Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಸೀದಿಗೆ ಕಲ್ಲೆಸೆದು ಪರಾರಿ: ಸಿಸಿಟಿವಿ...

ಮಸೀದಿಗೆ ಕಲ್ಲೆಸೆದು ಪರಾರಿ: ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ವಾರ್ತಾಭಾರತಿವಾರ್ತಾಭಾರತಿ29 Jan 2017 10:17 AM IST
share
ಮಸೀದಿಗೆ ಕಲ್ಲೆಸೆದು ಪರಾರಿ: ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಉಡುಪಿ, ಜ.29: ಆದಿಉಡುಪಿಯ ನೂರುಲ್ ಇಸ್ಲಾಮ್ ಮಸೀದಿಗೆ ಜ.28ರಂದು ಮಧ್ಯರಾತ್ರಿ ವೇಳೆ ಅಪರಿಚಿತ ಕಿಡಿಗೇಡಿಯೊಬ್ಬ ಕಿಟಕಿಗಳ ಗಾಜುಗಳಿಗೆ ಕಲ್ಲು ಎಸೆದು ಹಾನಿಗೊಳಿಸಿ ಪರಾರಿಯಾಗಿದ್ದು, ಈ ದೃಶ್ಯ ಮಸೀದಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾತ್ರಿ 12.14ರ ಸುಮಾರಿಗೆ ಮಸೀದಿಯ ಗೇಟಿನಿಂದ ಕಲ್ಲನ್ನು ಕೈಯಲ್ಲಿ ಹಿಡಿದುಕೊಂಡ ಬಂದ ಸುಮಾರು 30ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಮಸೀದಿಯ ಮುಖ್ಯದ್ವಾರದ ಎರಡು ಬದಿಯ ಕಿಟಕಿಗಳಿಗೆ ಲ್ಲೆಸೆದು ಗಾಜನ್ನು ಪುಡಿಗೈದನು.

ಬಳಿಕ ಆತ ಅಲ್ಲಿಂದ ಹೊಗರಡೆ ಓಡಿ ಹೋಗಿ ರಸ್ತೆ ಬದಿ ನಿಲ್ಲಿಸಿದ ಬೈಕಿ ನಲ್ಲಿ ಮಲ್ಪೆ ಕಡೆಗೆ ಪರಾರಿಯಾದನು. ಕಿಡಿಗೇಡಿ ಕೇಸರಿ ಬಣ್ಣದ ಶರ್ಟ್ ಹಾಗೂ ತ್ರೀಫೋರ್ತ್ ಪ್ಯಾಂಟ್ ಧರಿಸಿದ್ದನು. ಈ ಎಲ್ಲ ದೃಶ್ಯಗಳು ಮಸೀದಿ ಯಲ್ಲಿ ಅಳವಡಿಸಲಾದ ಎರಡು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದು ಬೆಳಗ್ಗೆ 5.15ರ ಸುಮಾರಿಗೆ ಮಸೀದಿಗೆ ಆಝಾನ್ ಕೊಡಲು ಬಂದ ಧರ್ಮಗುರುವಿಗೆ ಈ ವಿಚಾರ ತಿಳಿದುಬಂತು.

ಇದೇ ವ್ಯಕ್ತಿ ರಾತ್ರಿ ವೇಳೆ ಮಸೀದಿ ಮುಂದಿನ ರಸ್ತೆಯಲ್ಲಿ ತಿರುಗಾಡುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆನ್ನಲಾಗಿದೆ. ಈತನನ್ನು ಕಾರೊಂದರಲ್ಲಿ ಮಸೀದಿಯ ಮುಂದೆ ಇಳಿಸಿ ಹೋಗಿರುವುದನ್ನು ಕಂಡಿದ್ದು, ಕೃತ್ಯ ಎಸಗಿದ ಬಳಿಕ ಆತ ಅಲ್ಲೇ ಇದ್ದ ಬೈಕಿನಲ್ಲಿ ಪರಾರಿಯಾಗಿರುವುದಾಗಿ ಸ್ಥಳೀಯರು ಪತ್ರಿಕೆಗೆ ತಿಳಿಸಿದ್ದಾರೆ.

 ಇದು ಮೂರನೆ ದಾಳಿ:

ಸುಮಾರು 20ವರ್ಷಗಳ ಹಿಂದೆ ಇಲ್ಲಿನ ಹಳೆಯ ಮಸೀದಿಯ ಮೇಲೆ ಕಿಡಿಗೇಡಿಗಳು ರಾತ್ರಿ ಹೊತ್ತು ಕಲ್ಲು ತೂರಾಟ ಮಾಡಿ ಹಾನಿ ಎಸಗಿದ್ದರು. ನಂತರ ಸುಮಾರು 10ವರ್ಷಗಳ ಹಿಂದೆ ರಾತ್ರಿ ಹೊತ್ತು ಹೊಸ ಮಸೀದಿಯ ಮೂರು ನಾಲ್ಕು ಗಾಜುಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿತ್ತು. ಈ ಎರಡು ಪ್ರಕಣದ ಆರೋಪಿಗಳ ಬಂಧನವಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಸೀದಿಯ ಸುತ್ತ ಸಿಸಿಟಿವಿಯನ್ನು ಅಳವಡಿಸಲಾಗಿತ್ತು. ಆದರೂ ಇದೀಗ ನಿನ್ನೆ ಮೂರನೆ ದಾಳಿ ನಡೆದಿದೆ. ಆರೋಪಿಯ ಎಲ್ಲ ಗುರುತುಗಳು ಇರುವ ದೃಶ್ಯ ಇರುವುದರಿಂದ ಕೂಡಲೇ ಬಂಧಿಸಿ ಆತನ ಹಿಂದೆ ಇರುವ ಶಕ್ತಿಯನ್ನು ಬಯಲಿಗೆ ಎಳೆಯಬೇಕು ಎಂದು ಸ್ಥಳೀಯರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ, ಉಡುಪಿ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮೂರು ತಂಡ ರಚನೆ

‘ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪತ್ತೆ ಹಚ್ಚಲು ಉಡುಪಿ ಡಿವೈಎಸ್ಪಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ’ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ದನ್ ತಿಳಿಸಿದ್ದಾರೆ.


ಉಡುಪಿ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕರು ಹಾಗೂ ಮಣಿಪಾಲ ಪೊಲೀಸ್ ನಿರೀಕ್ಷಕರ ಮೂರು ತಂಡ ಆರೋಪಿಯ ಶೋಧ ಕಾರ್ಯ ನಡೆಸುತ್ತಿದೆ. ಈಗಾಗಲೇ ಸಿಸಿಟಿವಿಯಲ್ಲಿ ಸೆರೆಯಾಗಿರುವ ವ್ಯಕ್ತಿಯ ಫೋಟೋ ವನ್ನು ಬೇರೆ ಬೇರೆ ಠಾಣೆಗಳಿಗೆ ಕಳುಹಿಸಿ ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಸದ್ಯಕ್ಕೆ ಇದರಲ್ಲಿ ಒಬ್ಬ ಭಾಗಿಯಾಗಿರುವಂತೆ ಕಂಡುಬರುತ್ತಿದ್ದು, ಮುಂದೆ ತನಿಖೆಯಿಂದ ಎಲ್ಲ ವಿಚಾರ ತಿಳಿಯಬೇಕಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X