Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಕ್ಷಿಣ ಆಫ್ರಿಕ ನೆಲದಲ್ಲಿ ಟ್ವೆಂಟಿ-20...

ದಕ್ಷಿಣ ಆಫ್ರಿಕ ನೆಲದಲ್ಲಿ ಟ್ವೆಂಟಿ-20 ಸರಣಿ ಜಯಿಸಿದ ಶ್ರೀಲಂಕಾ

ವಾರ್ತಾಭಾರತಿವಾರ್ತಾಭಾರತಿ26 Jan 2017 10:46 PM IST
share
ದಕ್ಷಿಣ ಆಫ್ರಿಕ ನೆಲದಲ್ಲಿ ಟ್ವೆಂಟಿ-20 ಸರಣಿ ಜಯಿಸಿದ ಶ್ರೀಲಂಕಾ

ಕೇಪ್‌ಟೌನ್, ಜ.26: ನಿರೊಶನ್ ಡಿಕ್‌ವೆಲ್ಲಾ ದಾಖಲಿಸಿದ ನಿರ್ಣಾಯಕ 68 ರನ್ ನೆರವಿನಿಂದ ಶ್ರೀಲಂಕಾ ತಂಡ ದಕ್ಷಿಣ ಆಫ್ರಿಕ ವಿರುದ್ಧದ ಟ್ವೆಂಟಿ-20 ಸರಣಿಯನ್ನು ವಶಪಡಿಸಿಕೊಂಡಿದೆ. ಸಿಂಹಳೀಯರು ಆಫ್ರಿಕಾ ನೆಲದಲ್ಲಿ ಮೊತ್ತ ಮೊದಲ ಬಾರಿ ಚುಟುಕು ಕ್ರಿಕೆಟ್‌ನಲ್ಲಿ ಸರಣಿ ಜಯಿಸಿದ್ದಾರೆ.

 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಾಪಸಾದ ಎಬಿ ಡಿವಿಲಿಯರ್ಸ್(63) ಸಾಹಸದಿಂದ ದಕ್ಷಿಣ ಆಫ್ರಿಕ ತಂಡ ಶ್ರೀಲಂಕಾ ತಂಡಕ್ಕೆ ಮೂರನೆ ಟ್ವೆಂಟಿ-20 ಪಂದ್ಯದ ಗೆಲುವಿಗೆ 170 ರನ್ ಗುರಿ ನೀಡಿತು.

ಗೆಲ್ಲಲು ಸವಾಲಿನ ಮೊತ್ತ ಪಡೆದ ಶ್ರೀಲಂಕಾ ತಂಡ ಡಿಕ್‌ವೆಲ್ಲಾ ಹಾಗೂ ಧನಂಜಯ್ ಸಿಲ್ವಾ(19)ಸೇರಿಸಿದ 71 ರನ್ ಜೊತೆಯಾಟ ಹಾಗೂ ಸೀಕುಗೆ ಪ್ರಸನ್ನ ಬಾರಿಸಿದ 37 ರನ್ ನೆರವಿನಿಂದ ಒಂದು ಎಸೆತ ಬಾಕಿ ಇರುವಾಗಲೇ ಗೆಲುವಿನ ನಗೆ ಬೀರಿತು.

ಈ ಫಲಿತಾಂಶದ ಮೂಲಕ ಶ್ರೀಲಂಕಾ ತಂಡ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ದಕ್ಷಿಣ ಆಫ್ರಿಕ ಐದು ಕ್ಯಾಚ್‌ಗಳನ್ನು ಕೈಚೆಲ್ಲಿದ್ದು, ಲಂಕೆಯ ಗೆಲುವಿಗೆ ಪರೋಕ್ಷವಾಗಿ ನೆರವಾಯಿತು.

 ಟಾಸ್ ಜಯಿಸಿದ ಆತಿಥೇಯರು ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಕಳೆದ ವರ್ಷ ಮೊಣಕೈಗೆ ಗಾಯವಾದ ಬಳಿಕ ಮೊದಲ ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಿದ ವಿಲಿಯರ್ಸ್ 35 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಹೆಂಡ್ರಿಕ್ಸ್‌ರೊಂದಿಗೆ 2ನೆ ವಿಕೆಟ್‌ಗೆ 71 ರನ್ ಜೊತೆಯಾಟ ನಡೆಸಿದರು.

4 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಕುಸಿತ ಕಂಡ ದಕ್ಷಿಣ ಆಫ್ರಿಕ ಮಾಂಗ್ಲಿಸೊ ಮಾನ್‌ಸೆಲ್ 15 ಎಸೆತಗಳಲ್ಲಿ ಬಾರಿಸಿ ಅಜೇಯ 32 ರನ್ ನೆರವಿನಿಂದ 5 ವಿಕೆಟ್‌ಗಳ ನಷ್ಟಕ್ಕೆ 169 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡದ ಪರ ಡಿಕ್‌ವೆಲ್ಲಾ ಮೊದಲ ವಿಕೆಟ್‌ಗೆ 36 ರನ್ ಸೇರಿಸಿದರು. ಆ ಬಳಿಕ ಡಿಸಿಲ್ವಾರೊಂದಿಗೆ 3ನೆ ವಿಕೆಟ್‌ಗೆ 71 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು.

ದಕ್ಷಿಣ ಆಫ್ರಿಕದ ಸ್ಪಿನ್ನರ್ ಇಮ್ರಾನ್‌ತಾಹಿರ್ ಒಂದೇ ಓವರ್‌ನಲ್ಲಿ ಡಿಕ್‌ವೆಲ್ಲಾ ಹಾಗೂ ಡಿಸಿಲ್ವಾ ವಿಕೆಟ್‌ನ್ನು ಕಬಳಿಸಿದರು. 18 ರನ್‌ಗೆ 3 ವಿಕೆಟ್‌ಗಳನ್ನು ಕಬಳಿಸಿದರು. ಆದರೆ ಶ್ರೀಲಂಕಾ ಪಟ್ಟು ಸಡಿಲಿಸದೇ ಜಯಭೇರಿ ಬಾರಿಸಿತು.

16 ಎಸೆತಗಳ ಇನಿಂಗ್ಸ್‌ಗಳಲ್ಲಿ 3 ಭರ್ಜರಿ ಸಿಕ್ಸರ್ ಬಾರಿಸಿದ ಪ್ರಸನ್ನ ತಂಡವನ್ನು ಗೆಲುವಿನ ಸನಿಹ ಕೊಂಡೊಯ್ದರು. ಅಂತಿಮ ಓವರ್‌ನಲ್ಲಿ 11 ರನ್ ಅಗತ್ಯವಿದ್ದಾಗ ಆಲ್‌ರೌಂಡರ್ ಅಸೆಲಾ ಗುಣರತ್ನ ವೇಗದ ಬೌಲರ್ ಡ್ಯಾನ್ ಪ್ಯಾಟರ್‌ಸನ್ ಎಸೆತದಲ್ಲಿ ಎರಡು ಬೌಂಡರಿ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X