Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಡಯಾಲಿಸ್‌ನಿಂದ ಶೀಘ್ರ ಶಾಶ್ವತ ಮುಕ್ತಿ!

ಡಯಾಲಿಸ್‌ನಿಂದ ಶೀಘ್ರ ಶಾಶ್ವತ ಮುಕ್ತಿ!

ಕಿಡ್ನಿ ಸಮಸ್ಯೆ ಇರುವವರಿಗೆ ಶುಭ ಸುದ್ದಿ

ವಾರ್ತಾಭಾರತಿವಾರ್ತಾಭಾರತಿ27 Jan 2017 9:27 AM IST
share
ಡಯಾಲಿಸ್‌ನಿಂದ ಶೀಘ್ರ ಶಾಶ್ವತ ಮುಕ್ತಿ!

ಚೆನ್ನೈ, ಜ.27: ಕಿಡ್ನಿ ರೋಗಿಗಳಿಗೆ ಶುಭ ಸುದ್ದಿ. ಇನ್ನು ಜೀವನ ಪರ್ಯಂತ ಡಯಾಲಿಸಿಸ್ ಅವಲಂಬಿಸಬೇಕಾದ ಯಾತನೆ ಇಲ್ಲ. ಹಿಡಿ ಗಾತ್ರದ ಕೃತಕ ಕಿಡ್ನಿ ಈ ದಶಕದ ಅಂತ್ಯದ ಒಳಗಾಗಿ ಮಾರುಕಟ್ಟೆಗೆ ಬರಲಿದೆ. ಈ ಸಾಧನವನ್ನು ಅಮೆರಿಕದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಸರಣಿಯಾಗಿ ಸುರಕ್ಷತೆ ಮತ್ತು ದಕ್ಷತೆಯ ಪರೀಕ್ಷಾರ್ಥ ಪ್ರಯೋಗಗಳು ನಡೆಯುತ್ತಿವೆ. ಅಮೆರಿಕದಲ್ಲಿ ಈಗಾಗಲೇ ನೂರಾರು ರೋಗಿಗಳ ಮೇಲೆ ಈ ಪ್ರಯೋಗ ನಡೆದಿದ್ದು, ಎಫ್‌ಡಿಎ ಕೂಡಾ ಇದನ್ನು ಅಂಗೀಕರಿಸಿದೆ ಎಂದು ಸಹ ಸಂಶೋಧಕ, ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಡಾ.ಶುವೊ ರಾಯ್ ಅವರು ಟ್ಯಾಂಕರ್ ವಾರ್ಷಿಕ ದತ್ತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಕಟಿಸಿದರು.

ಈ ಸಾಧನವನ್ನು ಹೊಟ್ಟೆಯಲ್ಲಿ ಅಳವಡಿಸಲಾಗುವುದು ಹಾಗೂ ಇದಕ್ಕೆ ಪೂರಕವಾಗಿ ಹೃದಯವೇ ರಕ್ತವನ್ನು ಶುದ್ಧೀಕರಿಸುವಂತೆ ಮತ್ತು ಮೂತ್ರಪಿಂಡದ ಇತರ ಕೆಲಸಗಳನ್ನು ನಿರ್ವಹಿಸುವಂತೆ ಮಾಡಲಾಗುತ್ತದೆ. ಹಾರ್ಮೋನ್‌ಗಳ ಉತ್ಪಾದನೆ, ರಕ್ತದ ಒತ್ತಡದಲ್ಲಿ ಸಹಕರಿಸುವುದು ಮತ್ತಿತರ ಕಾರ್ಯಗಳನ್ನು ಹೃದಯವೇ ನಿರ್ವಹಿಸುತ್ತದೆ ಎಂದು ಅವರು ವಿವರ ನೀಡಿದರು. ಸಾಂಪ್ರದಾಯಿಕ ಹಿಮೊಡಯಾಲಿಸಿಸ್‌ಗಿಂತ ಭಿನ್ನವಾಗಿ ಇದು ಕಾರ್ಯನಿರ್ವಹಿಸುತ್ತದೆ. ಹಿಮೊ ಡಯಾಲಿಸಿಸ್ ರಕ್ತದಿಂದ ವಿಷಕಾರಿ ಅಂಶವನ್ನಷ್ಟೇ ಶುದ್ಧೀಕರಿಸಿದರೆ, ಕೃತಕ ಕಿಡ್ನಿಯು, ರಕ್ತವನ್ನು ಶೋಧಿಸುವ ಮ್ಯಾಂಬ್ರೇನ್ ಹೊಂದಿರುತ್ತದೆ. ಜೀವಂತ ಕಿಡ್ನಿಯಲ್ಲಿ ಇರುವ ಕೋಶಗಳನ್ನು ಒಳಗೊಂಡ ಬಯೊ ರಿಯಾಕ್ಟರ್ ಕೂಡಾ ಕೃತಕ ಕಿಡ್ನಿಯಲ್ಲಿ ಇರುತ್ತದೆ. ಇದು ಡಯಾಲಿಸಿಸ್ ಪ್ರಕ್ರಿಯೆಯಲ್ಲಿ ನೆರವಾಗುತ್ತದೆ. ಹಿಂದಿನ ಡಯಾಲಿಸಿಸ್ ವಿಧಾನಕ್ಕಿಂತ ಸಮಗ್ರವಾಗಿ ಇದು ಕಿಡ್ನಿಯ ಪಾತ್ರವನ್ನು ನಿರ್ವಹಿಸುತ್ತದೆ ಎಂದು ಬಹಿರಂಗಪಡಿಸಿದರು.

ಕೊನೆ ಹಂತದ ಮೂತ್ರಪಿಂಡ ರೋಗ ಎನ್ನಲಾದ ತೀವ್ರತರ ರೋಗದಿಂದಾಗಿ ಮೂತ್ರಪಿಂಡವು ದೇಹದ ದ್ರವಗಳಿಂದ ತ್ಯಾಜ್ಯಗಳನ್ನು ಶುದ್ಧೀಕರಿಸಲು ಸಾಧ್ಯವಾಗುವುದಿಲ್ಲ. ಈ ಹಂತದಲ್ಲಿ ರಕ್ತವನ್ನು ಕೃತಕವಾಗಿ ಶುದ್ಧಪಡಿಸಲು ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ. ಹೊಸ ಸಾಧನದಿಂದ ಈ ಎಲ್ಲ ಸಮಸ್ಯೆಗಳುಪರಿಹಾರವಾಗಲಿದೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X