Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಲೆಟ್ ನಿಂದ ಕುರುಡರಾದರೂ ಪರೀಕ್ಷೆಯಲ್ಲಿ...

ಪೆಲೆಟ್ ನಿಂದ ಕುರುಡರಾದರೂ ಪರೀಕ್ಷೆಯಲ್ಲಿ ಬೆಳಗಿದ ಕಶ್ಮೀರಿ ಪೋರರು

ವಾರ್ತಾಭಾರತಿವಾರ್ತಾಭಾರತಿ27 Jan 2017 4:09 PM IST
share
ಪೆಲೆಟ್ ನಿಂದ ಕುರುಡರಾದರೂ ಪರೀಕ್ಷೆಯಲ್ಲಿ ಬೆಳಗಿದ ಕಶ್ಮೀರಿ ಪೋರರು

ಶ್ರೀನಗರ, ಜ.27: ಬುರ್ಹಾನ್ ವಾನಿಯ ಹತ್ಯೆಯ ನಂತರ ಕಾಶ್ಮೀರ ಕಣಿವೆಯಲ್ಲಿ ತಿಂಗಳುಗಳ ಕಾಲ ನಡೆದ ಹಿಂಸಾಚಾರದ ಸಂದರ್ಭ ಸುರಕ್ಷಾ ಪಡೆಗಳು ನಡೆಸಿದ ಪೆಲೆಟ್ ಗುಂಡಿನ ದಾಳಿಗಳಲ್ಲಿ ಅನೇಕ ಅಮಾಯಕರು ತಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ. ಅವರಲ್ಲಿ ಹಲವು ವಿದ್ಯಾರ್ಥಿಗಳೂ ಸೇರಿದ್ದಾರೆ. ಇತ್ತೀಚೆಗಷ್ಟೇ ಘೋಷಿತವಾದ 12ನೆ ತರಗತಿಯ ಸ್ಟೇಟ್ ಬೋರ್ಡ್ ಪರೀಕ್ಷೆಯಲ್ಲಿ ಪೆಲೆಟ್ ದಾಳಿಯಿಂದಾಗಿ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಹಲವು ವಿದ್ಯಾರ್ಥಿಗಳು ಧೃತಿಗೆಡದೆ ಪರೀಕ್ಷೆಗೆ ಹಾಜರಾಗಿ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದಾರೆ.

ಅವರಲ್ಲೊಬ್ಬ 18 ವರ್ಷದ ಸುಹೈಲ್ ಗುಲ್ ಮಿರ್. ಪುಲ್ವಾಮ ಜಿಲ್ಲೆಯ ರೊಹ್ಮೂ ಗ್ರಾಮದ ನಿವಾಸಿಯಾದ ಜುಲೈ 8ರಂದು ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಆತ ಸುರಕ್ಷಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಸಿಲುಕಿದ್ದನು. ಆತನ ಎಡಗಣ್ಣಿಗೆ ಪೆಲೆಟ್ ನುಗ್ಗಿತ್ತು. ಹಲವಾರು ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಯ ನಂತರವೂ ಆತನ ಒಂದು ಕಣ್ಣಿನ ದೃಷ್ಟಿ ಮರಳಲೇ ಇಲ್ಲ. ಆದರೂ ನವೆಂಬರ್ ತಿಂಗಳಲ್ಲಿ ನಡೆದ 12ನೆ ತರಗತಿ ಪರೀಕ್ಷೆಯಲ್ಲಿ ಆತ ಕಲಾ ವಿಭಾಗದಲ್ಲಿ ಶೇ.75 ಅಂಕಗಳನ್ನು ಪಡೆದು ಭೇಷ್ ಎನಿಸಿಕೊಂಡಿದ್ದಾನೆ.

ಸುಹೈಲ್ ನಂತೆಯೇ ಪ್ಯಾಂಪೋರ್ ನಗರದ 16 ವರ್ಷದ ತಬಿಶ್ ರಫೀಖ್ ಭಟ್ ಎಂಬವನ ಎಡಗಣ್ಣು ಕೂಡ ಪೆಲೆಟ್ ದಾಳಿಯಿಂದಾಗಿ ಕುರಡಾಗಿದೆ. ಆತನಿಗೆ ದೃಷ್ಟಿ ಮರಳಿ ಬರುವ ಸಾಧ್ಯತೆಯಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಹತ್ತನೆ ತರಗತಿ ಪರೀಕ್ಷೆಯಲ್ಲಿ ಆತನಿಗೆ 7 ಸಿಎಜಿಪಿ ಅಂಕಗಳು ದೊರೆತಿವೆ. ಇನ್ನೊಬ್ಬ ಬಾಲಕ 16 ವರ್ಷದ ಸುಹೈಬ್ ನಝೀರ್‌ ಬಲಗಣ್ಣು ಪೆಲೆಟ್ ನಿಂದಾಗಿ ಬಾಧಿತವಾಗಿದೆ. ಆತ ಕೂಡ ಹತ್ತನೆ ತರಗತಿ ಪರೀಕ್ಷೆಯಲ್ಲಿ 7.2 ಸಿಎಜಿಪಿ ಅಂಕಗಳು ದೊರೆತಿವೆ.
ತಮ್ಮ ನೋವಿನ ನಡುವೆಯೂ ಈ ಬಾಲಕರು ತಮ್ಮ ಶಿಕ್ಷಣ ಮುಂದುವರಿಸಲು ತೋರಿಸಿದ ಉತ್ಸಾಹ ಹಲವರಿಗೆ ಸ್ಫೂರ್ತಿಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X