Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟಾಪ್ ಸಮಿತಿಗೆ ಅಭಿನವ್ ಬಿಂದ್ರಾ ಅಧ್ಯಕ್ಷ

ಟಾಪ್ ಸಮಿತಿಗೆ ಅಭಿನವ್ ಬಿಂದ್ರಾ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ27 Jan 2017 11:29 PM IST
share
ಟಾಪ್ ಸಮಿತಿಗೆ ಅಭಿನವ್ ಬಿಂದ್ರಾ ಅಧ್ಯಕ್ಷ

ಹೊಸದಿಲ್ಲಿ, ಜ.27: ಬೀಜಿಂಗ್ ಒಲಿಂಪಿಕ್ಸ್ ಚಾಂಪಿಯನ್ ಅಭಿನವ್ ಬಿಂದ್ರಾ ಪುನರ್ರಚಿಸಲಾಗಿರುವ ಟಾರ್ಗೆಟ್ ಒಲಿಂಪಿಯನ್ ಪೋಡಿಯಂ(ಟಾಪ್) ಸಮಿತಿಯ ಅಧ್ಯಕ್ಷರಾಗಿ ಶುಕ್ರವಾರ ನೇಮಕಗೊಂಡಿದ್ದಾರೆ. ‘ಓಟದ ರಾಣಿ’ ಖ್ಯಾತಿಯ ಪಿ.ಟಿ.ಉಷಾ ಹಾಗೂ ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತದ ಮಾಜಿ ಶೂಟರ್ ಬಿಂದ್ರಾ ಈ ಹಿಂದೆ ಟಾಪ್ ಸಮಿತಿಯಲ್ಲಿದ್ದರು. 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ತಯಾರಿ ನಡೆಸುವ ಉದ್ದೇಶದಿಂದ ಟಾಪ್ ಸಮಿತಿಯನ್ನು ತೊರೆದಿದ್ದರು.

10 ಸದಸ್ಯರನ್ನು ಒಳಗೊಂಡ ಟಾಪ್ ಸಮಿತಿಯಲ್ಲಿ ಇನ್ನಿಬ್ಬರು ಕ್ರೀಡಾಪಟುಗಳಾದ ಶೂಟರ್ ಅಂಜಲಿ ಭಾಗವತ್ ಹಾಗೂ ಮಹಿಳಾ ವೇಟ್‌ಲಿಫ್ಟರ್, 2000ರ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಕಂಚು ವಿಜೇತೆ ಕರ್ಣಂ ಮಲ್ಲೇಶ್ವರಿ ಅವರಿದ್ದಾರೆ.

 ಸಮಿತಿಯಲ್ಲಿ ಅಖಿಲ ಭಾರತ ಟೆನಿಸ್ ಸಂಸ್ಥೆಯ ಆಜೀವ ಅಧ್ಯಕ್ಷ ಅನಿಲ್ ಖನ್ನಾ, ಬಾಕ್ಸಿಂಗ್ ಆಡಳಿತಾಧಿಕಾರಿ ಪಿ.ಕೆ. ಮುರಳೀಧರನ್ ರಾಜ, ರೈಲ್ವೇಸ್ ಸ್ಪೋರ್ಟ್ಸ್ ಪ್ರಮೋಶನ್ ಬೋರ್ಡ್ ಕಾರ್ಯದರ್ಶಿ ರೇಖಾ ಯಾದವ್, ಎಸ್‌ಎಸ್ ರಾಯ್, ಸಾಯ್ ಜೊತೆ ಕಾರ್ಯದರ್ಶಿ(ಕ್ರೀಡೆ) ಇಂದರ್ ಧಮಿಜಾ ಅವರಿದ್ದಾರೆ.

 ಟಾಪ್ ಯೋಜನೆಯನ್ವಯ 2020 ಹಾಗೂ 2024ರ ಒಲಿಂಪಿಕ್ ಗೇಮ್ಸ್‌ನಲ್ಲಿ ಪದಕ ಗೆಲ್ಲಬಲ್ಲ ಅಥ್ಲೀಟ್‌ಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದು ಟಾಪ್ ಸಮಿತಿಯ ಮುಖ್ಯ ಗುರಿಯಾಗಿದೆ. 2016 ಹಾಗೂ 2020 ಒಲಿಂಪಿಕ್ ಗೇಮ್ಸ್‌ನ್ನು ದೃಷ್ಟಿಯಲ್ಲಿಟ್ಟುಕೊಂಡು ಸಮಿತಿ ರಚಿಸಲಾಗಿದೆ.

ಟಾಪ್ ಯೋಜನೆಯಡಿ ಆಯ್ದ ಅಥ್ಲೀಟ್‌ಗಳಿಗೆ ತರಬೇತಿ ನಡೆಸಲು ಹಣಕಾಸು ನೆರವು ನೀಡುವುದು ಹಾಗೂ ವಿಶ್ವ ದರ್ಜೆ ಸೌಲಭ್ಯ ಕಲ್ಪಿಸುವುದು ಹಾಗೂ ದೇಶಕ್ಕೆ ಪದಕ ಗೆಲ್ಲಲು ಪ್ರದರ್ಶನದ ಮಟ್ಟ ಹೆಚ್ಚಿಸಲು ಅಗತ್ಯವಿರುವ ಬೆಂಬಲ ನೀಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X