Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಚಿನ್ನಾಭರಣಗಳಿದ್ದ ಬ್ಯಾಗ್...

ಉಪ್ಪಿನಂಗಡಿ: ಚಿನ್ನಾಭರಣಗಳಿದ್ದ ಬ್ಯಾಗ್ ರಿಕ್ಷಾದಲ್ಲೇ ಬಿಟ್ಟ ಪ್ರಕರಣ ಸುಖಾಂತ್ಯ

ವಾರ್ತಾಭಾರತಿವಾರ್ತಾಭಾರತಿ26 Jan 2017 9:41 PM IST
share
ಉಪ್ಪಿನಂಗಡಿ: ಚಿನ್ನಾಭರಣಗಳಿದ್ದ ಬ್ಯಾಗ್ ರಿಕ್ಷಾದಲ್ಲೇ ಬಿಟ್ಟ ಪ್ರಕರಣ ಸುಖಾಂತ್ಯ

ಉಪ್ಪಿನಂಗಡಿ, ಜ.26: ಕುಟುಂಬವೊಂದು ಚಿನ್ನಾಭರಣಗಳ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಕೆಲಕಾಲ ಅತಂತ್ರ ಸ್ಥಿತಿಯಲ್ಲಿ ಪರದಾಡಿದ ಘಟನೆ ಉಪ್ಪಿನಂಗಡಿಯಲ್ಲಿ ಗುರುವಾರ ನಡೆದಿದೆ. ಬಳಿಕ ಪೊಲೀಸರ ಸಹಾಯದಿಂದ ರಿಕ್ಷಾವನ್ನು ಪತ್ತೆ ಹಚ್ಚಿ ಬ್ಯಾಗ್ ಹಸ್ತಾಂತರಿಸಲಾಯಿತು.
  

 ಗುಂಡ್ಯದ ಅಡ್ಡಹೊಳೆ ನಿವಾಸಿಯಾಗಿರುವ ಗುಡ್ಡಪ್ಪ ಗೌಡ, ಅವರ ಮಗಳು ಮತ್ತು ಮೂವರು ಮಕ್ಕಳೊಂದಿಗೆ ಕಾರ್ಯನಿಮಿತ್ತ ಪುತ್ತೂರಿನ ಕೆಮ್ಮಾಯಿ ಎಂಬಲ್ಲಿಗೆ ಬಂದಿದ್ದು, ಮನೆಗೆ ಹಿಂದಿರುಗಲು ಉಪ್ಪಿನಂಗಡಿಗೆ ಆಟೊ ರಿಕ್ಷಾವೊಂದರಲ್ಲಿ ಬಂದಿಳಿದಿದ್ದರು. ರಿಕ್ಷಾದಿಂದ ಇಳಿದ ಬಳಿಕ ಗುಂಡ್ಯದತ್ತ ಪ್ರಯಾಣಿಸಲು ಮುಂದಾಗುತ್ತಿದ್ದಂತೆಯೇ ಚಿನ್ನಾಭರಣದ ಬ್ಯಾಗ್ ರಿಕ್ಷಾದಲ್ಲೇ ಬಾಕಿಯಾದುದು ತಿಳಿದುಬಂದಿದೆ.

ಅಷ್ಟರಲ್ಲಾಗಲೇ ಆಟೊ ರಿಕ್ಷಾ ತೆರಳಿದ್ದರಿಂದ ಕಂಗೆಟ್ಟು ಈ ಕುಟುಂಬ ಅಸಹಾಯಕತೆಯಿಂದ ಸಹಾಯಕ್ಕಾಗಿ ಮೊರೆಯಿಟ್ಟಿದ್ದು, ಬಳಿಕ ಸ್ಥಳೀಯರ ಸೂಚನೆ ಮೇರೆಗೆ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮಾಹಿತಿ ಲಭಿಸಿದಾಕ್ಷಣವೇ ತ್ವರಿತ ಕಾರ್ಯಾಚರಣೆಗೆ ಇಳಿದ ಪೊಲೀಸರು ಉಪ್ಪಿನಂಗಡಿ ಪರಿಸರದ ಸುತ್ತಮುತ್ತಲ ಎಲ್ಲಾ ಆಟೊ ರಿಕ್ಷಾಗಳನ್ನು ಪರಿಶೀಲನೆಗೆ ಒಳಪಡಿಸಿದರು.

ಉಪ್ಪಿನಂಗಡಿಯಿಂದ ಹೊರ ಹೋದ ಆಟೊ ರಿಕ್ಷಾಗಳ ಪತ್ತೆ ಕಷ್ಟ ಸಾಧ್ಯವಾಗಿದ್ದು, ತಾವು ಪ್ರಯಾಣಿಸಿದ ಆಟೊ ರಿಕ್ಷಾದ ಸಂಖ್ಯೆಯನ್ನೂ ದಾಖಲಿಸಿಕೊಳ್ಳದ ಕಾರಣ ನಿಖರವಾಗಿ ಆಟೊ ರಿಕ್ಷಾವನ್ನು ಪತ್ತೆ ಹಚ್ಚುವುದು ಸಮಸ್ಯೆಯಾಯಿತು ಎನ್ನಲಾಗಿದೆ. ಆದರೆ ಉಪ್ಪಿನಂಗಡಿಯ ಹಳೆ ಬಸ್ ನಿಲ್ದಾಣದ ಆಟೊ ರಿಕ್ಷಾ ನಿಲ್ದಾಣದಲ್ಲಿ ಸರತಿ ಸಾಲಿನಲ್ಲಿ ನಿಲ್ಲಿಸಲ್ಪಟ್ಟ ನಝೀರ್ ಎಂಬವರ ಆಟೊ ರಿಕ್ಷಾದ ಗುರುತು ಪತ್ತೆ ಹಚ್ಚಿದ ಗುಡ್ಡಪ್ಪ ಗೌಡರ ಮಗಳು, ಆಟೊ ರಿಕ್ಷಾದಲ್ಲಿ ನೋಡಿದಾಗ ಅದರ ಹಿಂಭಾಗದ ಸ್ಥಳದಲ್ಲಿ ಅವರಿಟ್ಟ ಸ್ಥಿತಿಯಲ್ಲಿಯೇ ಚಿನ್ನಾಭರಣದ ಬ್ಯಾಗ್ ಇರುವುದು ಪತ್ತೆಯಾಗಿದೆ.

ಇಳಿಯುವ ಅವಸರದಲ್ಲಿ ಆ ಕುಟುಂಬ ಬ್ಯಾಗ್ ಅನ್ನು ರಿಕ್ಷಾದಲ್ಲಿಯೇ ಮರೆತ್ತಿದ್ದು, ರಿಕ್ಷಾ ಚಾಲಕನಿಗೂ ತನ್ನ ರಿಕ್ಷಾದಲ್ಲಿ ಬ್ಯಾಗ್ ಇರುವುದು ತಿಳಿದಿರಲಿಲ್ಲ. ಕೊನೆಗೆ ಚಿನ್ನಾಭರಣದ ಬ್ಯಾಗ್ ಮರಳಿ ವಾರೀಸುದಾರರ ಕೈಸೇರುವುದರೊಂದಿಗೆ ಪ್ರಕರಣ ಸುಖಾಂತ್ಯ ಕಂಡಿತು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X