Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಕಪಟ್ಟಿಯಲ್ಲಿ ತನ್ನ ಹೆಸರನ್ನೇ ಹಾಕಲು...

ಅಂಕಪಟ್ಟಿಯಲ್ಲಿ ತನ್ನ ಹೆಸರನ್ನೇ ಹಾಕಲು ಮರೆತ ಮುಂಬೈ ವಿ.ವಿ.!

ವಾರ್ತಾಭಾರತಿವಾರ್ತಾಭಾರತಿ26 Jan 2017 2:33 PM IST
share
ಅಂಕಪಟ್ಟಿಯಲ್ಲಿ ತನ್ನ ಹೆಸರನ್ನೇ ಹಾಕಲು ಮರೆತ ಮುಂಬೈ ವಿ.ವಿ.!

ಮುಂಬೈ,ಜ.26: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಪ್ರತಿಷ್ಠಿತ ಮುಂಬೈ ವಿಶ್ವವಿದ್ಯಾನಿಲಯಕ್ಕೆ ಅಂಕಪಟ್ಟಿಯ ನಮೂನೆಯ ಕರಡನ್ನು ಸಿದ್ಧಪಡಿಸಲು ಪಾಠ ಕಲಿಯುವ ಅಗತ್ಯವಿರುವಂತೆ ಕಂಡುಬರುತ್ತಿದೆ. ಅಂಕಪಟ್ಟಿಯಲ್ಲಿ ತನ್ನ ಹೆಸರನ್ನೇ ಹಾಕಲು ಮರೆತಿರುವ ವಿವಿ ಇತರ ಹಲವಾರು ತಪ್ಪುಗಳನ್ನೂ ಮಾಡಿದೆ.

ವಿವಿಯು ಕಾಲೇಜುಗಳಿಗೆ ರವಾನಿಸಿರುವ ಅಂಕಪಟ್ಟಿಯ ಮಾದರಿ ಹಲವಾರು ತಪ್ಪುಗಳಿಂದ ಕೂಡಿದೆ. ವಿವಿಯ ಹೆಸರೇ ಇಲ್ಲ,ಜೊತೆಗೆ ಸಾಕಷ್ಟು ಸ್ಪೆಲ್ಲಿಂಗ್ ತಪ್ಪುಗಳೂ ಇವೆ ಎನ್ನುತ್ತಾರೆ ಕಾಲೇಜು ಪ್ರಾಂಶುಪಾಲರೊಬ್ಬರು.

ವಿದ್ಯಾರ್ಥಿ ಓದಿರುವ ಕಾಲೇಜು ಮುಂಬೈ ವಿವಿಯೊಂದಿಗೆ ಸಂಲಗ್ನಗೊಂಡಿದೆ ಎನ್ನುವುದನ್ನು ಉಲ್ಲೇಖಿಸಲು ಹೊಸ ಅಂಕಪಟ್ಟಿಯಲ್ಲಿ ಅವಕಾಶವೇ ಇಲ್ಲ.

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸುವ ಹೊಣೆಯನ್ನು 2016ರಿಂದ ವಿವಿಯೇ ವಹಿಸಿಕೊಂಡಿದೆ. ಅಲ್ಲಿಯವರೆಗೂ ಅಂತಿಮ ವರ್ಷದ ಪರೀಕ್ಷೆಯನ್ನು ಹೊರತುಪಡಿಸಿ ಎಲ್ಲ ಪರೀಕ್ಷೆಗಳನ್ನು ಆಯಾ ಕಾಲೇಜುಗಳೇ ನಡೆಸುತ್ತಿದ್ದವು.

ಈ ವರ್ಷ ಪದವಿ ತರಗತಿಗಳ ಶಿಕ್ಷಣದಲ್ಲಿ ಏಕರೂಪತೆಯನ್ನು ತರುವ ಪ್ರಯತ್ನವಾಗಿ ವಿವಿಯೇ ಪ್ರಶ್ನೆಪತ್ರಿಕೆಗಳನ್ನು ರೂಪಿಸುವ ಜೊತೆಗೆ ಎಲ್ಲ ಕಾಲೇಜುಗಳಲ್ಲಿ ಏಕಕಾಲದಲ್ಲಿ ಪ್ರವೇಶ ಪರೀಕ್ಷೆಗಳನ್ನು ನಡೆಸಿತ್ತು.

ಅಂಕಪಟ್ಟಿಗೆ ಗ್ರೇಡ್ ಕಾರ್ಡ್ ಎಂದು ಹೆಸರಿಸುವ ನಿರ್ಧಾರವನ್ನು ವಿವಿ ಮೊದಲು ಪ್ರಕಟಿಸಿತ್ತು. ಆದರೆ ಈಗ ದಿಢೀರ್‌ನೆ ಅದು ‘ಸರ್ಟಿಫಿಕೇಟ್ ’ ಆಗಿ ಬದಲಾಗಿದೆ. ಸರ್ಟಿಫಿಕೇಟ್‌ನ ಸ್ಪೆಲ್ಲಿಂಗ್‌ನ್ನೂ ತಪ್ಪಾಗಿ ಬರೆಯಲಾಗಿದೆ. ಕಾಲೇಜಿನ ಲಾಂಛನ ಅಥವಾ ವಿದ್ಯಾರ್ಥಿಯ ಪೋಟೊ ಮುದ್ರಿಸಲೂ ಅಂಕಪಟ್ಟಿಯಲ್ಲಿ ಜಾಗವಿಲ್ಲ. ಆಂತರಿಕ ಪರೀಕ್ಷೆಗಳು ಮತ್ತು ಪ್ರಾಕ್ಟಿಕಲ್‌ಗಳಲ್ಲಿ ಗಳಿಸಿದ ಅಂಕಗಳನ್ನೂ ಉಲ್ಲೇಖಿಸಲು ಸ್ಥಳವಿಲ್ಲ ಎಂದು ಹಲವಾರು ಕಾಲೇಜುಗಳ ಪ್ರಾಂಶುಪಾಲರು ದೂರಿದ್ದಾರೆ.

ತಪ್ಪುಗಳನ್ನು ಗಮನಿಸಿದ್ದೇವೆ ಮತ್ತು ಅಂಕಪಟ್ಟಿಯನ್ನು ಹೊಸದಾಗಿ ರೂಪಿಸುತ್ತಿದ್ದೇವೆ ಎಂದು ವಿವಿಯ ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X