Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಜಲ್ಲಿಕಟ್ಟುಗೆ ಬೆದರಿದ ಸಿಂಗಂ 3

ಜಲ್ಲಿಕಟ್ಟುಗೆ ಬೆದರಿದ ಸಿಂಗಂ 3

ವಾರ್ತಾಭಾರತಿವಾರ್ತಾಭಾರತಿ27 Jan 2017 7:48 PM IST
share
ಜಲ್ಲಿಕಟ್ಟುಗೆ ಬೆದರಿದ ಸಿಂಗಂ 3

ಸೂರ್ಯ ಅಭಿನಯದ ‘ಸಿಂಗಂ’ ತಮಿಳಿನಲ್ಲಿ ಸಖತ್ ಕ್ರೇಝ್ ಸೃಷ್ಟಿಸಿದ ಚಿತ್ರ. ಪರಭಾಷಾ ಪ್ರೇಕ್ಷಕರನ್ನೂ ಮೋಡಿ ಮಾಡಿದ ಈ ಚಿತ್ರ ಬಾಲಿವುಡ್‌ಗೆ ರಿಮೇಕ್ ಆಗಿ ಗಲ್ಲಾಪೆಟ್ಟಿಗೆಯನ್ನು ಸೂರೆ ಹೊಡೆದಿತ್ತು. ಸೂರ್ಯ ಅಭಿಯನದ ‘ಸಿಂಗಂ 2’ ಕೂಡಾ ಪ್ರೇಕ್ಷಕರ ಭರ್ಜರಿ ಮೆಚ್ಚುಗೆ ಗಳಿಸಿತ್ತು. ಈ ಚಿತ್ರಗಳ ಮುಂದುವರಿದ ಭಾಗ ‘ಸಿಂಗಂ 3’, ಜನವರಿ 26ರಂದು ತೆರೆಯಲ್ಲಿ ಗರ್ಜಿಸಬೇಕಿತ್ತು. ಆದರೆ ಜಲ್ಲಿಕಟ್ಟು ನಿಷೇಧದ ವಿರುದ್ಧ ತಮಿಳುನಾಡಿನಲ್ಲಿ ಕಳೆದ ವಾರ ಪ್ರತಿಭಟನೆ ಭುಗಿಲೆದ್ದ ಕಾರಣ, ನಿರ್ಮಾಪಕರು ಚಿತ್ರದ ಬಿಡುಗಡೆಯನ್ನು ಕೊಂಚ ಮುಂದೂಡಿದ್ದಾರೆ.

ತಮಿಳುನಾಡಿನಲ್ಲಿ ಪರಿಸ್ಥಿತಿ ಸಹಜತೆಯೆಡೆಗೆ ಮರಳಿದ ಬಳಿಕ ‘ಸಿಂಗಂ 3’ ಬಿಡುಗಡೆಯ ದಿನಾಂಕವನ್ನು ನಿರ್ಮಾಪಕರು ಪ್ರಕಟಿಸಲಿದ್ದಾರೆ. ಹಾಗೆ ನೋಡಿದರೆ ಸಿಂಗಂ3 ಬಿಡುಗಡೆ ಮುಂದೆ ಹೋಗಿರುವುದು ಇದು ಎರಡನೆ ಸಲವಾಗಿದೆ. ಅಂದರೆ, ಕಳೆದ ವರ್ಷ ಡಿಸೆಂಬರ್ 16ರಂದು ಚಿತ್ರ ಬಿಡುಗಡೆಗೊಳ್ಳುವ ನಿರೀಕ್ಷೆಯಿತ್ತು. ಆದರೆ ತಮಿಳುನಾಡಿನಲ್ಲಿ ವಾರ್ಧಾ ಚಂಡಮಾರುತದ ಹಾವಳಿಯ ಹಿನ್ನೆಲೆಯಲ್ಲಿ ಬಿಡುಗಡೆಯನ್ನು ಜನವರಿ 26ಕ್ಕೆ ಮುಂದೂಡಲಾಗಿತ್ತು. ಒಟ್ಟಿನಲ್ಲಿ ‘ಸಿಂಗಂ 3’ ಆಗಮನ ವಿಳಂಬವಾಗಿರುವುದು ಸೂರ್ಯ ಅಭಿಮಾನಿಗಳಿಗೆ ನಿರಾಶೆಯುಂಟು ಮಾಡಿದೆ

ಅದೇನೇ ಇದ್ದರೂ ‘ಸಿಂಗಂ3’ ಬಿಡುಗಡೆ ಮುಂದೂಡಲ್ಪಟ್ಟಿರುವುದು, ಈ ವಾರ ತೆರೆಕಂಡ ಬಾಲಿವುಡ್ ಚಿತ್ರ ಗಳಾದ ರಯೀಸ್ ಹಾಗೂ ಕಾಬಿಲ್‌ಗೆ ಪ್ರಯೋಜನವಾಗಿದೆ. ಇಲ್ಲದಿದ್ದಲ್ಲಿ ಈ ಎರಡೂ ಚಿತ್ರಗಳು ದಕ್ಷಿಣದ ರಾಜ್ಯಗಳಲ್ಲಿ ಸಿಂಗಂ 3ನೊಂದಿಗೆ ಪ್ರಬಲವಾದ ಪೈಪೋಟಿಯನ್ನೆದುರಿಸಬೇಕಾಗುತ್ತಿತ್ತು.
ಹರಿ ನಿರ್ದೇಶನದ ಸಿಂಗಂ 3ನಲ್ಲಿ ಸೂರ್ಯನಿಗೆ ನಾಯಕಿಯರಾಗಿ ಶ್ರುತಿ ಹಾಸನ್, ಅನುಷ್ಕಾ ಶೆಟ್ಟಿ ನಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X