Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಇಂದು ನಾನು ಕಾಂಗ್ರೆಸ್ ತ್ಯಜಿಸಿದ್ದೇನೆ...

​ಇಂದು ನಾನು ಕಾಂಗ್ರೆಸ್ ತ್ಯಜಿಸಿದ್ದೇನೆ : ಎಸ್ .ಎಂ.ಕೃಷ್ಣ

ವಾರ್ತಾಭಾರತಿವಾರ್ತಾಭಾರತಿ29 Jan 2017 12:38 PM IST
share
​ಇಂದು ನಾನು ಕಾಂಗ್ರೆಸ್ ತ್ಯಜಿಸಿದ್ದೇನೆ : ಎಸ್ .ಎಂ.ಕೃಷ್ಣ

ಬೆಂಗಳೂರು. ಜ.29:" ಇಂದು ನಾನು ಕಾಂಗ್ರೆಸ್ ತ್ಯಜಿಸಿದ್ದೇನೆ. ರಾಜೀನಾಮೆ ನಿರ್ಧಾರಕ್ಕೆ ನಾನು ಬದ್ದನಾಗಿದ್ದೇನೆ ''ಎಂದು ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ  ಇಂದು ಮಾತನಾಡಿದ ಅವರು "ಸಕ್ರೀಯ ರಾಜಕೀಯದಿಂದ ನಿವೃತ್ತನಾಗುವುದಿಲ್ಲ.ಹಿರಿತನಕ್ಕೆ ಬೆಲೆ ಇಲ್ಲದ ಪಕ್ಷಕ್ಕೆ ಬೆಲೆ ಇರುವುದಿಲ್ಲ. ಈ ಕಾರಣದಿಂದ ಬಹಳ ನೋವಿನಿಂದ ಕಾಂಗ್ರೆಸ್  ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ" ಎಂದು ಕೃಷ್ಣ ಸ್ಪಷ್ಟಪಡಿಸಿದರು.

"ನಿವೃತ್ತಿ ಎನ್ನುವ ಪದ ರಾಜಕಾರಣಿಗಳ  ಪದಕೋಶದಲ್ಲಿಲ್ಲ. ಆದರೆ ಆತ್ಮ ಗೌರವ, ಸ್ವಾಭಿಮಾನದ ಹಿನ್ನೆಲೆಯಲ್ಲಿ ಪಕ್ಯವನ್ನು ತ್ಯಜಿಸಿದ್ದೇನೆ ಎಂದರು. ವಿದೇಶಾಂಗ ಸಚಿವ ಸ್ಥಾನದಿಂದ ತೆಗೆದು ಹಾಕಿದರು. ಆದರೆ ಬಳಿಕ ಬಂದವರು ಏನು ಮಾಡಿದರೆಂದು ಗೊತ್ತಿಲ್ಲ. ರಾಜ್ಯಸಭಾ ಸದಸ್ಯ ಸ್ಥಾನಕ್ಕೂ ನನ್ನನ್ನು ಪರಿಗಣಿಸಲಿಲ್ಲ" ಎಂದು ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದರು.

ನಾನು ಮಾಡದಿರುವುದೇನು ?ಅವರು ಮಾಡಿದ್ದೇನು  ? ಗೊತ್ತಿಲ್ಲ. ಅಷ್ಟಕ್ಕೂ ನನ್ನನ್ನು ಸಚಿವ ಸ್ಥಾನದಿಂದ ತೆಗೆದದ್ದು ಯಾಕೆ ? ಎಂಬ ಪ್ರಶ್ನೆಗೆ ಇನ್ನೂ  ಉತ್ತರ ಸಿಕ್ಕಿಲ್ಲ ಇದು ನನಗೆ ತುಂಬಾ ನೋವುಂಟು ಮಾಡಿದೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿದವನು ನಾನು ಎಂದು ಹೇಳುವುದಿಲ್ಲ. ಆದರೆ ಅವರನ್ನು ಸೇರಿಸುವಲ್ಲಿ ನನ್ನ ಸಣ್ಣ ಪ್ರಯತ್ನ ಇದೆ '' ಎಂದರು. 

ನಾನು ರಾಜೀನಾಮೆ ನೀಡಿದ ಬಳಿಕ ಹಲವರು ಕರೆ ಮಾಡಿದರು. ದಿಲ್ಲಿಯಿಂದಲೂ ಪೋನ್ ಮಾಡಿದರು. ಅವರಿಗೆಲ್ಲ ನಾನು ಚಿರಋಣಿಯಾಗಿರುವೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ  ಅವರು ನನಗೆ ಗೌರವ ನೀಡಿದ್ಬದಾರೆ ಅವರ ಬಗ್ಗೆ  ಅಪಾರ ಗೌರವ ಇದೆ. ಅವರ  ಆರೋಗ್ಯದಲ್ಲಿ ಸುಧಾರಣೆಯಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ'' ಎಂದು ಹೇಳಿದರು.

ಇವತ್ತು ನನ್ನ  ರಾಜಕೀಯ ಜೀವನದ ನೋವಿನ ದಿನ.47 ವರ್ಷಗಳಲ್ಲಿ  ಇದ್ದ ಮನೆಯನ್ನು  ನೋವಿನಿಂದ ಕಾಂಗ್ರೆಸ್ ಪಕ್ಷದಿಂದ ಬಿಟ್ಟು ಹೋಗುತ್ತಿದ್ದೇನೆ. ವಯಸ್ಸು ಪ್ರಾಕೃತಿಕ ನಿಯಮ. ವಯಸ್ಸಿನ ಕಾರಣದಿಂದ ಯಾರನ್ಡೆನೂ ಕಡೆಗಣಿಸುವುದು ಸರಿಯಲ್ಲ. ಪಕ್ಷ ತೊರೆದ ನಿರ್ಧಾದಿಂದ ಹಿಂದಕ್ಕೆ ಸರಿಯುವುದಿಲ್ಲ. ಕಾಲವು ಎಲ್ಲವನ್ನು ನಿರ್ಣಯ ಮಾಡುತ್ತದೆ. ಮುಂದಿನ ರಾಜಕೀಯ ನಡೆಯನ್ನು ಶೀಘ್ರದಲ್ಲೇ ನಿರ್ಧಾರ ಮಾಡುವೆ ಎಂದು ಹೇಳಿದರು.

ಜನಸಮುದಾಯದ ನಾಯಕರು ಬೇಕಾಗಿಲ್ಲ. ಪರಿಸ್ಥಿತಿಯನ್ನು ನಿಯಂತ್ರಿಸುವ ಮ್ಯಾನೇಜರುಗಳು ಇದ್ದರೆ ಸಾಕು ಎಂಬ ಭಾವನೆ ಕಾಂಗ್ರೆಸ್ ನ ನಾಯಕರಿಲ್ಲದೆ ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ   ಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X