂಪಾಯಿಯಲ್ಲಿ ಈವರೆಗೆ ಖರ್ಚಾಗಿದ್ದು ಎಷ್ಟು ಗೊತ್ತೇ  ?

ಹೊಸದಿಲ್ಲಿ, ಜ.26: ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆಗಾಗಿ 2013ರ ಬಳಿಕ ಪ್ರತಿ ಬಜೆಟ್‌ನಲ್ಲಿ 1,000 ಕೋ. ರೂಪಾಯಿಗಳ ನಿರ್ಭಯ ನಿಧಿ ತೆಗೆದಿರಸಲಾಗುತ್ತದೆ. ಆದರೆ ಇದುವರೆಗೆ ಖರ್ಚಾಗಿರುವ ಹಣ ಎಷ್ಟೆಂಬ ಅಂಕಿ ಅಂಶ ತಿಳಿದರೆ ನೀವು ದಂಗಾಗುತ್ತೀರಿ. ಏಕೆ ಗೊತ್ತೇ? ಈ ನಿಧಿಯಿಂದ ಒಂದು ಪೈಸೆಯೂ ಖರ್ಚಾಗಿಲ್ಲ!
ದಿಲ್ಲಿಯಲ್ಲಿ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆಗೆ ಒಳಗಾಗಿದ್ದ ನಿರ್ಭಯಾ ಸ್ಮರಣಾರ್ಥವಾಗಿ ಯುಪಿಎ ಸರ್ಕಾರ ಈ ನಿಧಿಯನ್ನು 2013ರಲ್ಲಿ ಆರಂಭಿಸಿತ್ತು. ಮಹಿಳೆಯರ ಸುರಕ್ಷತೆಗೆ ಈ ನಿಧಿ ಬಳಸಲು ಉದ್ದೇಶಿಸಲಾಗಿತ್ತು.

ಯುಪಿಎ ಪರಂಪರೆ ಮುಂದುವರಿಸಿದ ಎನ್‌ಡಿಎ ಕಳೆದ ಎರಡು ಬಜೆಟ್‌ಗಳಲ್ಲಿ ಕೂಡಾ 1000 ಕೋಟಿ ರೂಪಾಯಿ ತೆಗೆದಿರಿಸಿದರೂ, ಅದರಲ್ಲಿ ಒಂದು ರೂಪಾಯಿಯನ್ನೂ ವೆಚ್ಚ ಮಾಡಿಲ್ಲ. ಯಾವ ನಿರ್ದಿಷ್ಟ ಯೋಜನೆಯೂ ಇಲ್ಲದಿರುವುದು ಇದಕ್ಕೆ ಕಾರಣ. ಮಹಿಳಾ ಸುರಕ್ಷತೆಗೆ ಯೋಜನೆ ಕೈಗೊಳ್ಳುವ ಸ್ವಯಂಸೇವಾ ಸಂಸ್ಥೆಗಳಿಗೆ ನೆರವಾಗುವುದು ಇದರ ವ್ಯಾಪ್ತಿಯಲ್ಲಿ ಸೇರಿದೆ. ಆದರೆ ಹಣವನ್ನು ವಿನಿಯೋಗಿಸುವ ಯಾವ ಯೋಜನೆಯನ್ನೂ ಇದುವರೆಗೆ ಪ್ರಕಟಿಸಿಲ್ಲ.

ಸಂಸತ್ತಿನಲ್ಲಿ ಕಳೆದ ಡಿಸೆಂಬರ್‌ನಲ್ಲಿ ಮಂಡಿಸಿದ ಕೇಂದ್ರ ಹಣಕಾಸು ಲೆಕ್ಕ 2016-17ರ ಅನ್ವಯ, ಸರ್ಕಾರವು ಇದಕ್ಕೆ ಎರಡು ಯೋಜನೆಗಳನ್ನು ರೂಪಿಸಿತ್ತು. ಅವುಗಳೆಂದರೆ 653 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆಗೆ ಕ್ರಮ ಕೈಗೊಳ್ಳುವ ಸಾರಿಗೆ ಸಚಿವಾಲಯದ ಯೋಜನೆ ಒಂದು ಹಾಗೂ 79.6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಭಯಾ ನಿಧಿ ಬಳಸುವ ಗೃಹ ಸಚಿವಾಲಯದ ಯೋಜನೆ ಇನ್ನೊಂದು. ಆದರೆ ಈ ಯಾವ ಯೋಜನೆಯೂ ಚಾಲನೆ ಪಡೆಯದ ಕಾರಣ ಈ ನಿಧಿ ಖರ್ಚಾಗದೇ ಉಳಿದಿದೆ.

2015-16ರಲ್ಲಿ ಮಂಜೂರಾಗಿದ್ದ 461 ಕೋಟಿ ರೂಪಾಯಿ ವೆಚ್ಚದಲ್ಲಿ ಮಹಿಳಾ ಜಾಡಮಾಲಿಗಳಿಗೆ ಪುನರ್ವಸತಿ ಒದಗಿಸುವ ಯೋಜನೆ ಕೂಡಾ ಜಾರಿಯಾಗಲಿಲ್ಲ. ಮಹಿಳೆಯರು ಮತ್ತು ಮಕ್ಕಳ ಅನುಕೂಲಕ್ಕಾಗಿ ನಕ್ಸಲ್‌ಪೀಡಿತ ವಲಯಗಳಲ್ಲಿ ಸೂಕ್ತ ರಸ್ತೆ ನಿರ್ಮಾಣ ಮಾಡುವ 920 ಕೋಟಿ ರೂ. ಯೋಜನೆಗೂ ಇದೇ ಗತಿಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X