Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಖ್ಯಮಂತ್ರಿಗಳಿಂದ ಗಣರಾಜ್ಯೋತ್ಸವದ...

ಮುಖ್ಯಮಂತ್ರಿಗಳಿಂದ ಗಣರಾಜ್ಯೋತ್ಸವದ ಸಂದೇಶ

ವಾರ್ತಾಭಾರತಿವಾರ್ತಾಭಾರತಿ26 Jan 2017 10:51 AM IST
share
ಮುಖ್ಯಮಂತ್ರಿಗಳಿಂದ ಗಣರಾಜ್ಯೋತ್ಸವದ ಸಂದೇಶ

ನಾಡ ಬಾಂಧವರೇ, ನಿಮಗೆಲ್ಲರಿಗೂ 68ನ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು

ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2017ರ ಜನವರಿ 26ಕ್ಕೆ 67 ವರ್ಷಗಳು ತುಂಬುತ್ತಿದೆ. ಭಾರತೀಯರಿಗೆಸ್ವಾತಂತ್ರ್ಯ ಪಡೆದ ದಿನವಾದ ಆಗಸ್ಟ್ 15ರಷ್ಟೇ ಮಹತ್ವದ ದಿನಇದಾಗಿದೆ.

ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ.

 ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್  ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪು ಮಾಡಿಕೊಂಡು ಗೌರವಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಸಾವಿರಾರು ಜಾತಿಗಳು, ನೂರಾರು ಭಾಷೆಗಳು, ಹತ್ತಾರು ಮತ-ಧರ್ಮಗಳಿಂದ ತುಂಬಿಕೊಂಡಿರುವ ಭಾರತದಲ್ಲಿ ಕರ್ನಾಟಕ ತನ್ನದೇ ಆದ ವಿಶಿಷ್ಟ ಚರಿತ್ರೆ ಹಾಗೂ ಪರಂಪರೆಯನ್ನು ಹೊಂದಿದೆ. ಭಾರತೀಯ ಸಮಾಜದಲ್ಲಿ ಅಂತರ್ಗತವಾಗಿರುವ ಸಾಮಾಜಿಕ ಅಸಮಾನತೆಗಳ ವಿರುದ್ಧ ನಿರಂತರ ಹೋರಾಟ ನಡೆಸಿದ ದೀರ್ಘ ಪರಂಪರೆಯೂ ಕರ್ನಾಟಕಕ್ಕಿದೆ.

-ಜಾತಿ-ಧರ್ಮಗಳ ಭೇದವಿಲ್ಲದೆ ಸಂಪತ್ತು, ಅವಕಾಶ ಮತ್ತು ಅಧಿಕಾರದಲ್ಲಿ ಸರ್ವರಿಗೂ ಸಮಪಾಲು ಸಿಗಬೇಕೆಂಬ ಸರ್ವೋದಯದ ಉದಾತ್ತ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ. ಕಳೆದ ನಾಲ್ಕು ವರ್ಷಗಳಲ್ಲಿ ನಾವು ಜಾರಿಗೊಳಿಸಿದ ಯೋಜನೆಗಳೇ ಇದಕ್ಕೆಸಾಕ್ಷಿಯಾಗಿವೆ. ಈ ಯೋಜನೆಗಳು ಸಂವಿಧಾನದ ಆಶಯಗಳೇ ಆಗಿವೆ.

ನಮ್ಮಸಾಧನೆಯ ಮುಖ್ಯಾಂಶಗಳನ್ನು ಈ ಸಂದರ್ಭದಲ್ಲಿ ನಮ್ಮ ಪ್ರಭುಗಳಾದ ನಿಮ್ಮ ಮುಂದಿಡುವುದು ಮುಖ್ಯಮಂತ್ರಿಯಾಗಿ ನನ್ನ ಉತ್ತರದಾಯಿತ್ವ ಎಂದು ನಾನು ನಂಬಿದ್ದೇನೆ.

ಶಿಕ್ಷಣ ನಮ್ಮ ಆದ್ಯತೆಯ ಕ್ಷೇತ್ರಗಳಲ್ಲೊಂದು. ನಮ್ಮ ಸರ್ಕಾರ 62.59 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, 47.45 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, 4.92 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್, 61.45 ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಹಾಲು ನೀಡುತ್ತಿದೆ.

ಶಿಕ್ಷಣದ ಹಕ್ಕು ಕಾಯಿದೆಯಡಿ ಬಡ ಕುಟುಂಬಗಳಿಗೆ ಸೇರಿರುವ 4.46 ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಗೆ ಸೇರ್ಪಡೆಯಾಗಿದ್ದು, ಅವರ ಶಿಕ್ಷಣ ಶುಲ್ಕವನ್ನು ಸರ್ಕಾರ ಪಾವತಿಸಿದೆ. ಇದರ ಜತೆ ಶಾಲೆಗಳಲ್ಲಿನ ಮೂಲಸೌಕರ್ಯದ ಅಭಿವೃದ್ದಿ, ಬೋಧನಾ ಕೌಶಲದ ಸುಧಾರಣೆಗೆ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.

ನಮ್ಮ ಸರ್ಕಾರ ಈ ವರ್ಷ 1,400 ಅಂಗನವಾಡಿಗಳನ್ನು ತೆರೆದಿದ್ದು, ಈ ಮೂಲಕ ರಾಜ್ಯದ ಅಂಗನವಾಡಿಗಳ ಒಟ್ಟು ಸಂಖ್ಯೆ 66,000ಕ್ಕೆ ಏರಿಕೆಯಾಗಿದೆ. 11,500 ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ಗರ್ಭಿಣಿ ಮತ್ತು ಬಾಣಂತಿಯರಿಗೆ ಮಾತೃಪೂರ್ಣ ಯೋಜನೆಯಡಿ ಬಿಸಿಯೂಟ ನೀಡಲಾಗುವುದು. ಮಹಿಳೆಯರ ಸಬಲೀಕರಣದ ಉದ್ದೇಶದಿಂದ ರಾಜ್ಯದಲ್ಲಿ 30 ಸ್ತ್ರೀಶಕ್ತಿ ಜಿಲ್ಲಾ ಒಕ್ಕೂಟಗಳನ್ನು ಸ್ಥಾಪಿಸಲಾಗಿದೆ.

ಹಸಿವುಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಗುರಿಯಾಗಿದೆ. ರಾಜ್ಯದ ಒಂದು ಕೋಟಿ ಕುಟುಂಬಗಳ ಸದಸ್ಯರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ವರ್ಷ ಅಕ್ಕಿಯ ಜತೆಯಲ್ಲಿ ವಿಟಮಿನ್ ಎ ಮತ್ತು ಡಿ ಉಳ್ಳ ಪೌಷ್ಠಿಕಾಂಶಗಳನ್ನೊಳಗೊಂಡ ತಾಳೆಎಣ್ಣೆ ಹಾಗೂ ಕಬ್ಬಿಣಾಂಶವುಳ್ಳ ಉಪ್ಪನ್ನು ಕೂಡಾ ನೀಡಲಾಗುತ್ತಿದೆ. ಈ ವರ್ಷದ ಫೆಬ್ರವರಿಯಿಂದ ಶೇಕಡಾ 50ರ ದರದಲ್ಲಿ ಬೇಳೆಯನ್ನು ನೀಡಲು ಕೂಡಾ ನಿರ್ಧರಿಸಲಾಗಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸತತವಾಗಿ ಬರಗಾಲಕ್ಕೀಡಾಗಿದ್ದರೂ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದೆ ಎನ್ನುವ ತೃಪ್ತಿ ನನಗಿದೆ. ಈ ವರ್ಷ 139 ತಾಲೂಕುಗಳು ಬರಗಾಲಕ್ಕೀಡಾಗಿವೆ.

ಬರಪೀಡಿತ ಪ್ರದೇಶಗಳಿಗೆ ನಾನು ಮತ್ತು ನಮ್ಮ ಸಚಿವರು ಭೇಟಿ ನೀಡಿ ಪರಿಹಾರ ಕಾರ್ಯದ ಮೇಲ್ವಿಚಾರಣೆ ನಡೆಸಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ರೈತರಿಗೆ ನೀಡುತ್ತಿರುವ ಸಾಲದ ಪ್ರಮಾಣ ಶೇಕಡಾ 50ರಷ್ಟು ಹೆಚ್ಚಾಗಿದೆ. ಈ ವರ್ಷದ ಮಾರ್ಚ್ ಅಂತ್ಯದೊಳಗೆ ಬಾಕಿ ಇರುವ ಸಾಲದ ಅಸಲು ಪಾವತಿಸಿದರೆ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲು ಸರ್ಕಾರನಿರ್ಧರಿಸಿದೆ.

ಈಗಾಗಲೇ 1,800 ಕೋಟಿ ರೂ.ಗಳಷ್ಟು ಬಾಕಿ ಬಡ್ಡಿಯನ್ನು ಸರ್ಕಾರವೇ ಭರಿಸಿದೆ. ರಾಜ್ಯದ ರೈತರು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸುಮಾರು 29,000 ಕೋಟಿ ರೂ. ಸಾಲ ಪಡೆದಿದ್ದಾರೆ. ಇದರ ಅರ್ಧದಷ್ಟನ್ನಾದರೂ ಕೇಂದ್ರ ಸರ್ಕಾರ ಮನ್ನಾ ಮಾಡಬೇಕೆಂಬುದು ನಮ್ಮ ಕೋರಿಕೆಯಾಗಿದೆ.

ಈ ವರ್ಷ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ 330.06 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪರಿಹಾರ ಕಾರ್ಯಕ್ಕೆ ಹಣದ ಕೊರತೆಯಾಗದಂತೆ ನೋಡಿಕೊಂಡಿದೆ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದಿಂದ 4,072 ಕೋಟಿ ರೂಪಾಯಿ ನೆರವು ಕೇಳಿದ್ದೇವೆ. ಕೇಂದ್ರ ಗೃಹಸಚಿವರ ಅಧ್ಯಕ್ಷತೆಯ ಸಮಿತಿ 1,782 ಕೋಟಿ ರೂ. ಬಿಡುಗಡೆಗೆ ಶಿಫಾರಸುಮಾಡಿದೆ. ರಾಜ್ಯ ಸರ್ಕಾರ ಆಹಣದ ನಿರೀಕ್ಷೆಯಲ್ಲಿದೆ.

ನಮ್ಮದು ರೈತಪರ ಸರ್ಕಾರ ಎನ್ನುವುದು ಘೋಷಣೆಯಲ್ಲ, ಕಾರ್ಯಕ್ರಮಗಳ ಮೂಲಕ ಇದನ್ನು ಸಾಬೀತುಪಡಿಸಿದ್ದೇವೆ. ರೈತರಿಗೆ ಬೀಜ ಮತ್ತು ಗೊಬ್ಬರದ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ. ಬೆಲೆಕುಸಿತದ ಸಂದರ್ಭದಲ್ಲಿ ಮಾರುಕಟ್ಟೆ ಮಧ್ಯೆಪ್ರವೇಶಿಸಿ ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಿಸಿ ರೈತರಿಗೆ ಯೋಗ್ಯಬೆಲೆ ಸಿಗುವಂತೆ ಮಾಡಿದ್ದೇವೆ.

ಕೃಷಿಭಾಗ್ಯ ಅತ್ಯಂತ ಜನಪ್ರಿಯವಾದ ಕಾರ್ಯಕ್ರಮವಾಗಿದ್ದು, ಇದರನ್ವಯ ಒಂದು ಲಕ್ಷ ಕೃಷಿ ಹೊಂಡಗಳು ಮತ್ತು 2450 ಪಾಲಿಹೌಸ್ ನಿರ್ಮಿಸಿದ್ದೇವೆ. ಮಳೆಯಾಶ್ರಿತ 129.70 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 63.71 ಲಕ್ಷ ಹೆಕ್ಟೇರ್ ಪ್ರದೇಶವನ್ನು ಜಲಾನಯನ ಅಭಿವೃದ್ದಿ ಯೋಜನೆಯಡಿ ಅಭಿವೃದ್ದಿಪಡಿಸಲಾಗಿದ್ದು, ಉಳಿದ 65.99 ಹೆಕ್ಟೇರ್ ಪ್ರದೇಶವನ್ನು ಹಂತಹಂತವಾಗಿ ಅಭಿವೃದ್ದಿಪಡಿಸಲಾಗುವುದು.

ರಾಜ್ಯದ 158 ಎಪಿಎಂಸಿಗಳ ಪೈಕಿ 153 ಎಪಿಎಂಸಿಗಳಲ್ಲಿ ಎಲೆಕ್ಟ್ರಾನಿಕ್ ಕೃಷಿ  ಮಾರುಕಟ್ಟೆ ಸೌಲಭ್ಯ ಅಳವಡಿಸಲಾಗಿದೆ. ಇದು ಬೇರೆರಾಜ್ಯಗಳಿಗೆ ಮಾದರಿಯಾಗಿದೆ. ರೈತರ ಹಾಲಿಗೆ ನೀಡುತ್ತಿದ್ದ ಸಹಾಯಧನವನ್ನು 4 ರೂ.ಗಳಿಂದ ಐದು ರೂ.ಗಳಗೆ ಏರಿಸಲಾಗಿದ್ದು, ಇದರಿಂದಾಗಿ 8.61 ಲಕ್ಷ ರೈತರಿಗೆ ಅನುಕೂಲವಾಗಲಿದೆ.

ರಾಜ್ಯದ ನೀರಾವರಿ ಯೋಜನೆಗಳಿಗೆ ಐದು ವರ್ಷಗಳ ಅವಧಿಯಲ್ಲಿ 50,000 ರೂಪಾಯಿ ನೀಡುವುದಾಗಿ ನಮ್ಮ ಸರ್ಕಾರ ಘೋಷಿಸಿತ್ತು. ನಾಲ್ಕೇ ವರ್ಷಗಳ ಅವಧಿಯಲ್ಲಿ 42,540.30 ಕೋಟಿ ರೂಪಾಯಿ ನೀರಾವರಿಗೆ ನೀಡಲಾಗಿದ್ದು, ಕೃಷ್ಣಾ ಮತ್ತು ಕಾವೇರಿ ನದಿಕೊಳ್ಳದಲ್ಲಿ ಹಲವಾರು ಯೋಜನೆಗಳು ಅನುಷ್ಠಾನಕ್ಕೆ ಬರುತ್ತಿವೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ನೀಡಿರುವ ಹಣ ಒಂದು ದಾಖಲೆಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಪ್ರಸಕ್ತ ವರ್ಷ 19,542 ಕೋಟಿ ರೂ. ಖರ್ಚು ಮಾಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ 125ನೇ ಜನ್ಮದಿನದ ಅಂಗವಾಗಿ 125 ಹೊಸವಸತಿ ಶಾಲೆ ಮತ್ತು 100 ಮೆಟ್ರಿಕ್ ನಂತರದ ಹಾಸ್ಟೆಲ್ ಗಳನ್ನು ತೆರೆಯಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಡಾ.ಅಂಬೇಡ್ಕರ್ ಆವಾಸ್  ಯೋಜನೆಯಡಿ 2.5 ಲಕ್ಷ ವಸತಿಗಳನ್ನು ನಿರ್ಮಾಣ ಮಾಡಲಾಗಿದೆ. 13 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.

ಮೂಲ ಸೌಕರ್ಯಗಳನ್ನು ಕಲ್ಪಿಸುವ ಕಾರ್ಯದಲ್ಲಿ ರಾಜ್ಯ ಸರ್ಕಾರ ದಾಪುಗಾಲು ಇಟ್ಟಿದೆ. ರಾಜ್ಯದಲ್ಲಿ 8,972 ಕಿ.ಮೀ. ಉದ್ದದ ರಾಜ್ಯಹೆದ್ದಾರಿ 17,163 ಕಿ.ಮೀ .ಉದ್ದದ ಪ್ರಮುಖ ಜಿಲ್ಲಾರಸ್ತೆಗಳನ್ನು ಮೂರುವರ್ಷಗಳಲ್ಲಿ ಪೂರ್ಣಗೊಳಿಸಲಾಗಿದೆ. ಇದು ಕೂಡಾ ರಾಜ್ಯದ ಇತಿಹಾಸದಲ್ಲಿದಾಖಲೆಯಾಗಿದೆ.

ಪ್ರತಿವರ್ಷ ಕನಿಷ್ಠ ಮೂರು ಲಕ್ಷಮನೆಗಳನ್ನು ನಿರ್ಮಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಕಳೆದ ನಾಲ್ಕುವರ್ಷಗಳಲ್ಲಿ ನಾವು 10,24,972 ಮನೆಗಳನ್ನು ನಿರ್ಮಿಸಿದ್ದು, ಪ್ರಸಕ್ತವರ್ಷ 1,40,193 ಮನೆಗಳನ್ನು ನಿರ್ಮಿಸಿದ್ದೇವೆ ಮತ್ತು 8,311 ನಿವೇಶನಗಳನ್ನು ಹಂಚಿದ್ದೇವೆ.

ಬೆಂಗಳೂರು ಎನ್ನುವುದು ಬಂಡವಾಳ ಹೂಡಿಕೆದಾರರ ಸ್ವರ್ಗ ಎಂಬ ಖ್ಯಾತಿಗೆ ಒಳಗಾಗಿದೆ. ಐಟಿ-ಬಿಟಿ ಕ್ಷೇತ್ರ ಪ್ರತಿವರ್ಷ ಶೇಕಡಾ ಹತ್ತರಷ್ಟು ಬೆಳವಣಿಗೆಯಾಗುತ್ತಿದೆ. ಈ ಕ್ಷೇತ್ರಗಳಲ್ಲಿ 70,000 ಉದ್ಯೋಗ ಸೃಷ್ಟಿಯಾಗಿದೆ. ನವೋದ್ಯಮದಲ್ಲಿ ನಾವು ಮೊದಲಿಗರಾಗಿದ್ದು, ರಾಜ್ಯದಲ್ಲಿ ಸುಮಾರು 4,000 ನವೋದ್ಯಮಗಳಿದ್ದು, ಎರಡುವರ್ಷಗಳ ಅವಧಿಯಲ್ಲಿ 1 ಬಿಲಿಯನ್ ರೂ.ಗಳಷ್ಟು ಬಂಡವಾಳ ಹರಿದುಬಂದಿದೆ.

ಬೆಂಗಳೂರು ಎನ್ನುವುದು ಇಡೀ ಜಗತ್ತಿನಲ್ಲಿ ಅತ್ಯಂತ ಡೈನಾಮಿಕ್ ನಗರವಾಗಿದೆ ಎಂದು ವಿಶ್ವ ಆರ್ಥಿಕ ವೇದಿಕೆ ಘೋಷಿಸಿರುವುದು ನಾಡಿನ ಜನತೆ ಹೆಮ್ಮೆಯಿಂದ ಬೀಗುವಂತಾಗಿದೆ.

ಕೇಂದ್ರ ಸರ್ಕಾರವೇ ಇತ್ತೀಚೆಗೆ ಬಿಡುಗಡೆಗೊಳಿಸಿದ ಅಂಕಿಅಂಶದ ಪ್ರಕಾರ ಕಳೆದ ವರ್ಷದ ಅವಧಿಯಲ್ಲಿ ಕರ್ನಾಟಕ ಹೂಡಿಕೆ ಉದ್ದೇಶದ 1,49,587 ಕೋಟಿ ರೂಪಾಯಿ ಬಂಡವಾಳ ಹರಿದುಬಂದಿದೆ. ಇದಕ್ಕೆ ರಾಜ್ಯ ಸರ್ಕಾರದ ಉದ್ಯಮಸ್ನೇಹಿ ನಿಲುವು, ಹೊಸ ಕೈಗಾರಿಕಾ ನೀತಿ ಕೂಡಾ ಕಾರಣವಾಗಿದೆ.

ಬೆಂಗಳೂರು ಮೆಟ್ರೋ ರೈಲು ಯೋಜನೆಯ ಮೊದಲ ಹಂತ ಪೂರ್ಣಗೊಳ್ಳುವ ಹಂತದಲ್ಲಿದ್ದು, 42.38 ಕಿ.ಮೀ.ನಷ್ಟು ಮೆಟ್ರೋಮಾರ್ಗ ಈವರ್ಷದ ಎಪ್ರಿಲ್ ನಲ್ಲಿ ಪೂರ್ಣಗೊಳ್ಳಲಿದೆ.

ಸರ್ಕಾರದ ಯೋಜನೆಗಳು ನೂರಾರು. ಆದರೆ ಅವುಗಳ ಹಿಂದಿನ ಸದಾಶಯ ಮಾತ್ರ ಒಂದೇ. ಅದು ಸಮ ಸಮಾಜದ ನಿರ್ಮಾಣ, ಸರ್ವರಿಗೂ ಸಮಪಾಲು ಸಮಬಾಳು. ಸರ್ವರನ್ನು ಸಶಕ್ತರನ್ನಾಗಿಸಿ ಶಕ್ತಿಶಾಲಿ ರಾಜ್ಯ ಕಟ್ಟುವ ನಮ್ಮ ಪ್ರಯತ್ನಕ್ಕೆ ನಿಮ್ಮೆಲ್ಲರ ಸಹಕಾರ, ಬೆಂಬಲ ಆಶೀರ್ವಾದ ಇರಲಿ ಎಂಬ ಮನವಿಯೊಂದಿಗೆ ತಮ್ಮೆಲ್ಲರಿಗೂ ಮತ್ತೊಮ್ಮೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಸಲ್ಲಿಸಿ ನನ್ನ ಮಾತುಗಳನ್ನುಮುಗಿಸುತ್ತೇನೆ.

ಜೈಹಿಂದ್ ! ಜೈಕರ್ನಾಟಕ !!                        

share
ವಾರ್ತಾಭಾರತಿ
ವಾರ್ತಾಭಾರತಿ
Next Story
X