Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿ ಸಮಿತಿಯ ನಿರ್ಧಾರಕ್ಕೆ...

ಜಿಎಸ್‌ಟಿ ಸಮಿತಿಯ ನಿರ್ಧಾರಕ್ಕೆ ಪ್ರತಿಭಟನೆ : ಕರಿಪಟ್ಟಿ ಧರಿಸಿ ಕೆಲಸ ಮಾಡಲು ತೆರಿಗೆ ಇಲಾಖೆ ಸಿಬ್ಬಂದಿಗಳ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ29 Jan 2017 7:28 PM IST
share
ಜಿಎಸ್‌ಟಿ  ಸಮಿತಿಯ ನಿರ್ಧಾರಕ್ಕೆ ಪ್ರತಿಭಟನೆ : ಕರಿಪಟ್ಟಿ ಧರಿಸಿ ಕೆಲಸ ಮಾಡಲು ತೆರಿಗೆ ಇಲಾಖೆ ಸಿಬ್ಬಂದಿಗಳ ನಿರ್ಧಾರ

ಹೊಸದಿಲ್ಲಿ, ಜ.29: ವಿತ್ತ ಸಚಿವ ಅರುಣ್ ಜೇಟ್ಲೀ ನೇತೃತ್ವದ ಜಿಎಸ್‌ಟಿ (ಸರಕು ಸೇವಾ ತೆರಿಗೆ) ಸಮಿತಿ ಇತ್ತೀಚೆಗೆ ಕೈಗೊಂಡ ಕೆಲವು ನಿರ್ಧಾರಗಳನ್ನು ಪ್ರತಿಭಟಿಸಿ, ಹುತಾತ್ಮ ದಿನಾಚರಣೆಯಾದ ಇಂದು (ಜ.30) ಸುಮಾರು 70 ಸಾವಿರದಷ್ಟು ತೆರಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಗೆ ಕರಿಯ ಪಟ್ಟಿ ಧರಿಸಿಕೊಂಡು ಕೆಲಸ ಮಾಡಲಿದ್ದಾರೆ.

  ಈ ನಿರ್ಧಾರಗಳು ರಾಜ್ಯ ಸರಕಾರದ ಪರವಾಗಿದ್ದು , ತೆರಿಗೆ ವಿಧಿಸುವ ಮತ್ತು ಸಂಗ್ರಹಿಸುವ ಕೇಂದ್ರ ಸರಕಾರದ ಸಾರ್ವಭೌಮತೆಯ ಪರವಾಗಿಲ್ಲ ಎಂದು ತಿಳಿಸಿರುವ ಸೆಂಟ್ರಲ್ ಬೋರ್ಡ್ ಆಫ್ ಎಕ್ಸೈಸ್ ಆ್ಯಂಡ್ ಕಸ್ಟಮ್ಸ್‌ನ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಂಘಟನೆ , ಯಾವುದೇ ನಿರ್ಧಾರವು ತರ್ಕಸಮ್ಮತ ಮತ್ತು ಪಾರದರ್ಶಕವಾಗಿರಬೇಕು ಎಂದಿದೆ.

   ಅದಾಗ್ಯೂ, ಜಿಎಸ್‌ಟಿ ಸಮಿತಿಯ ಇತ್ತೀಚಿನ ಸಭೆಯಲ್ಲಿ ಕೈಗೊಂಡ ನಿರ್ಧಾರದಿಂದ ಜಿಎಸ್‌ಟಿಯ ಮೂಲ ಸ್ವರೂಪದಲ್ಲೇ ರಾಜಿ ಮಾಡಿಕೊಂಡಂತಾಗಿದೆ. ಇದರಿಂದ ಹೆಚ್ಚಿನ ಗೊಂದಲ ಸೃಷ್ಟಿಯಾಗಲಿದ್ದು ಇದು ತೆರಿಗೆ ಸಂಗ್ರಹ ಕಾರ್ಯಕ್ಕೆ ಮಾತ್ರವಲ್ಲ, ವ್ಯಾಪಾರ, ವಾಣಿಜ್ಯ ಮತ್ತು ಕೈಗಾರಿಕೆಗಳಿಗೂ ಹಾನಿಕಾರಕವಾಗಿದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.

     ಸಮಿತಿಯು ಜ.16ರಂದು ನಡೆಸಿದ ಸಭೆಯಲ್ಲಿ 12 ನಾಟಿಕಲ್ ಮೈಲು ಪ್ರಾದೇಶಿಕ ವ್ಯಾಪ್ತಿಯಲ್ಲಿ ನಡೆಯುವ ಆರ್ಥಿಕ ಚಟುವಟಿಕೆಗಳ ಮೇಲೆ ತೆರಿಗೆ ವಿಧಿಸುವ , ವಾರ್ಷಿಕ 1.5 ಕೋಟಿ ರೂ.ಗಿಂತ ಕಡಿಮೆ ಪಾವತಿಯಾಗುವ ತೆರಿಗೆ ಪ್ರಕರಣಗಳನ್ನು ನಿರ್ವಹಿಸುವ ಅಧಿಕಾರ ಸೇರಿದಂತೆ ಕೆಲವು ಪ್ರಮುಖ ಅಧಿಕಾರವನ್ನು ರಾಜ್ಯಗಳಿಗೆ ನೀಡಲಾಗಿತ್ತು. ಈ ನಿರ್ಧಾರಗಳನ್ನು ಕೂಡಲೇ ಪರಿಷ್ಕರಿಸುವ ಅಗತ್ಯವಿದೆ ಎಂದು ಸಂಘಟನೆ ಆಗ್ರಹಿಸುತ್ತಿದೆ.

 ನಾವು ಸಾಂವಿಧಾನಿಕ ರೀತಿಯಲ್ಲಿ ಪ್ರತಿಭಟನೆ ಆರಂಭಿಸುತ್ತಿದ್ದು ಆರಂಭಿಕ ಹಂತವಾಗಿ ಜ.30ರಂದು ಕರಿಪಟ್ಟಿ ಧರಿಸಿ ಕೆಲಸ ನಿರ್ವಹಿಸಲಿದ್ದೇವೆ ಎಂದು ಸಂಘಟನೆಯ ಮೂಲಗಳು ತಿಳಿಸಿವೆ. ಇಂಡಿಯನ್ ರೆವೆನ್ಯೂ ಸರ್ವಿಸ್, ಆಲ್ ಇಂಡಿಯಾ ಅಸೋಸಿಯೇಷನ್ ಆಫ್ ಸೆಂಟ್ರಲ್ ಎಕ್ಸೈಸ್ ಗಝೆಟೆಡ್ ಎಕ್ಸಿಕ್ಯೂಟಿವ್ ಆಫೀಸರ್ಸ್, ಆಲ್ ಇಂಡಿಯಾ ಸೆಂಟ್ರಲ್ ಎಕ್ಸೈಸ್ ಇನ್‌ಸ್ಪೆಕ್ಟರ್ಸ್ ಅಸೋಸಿಯೇಷನ್, ಆಲ್ ಇಂಡಿಯಾ ಸೆಂಟ್ರಲ್ ಎಕ್ಸೈಸ್ ಆ್ಯಂಡ್ ಸರ್ವಿಸ್ ಟ್ಯಾಕ್ಸ್ ಮಿನಿಸ್ಟೀರಿಯಲ್ ಆಫೀಸರ್ಸ್ ಅಸೋಸಿಯೇಷನ್‌ನ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X