Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವರು 'ಅಂಗ್ರೇಝೋನ್ಕೆ ಝಮಾನೆಕೆ ಪೊಲೀಸ್'...

ಇವರು 'ಅಂಗ್ರೇಝೋನ್ಕೆ ಝಮಾನೆಕೆ ಪೊಲೀಸ್' !

115 ವರ್ಷದ ಖಾಝ್ಮಿಯ ವಿಶೇಷತೆ ಒಂದೆರಡಲ್ಲ

ವಾರ್ತಾಭಾರತಿವಾರ್ತಾಭಾರತಿ28 Jan 2017 1:08 PM IST
share
ಇವರು ಅಂಗ್ರೇಝೋನ್ಕೆ ಝಮಾನೆಕೆ ಪೊಲೀಸ್ !

ಹೊಸದಿಲ್ಲಿ, ಜ.28: ಈ ವೃದ್ಧನ ಹೆಸರು ಜುರ್ರತ್ ಹುಸೈನ್ ಕಾಝ್ಮಿ. ಅವರೇ ಹೇಳುವಂತೆ ಅವರ ವಯಸ್ಸು ಸುಮಾರು 115. ನಿಮಗೆ ಕೇಳಿದರೆ ಆಶ್ಚರ್ಯವಾಗಬಹುದು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರ ಪೈಕಿ ಇಷ್ಟು ವಯಸ್ಸಿನವರು ಭಾರತದಲ್ಲಿ ಯಾರೂ ಇಲ್ಲ. ಇವರು ಬ್ರಿಟಿಷರು, ನವಾಬರು ಹಾಗೂ ಭಾರತ ಸರಕಾರದಡಿಯಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದವರು.

ಉತ್ತರ ಪ್ರದೇಶದ ಬರೇಲಿಯವರಾದ ಇವರು ಪ್ರತಿ ಗಣರಾಜ್ಯೋತ್ಸವ ದಿನದಂದು ಬೆಳಗ್ಗೆ 4 ಗಂಟೆಗೆ ಎದ್ದು ತನಗೆ  ಆತ್ಮೀಯ ಗೆಳೆಯನೊಬ್ಬ ನೀಡಿರುವ ತೇಗದ ಮರದ ಪೆಟ್ಟಿಗೆಯೊಳಗಿನಿಂದ ತನಗೆ ದೊರಕಿರುವ ಪದಕಗಳು, ತನ್ನ ಸಿಲ್ಕ್ ಕುರ್ತಾ ಪೈಜಾಮ, ರಾಂಪುರಿ ಟೊಪ್ಪಿ, ಓವರ್ ಕೋಟ್, ಲೆದರ್ ಶೂ ಹೊರತೆಗೆದು ಎಲ್ಲವನ್ನೂ ಶುಚಿಗೊಳಿಸುತ್ತಾರೆ. ಬಟ್ಟೆಗಳಿಗೆ ಇಸ್ತ್ರಿ ಮಾಡಿ, ಶೂ ಪಾಲಿಶ್ ಮಾಡಿ ಅವುಗಳನ್ನು ಧರಿಸಿ ಬರೇಲಿಯಲ್ಲಿ ಅವರಿಗಾಗಿ ಪ್ರತಿ ವರ್ಷ ಆಯೋಜಿಸಲಾಗುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಆದರೆ ಈ ಬಾರಿ ಅವರಿಗೆ ಉಸಿರಾಟದ ಸಮಸ್ಯೆ ಒಮ್ಮೆಗೇ ಕಾಣಿಸಿಕೊಂಡಿದ್ದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ.

1922ರಲ್ಲಿ ಬ್ರಿಟಿಷರ ಆಡಳಿತ ಸಮಯದಲ್ಲಿ ಅವರು ಇಂಪೀರಿಯಲ್ ಪೊಲೀಸ್ ಸೇವೆಗೆ ಸೇರಿದ್ದರು. ಅವರ ಕುಟುಂಬಕ್ಕೆ ಮೊರಾದಾಬಾದ್ ನ ಕುಲ್ಬಾರ ಗ್ರಾಮದಲ್ಲಿ ಸುಮಾರು 2,000 ಹೆಕ್ಟೇರ್ ಭೂಮಿಯಿತ್ತು. ಅವರಿಗೆ ಉದ್ಯೋಗ ಮಾಡಬೇಕೆಂದೇನೂ ಇರಲಿಲ್ಲ. ಸುಮ್ಮನೆ ಹಾಗೆಯೇ ಪೊಲೀಸ್ ನೇಮಕಾತಿ ಶಿಬಿರಕ್ಕೆ ಹೋಗಿ ಭಾಗವಹಿಸಿದ್ದ ಅವರು ಅತ್ಯುತ್ತಮ ಅಭ್ಯರ್ಥಿಯಾಗಿ ನೇಮಕಾತಿ ಪಡೆದಿದ್ದರು. 1947ರಲ್ಲಿ ನವಾಬ್ ರಝಾ ಅಲಿ ಖಾನ್ ಇಂಪೀರಿಯಲ್ ಪೊಲೀಸ್ ತಮ್ಮ ವಶಕ್ಕೆ ತೆಗೆದುಕೊಂಡಿದ್ದರೆಂದು ಕಾಝ್ಮಿ ನೆನಪಿಸಿಕೊಳ್ಳುತ್ತಾರೆ. ಸ್ವಾತಂತ್ರ್ಯಾನಂತರ ಅವರು ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನಸ್ಟೇಬಲ್ ಆಗಿ ಸೇರಿದ್ದರು. ಕಾಝ್ಮಿಗೆ ಒಟ್ಟು ಹತ್ತು ಮಕ್ಕಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X