Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಪಾಲರನ್ನು ಕಿತ್ತೊಗೆಯುವಂತೆ...

ರಾಜ್ಯಪಾಲರನ್ನು ಕಿತ್ತೊಗೆಯುವಂತೆ ಪ್ರಧಾನಿಗೆ ರಾಜಭವನದ 80 ಕ್ಕೂ ಹೆಚ್ಚು ಉದ್ಯೋಗಿಗಳಿಂದಲೇ ಪತ್ರ !

ಮಾಜಿ ಆರೆಸ್ಸೆಸ್ ಮುಖಂಡ ಮಾಡಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ26 Jan 2017 10:55 AM IST
share
ರಾಜ್ಯಪಾಲರನ್ನು ಕಿತ್ತೊಗೆಯುವಂತೆ ಪ್ರಧಾನಿಗೆ ರಾಜಭವನದ 80 ಕ್ಕೂ  ಹೆಚ್ಚು ಉದ್ಯೋಗಿಗಳಿಂದಲೇ ಪತ್ರ  !

ಶಿಲ್ಲಾಂಗ್,ಜ.26 :ಮೇಘಾಲಯದ ರಾಜ್ಯಪಾಲ ವಿ ಷಣ್ಮುಗನಾಥನ್ ಅವರನ್ನು ಹುದ್ದೆಯಿಂದ ಕೆಳಗಿಳಿಸಬೇಕೆಂದು ಕೋರಿ ರಾಜಧಾನಿ ಶಿಲ್ಲಾಂಗ್ ನಲ್ಲಿರುವ ರಾಜಭವನದ ಸುಮಾರು 80 ಮಂದಿ ಸಿಬ್ಬಂದಿಗಳು ಪ್ರಧಾನಿ ಕಾರ್ಯಾಲಯ ಹಾಗೂ ರಾಷ್ಟ್ರಪತಿ ಭವನಕ್ಕೆ ಐದು ಪುಟಗಳ ಪತ್ರವೊಂದನ್ನು ಕಳುಹಿಸಿದ್ದಾರೆ. ಪತ್ರಕ್ಕೆ ಸಹಿ ಹಾಕಿದವರಲ್ಲಿ ಅಧಿಕಾರಿಗಳಿಂದ ಹಿಡಿದು ಅಟೆಂಡರುಗಳು ಸೇರಿದ್ದಾರೆ.

‘‘ಷಣ್ಮುಗಂ ಅವರ ಕಾರ್ಯಚಟುವಟಿಕೆಗಳು ರಾಜಭವನದ ಶಿಷ್ಟಾಚಾರಕ್ಕೆ ಹಾಗೂ ಘನತೆಗೆ ಧಕ್ಕೆ ತಂದಿವೆಯಲ್ಲದೆ ರಾಜಭವನದ ಸಿಬ್ಬಂದಿಯ ಭಾವನೆಗಳನ್ನೂ ಘಾಸಿಗೊಳಿಸಿವೆ,’’ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ‘‘ಅವರ ಕಾರ್ಯಚಟುವಟಿಕೆಗಳು ರಾಜಭವನವನ್ನು ‘‘ಯವತಿಯರ ಕ್ಲಬ್’’ ಆಗಿ ಮಾರ್ಪಡಿಸಿದೆ ಹಾಗೂ ಅಲ್ಲಿನ ಸಿಬ್ಬಂದಿಗೆ ತೀವ್ರ ಮಾನಸಿಕ ಒತ್ತಡ, ಹಿಂಸೆ ಹಾಗೂ ಅವಮಾನವುಂಟು ಮಾಡಿದೆ,’’ ಎಂದು ದೂರಲಾಗಿದೆ.

68 ವರ್ಷದ ಷಣ್ಮುಗಂ ಅವರು ಹಿರಿಯ ಆರೆಸ್ಸೆಸ್ ಕಾರ್ಯಕರ್ತರಾಗಿದ್ದು, ತಮಿಳುನಾಡಿನವರಾದ ಅವರನ್ನು ಮೇ 20, 2015ರಂದು ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಅದೇ ವರ್ಷದ ಸೆಪ್ಟಂಬರ್ ತಿಂಗಳಲ್ಲಿ ಅವರಿಗೆ ಅರುಣಾಚಲ ಪ್ರದೇಶದ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿತ್ತು.ಒಂದು ವರ್ಷದ ಕಾಲ ಅವರು ಮಣಿಪುರದ ಹೆಚ್ಚುವರಿ ಜವಾಬ್ದಾರಿಯನ್ನೂ ಹೊತ್ತಿದ್ದರು.‘‘ರಾಜ್ಯಪಾಲರ ನೇರ ಆದೇಶದಂತೆ ಯುವತಿಯರು ಬಂದು ಹೋಗುವ ಸ್ಥಳವಾಗಿ ರಾಜಭವನ ಪರಿವರ್ತಿತವಾಗಿದೆ. ರಾಜ್ಯಪಾಲರ ನಿವಾಸದ ಸುರಕ್ಷಾ ವ್ಯವಸ್ಥೆಗೂ ಇದು ಧಕ್ಕೆ ತರುವುದು,’’ಎಂದು ಪತ್ರ ತಿಳಿಸಿದೆ.

ಸದ್ಯ ಇಟಾನಗರದಲ್ಲಿರುವ ರಾಜ್ಯಪಾಲ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ರಾಜ್ಯಪಾಲರ ಕಾರ್ಯದರ್ಶಿ ಎಚ್ ಎಂ ಶಂಗ್ಪಿಲಿಯಾಂಗ್ ಅವರ ಪ್ರಕಾರ ಅವರು ಶಿಲ್ಲಾಂಗ್ ಪ್ರೆಸ್ ಕ್ಲಬ್ಬಿನಲ್ಲಿದ್ದ ಪತ್ರಕರ್ತರೊಂದಿಗೆ ಟೆಲಿಕಾನ್ಫರೆನ್ಸಿಂಗ್ ಮೂಲಕ ಮಾತುಕತೆ ನಡೆಸಿದ್ದು ಈ ಸಂದರ್ಭ ತಮ್ಮ ವಿರುದ್ಧ ಮಾಡಲಾದ ಆರೋಪಗಳನ್ನು ನಿರಾಕರಿಸಿದ್ದಾರೆ.

ತರುವಾಯ ದಿ ಹೈಲ್ಯಾಂಡ್ ಪೋಸ್ಟ್ ನಲ್ಲಿ ಜನವರಿ 24ರಂದು ರಾಜ್ಯಪಾಲರ ವಿರುದ್ಧದ ಆರೋಪಗಳ ಬಗೆಗಿನ ವರದಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಪಿ ಆರ್ ಓ ಹುದ್ದೆಗಾಗಿ ಬಂದಿದ್ದ ಮಹಿಳಾ ಅಭ್ಯರ್ಥಿಯೊಬ್ಬರೊಂದಿಗೆ ರಾಜ್ಯಪಾಲರು ಅನುಚಿತವಾಗಿ ವರ್ತಿಸಿದ್ದರು ಹಾಗೂ ಆಕೆಯನ್ನು ತಬ್ಬಿಕೊಂಡು ಮುತ್ತಿಕ್ಕಿದ್ದರು ಎಂದು ಬರೆಯಲಾಗಿತ್ತು. ಆದರೆ ಈ ಆರೋಪವನ್ನು ರಾಜ್ಯಪಾಲರು ನಿರಾಕರಿಸಿದ್ದು ರಾಜ ಭವನದ ಎಲ್ಲಾ ಮಹಿಳಾ ಉದ್ಯೋಗಿಗಳು ತಮ್ಮ ‘ಪುತ್ರಿಯರು ಹಾಗೂ ಮೊಮ್ಮಕ್ಕಳಂತೆ’ ಎಂದಿದ್ದರು.

ತಾನು ಯಾರ ಜತೆಗೂ ಅನುಚಿತವಾಗಿ ವರ್ತಿಸಿಲ್ಲವೆಂದೂ ರಾಜ್ಯಪಾಲರು ಹೇಳಿದ್ದಾರೆಂದು ದಿ ಹೈಲ್ಯಾಂಡ್ ಪೋಸ್ಟ್ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X