Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 2020 ಹಾಗೂ 2024ರ ಓಲಂಪಿಕ್ಸ್‌ಗೆ ಆಯ್ಕೆ...

2020 ಹಾಗೂ 2024ರ ಓಲಂಪಿಕ್ಸ್‌ಗೆ ಆಯ್ಕೆ ಪ್ರಕ್ರಿಯೆಗೆ ಆಳ್ವಾಸ್ ಆತಿಥ್ಯ

ಜ.30, 31ರಂದು ಮೂಡುಬಿದಿರೆಯ ಸ್ವರಾಜ್ಯ ಮೈದಾನಕ್ಕೆ 800 ಕ್ರೀಡಾಪಟುಗಳ ಆಗಮನ

ವಾರ್ತಾಭಾರತಿವಾರ್ತಾಭಾರತಿ29 Jan 2017 7:56 PM IST
share
2020 ಹಾಗೂ 2024ರ ಓಲಂಪಿಕ್ಸ್‌ಗೆ ಆಯ್ಕೆ ಪ್ರಕ್ರಿಯೆಗೆ ಆಳ್ವಾಸ್ ಆತಿಥ್ಯ

ಮೂಡುಬಿದಿರೆ , ಜ.29 : 2020 ಹಾಗೂ 2024 ಓಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುಗಳ ಆಯ್ಕೆಗಾಗಿ ಜ.30 ಹಾಗೂ 31ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಬೃಹತ್ ಕ್ರೀಡಾಪಟುಗಳ ಆಯ್ಕೆ ಕಾರ್ಯಕ್ರಮಕ್ಕೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆತಿಥ್ಯ ನೀಡಲಿದ್ದು, ದಕ್ಷಿಣ ಭಾರತದ 6 ರಾಜ್ಯಗಳ 800 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಯುವ ಸಹಕಾರಿ ಸಂಸ್ಥೆಯ ನೇತೃತ್ವದಲ್ಲಿ ಪ್ರಥಮ ಹಂತದಲ್ಲಿ ನಡೆಯುವ ಈ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಕ್ರೀಡಾಳುಗಳನ್ನು ರಾಷ್ಟಮಟ್ಟಕ್ಕೆ ಆಯ್ಕೆಯಾಗುತ್ತಾರೆ. ನಂತರ 2020 ಮತ್ತು 2024ರ ಓಲಂಪಿಕ್ಸ್ ಭಾಗವಹಿಸುವ ಕ್ರೀಡಾಪಟುಗಳನ್ನು ಆರಿಸಲಾಗುತ್ತದೆ.

ಈ ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಪಾರದರ್ಶಕತೆಯಿಂದ ಕೂಡಿರಲಿದ್ದು, ಸಂಪೂರ್ಣ ಉಚಿತವಾಗಿರುತ್ತದೆ.  ಆಯ್ಕೆಯಾದ ಕ್ರೀಡಾಪಟುವಿಗೆ ಯಾವುದೇ ತರಬೇತಿಗಳ ಖರ್ಚಿರುವುದಿಲ್ಲ. ಮುಂದಿನ 4ರಿಂದ 8 ವರ್ಷಗಳ ಅವಧಿಗೆ ದೇಶ ವಿದೇಶಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ.

ಈ ಪ್ರಕ್ರಿಯೆಯ ಆತಿಥ್ಯವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಹಿಸಿಕೊಂಡಿದ್ದು, ಒಟ್ಟು ಸುಮಾರು 1000 ಜನರಿಗೆ ವಸತಿ ಹಾಗೂ ವಾಹನ ಹಾಗೂ ಇತರೆ ವ್ಯವಸ್ಥೆಗಳಿಗೆ ತಯಾರಿ ಮಾಡಲಾಗಿದೆ. ಈಗಾಗಲೇ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿರುವ 800 ಮಂದಿ ಕೀಡಾಳುಗಳು ಆಂದ್ರ ಪ್ರದೇಶ, ತೆಲಂಗಾಣ, ಗೋವಾ, ಕೇರಳ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಂದ ಮೂಡುಬಿದಿರೆಗೆ ಜ.30ರಂದು ಆಗಮಿಸಲಿದ್ದಾರೆ. ಇಲ್ಲಿಂದ ಆಯ್ಕೆಯಾದ ಕ್ರೀಡಾಳುಗಳಿಗೆ ಇನ್ನೊಂದು ಆಯ್ಕೆ ಶಿಬಿರವು ದೆಹಲಿಯ ಜವಾರಲಾಲ್ ಮೈದಾನದಲ್ಲಿ ನಡೆಯಲಿದೆ.

ಪಿ.ಟಿ. ಉಷಾರಿಂದ ಉದ್ಘಾಟನೆ:

ಜನವರಿ 30 ರಂದು ಸಾಯಂಕಾಲ 4.30ಕ್ಕೆ ಸ್ವರಾಜ ಮೈದಾನದಲ್ಲಿ ಆಕರ್ಷಕ ಪಥ ಸಂಚಲನದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಶನಲ್ ಯುವ ಕೊ-ಓಪರೆಟಿವ್ ಅದ್ಯಕ್ಷ ರಾಜೇಶ್ ಪಾಂಡೆ ವಹಿಸಿಕೊಳ್ಳಲಿದ್ದಾರೆ.

 ಆಯ್ಕೆ ಶಿಬಿರದ ಉದ್ಘಾಟನೆಯನ್ನು ವೇಗದ ಓಟಗಾರ್ತಿ ಪಿ.ಟಿ. ಉಷಾ ನೇರವೆರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್, ಆಳ್ವಾಸ್ ಪ್ರತಿಷ್ಠಾನದ ಅದ್ಯಕ್ಷ ಡಾ. ಮೋಹನ್ ಆಳ್ವ, ಗೆಲ್ ಇಂಡಿಯನ್ ಸ್ವೀಡ್ ಸ್ಟಾರ್‌ನ ರಾಷ್ಟ್ರೀಯ ಸಂಚಾಲಕ ವಿ. ಮುರಳಿಧರನ್, ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಸಚಿವರಾದ ಬಿ. ನಾಗರಾಜ ಶೆಟ್ಟಿ, ಅಮರನಾಥ ಶೆಟ್ಟಿ, ರಾಜರಾಜೇಶ್ವರಿ ಇನ್‌ಫ್ರಾಟೆಕ್ ಆಡಳಿತ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ದಕ್ಷಿಣ ಭಾರತದ ರಾಜ್ಯಗಳ ಸಂಚಾಲಕರು ಉಪಸ್ಥಿತರಿರುವರು.

ಭಾರತ ಅನಿಲ ಪ್ರಾಧಿಕಾರದ ಕಾರ್ಯಕ್ರಮ
(GAIL) ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಭಾರತವನ್ನು ಉನ್ನತಿಯತ್ತ ತರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸಭೆಯಲ್ಲಿ ಪೆಟ್ರೋಲಿಯಂ ಇಲಾಖೆಯ ಅಧೀನ ಸಂಸ್ಥೆ ಭಾರತ ಅನಿಲ ಪ್ರಾಧಿಕಾರ ಈ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.


ಗೇಲ್‌ನ ಸಿಎಸ್‌ಆರ್ ನಿಧಿಯನ್ನು ಬಳಸಿಕೊಂಡು ಭಾರತದಲ್ಲಿ ವೇಗದ ಓಟಗಾರರನ್ನು ಹುಡುಕುವುಕ್ಕೆ ತೀರ್ಮಾನಿಸಲಾಗಿತ್ತು. ಈ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಲು ದೇಶದಲ್ಲೆಡೆ ಯುವಕರಿಗಾಗಿ ಕೌಶಲ, ಸೆಮಿನಾರ್ ಹಾಗೂ ಸಮ್ಮೇಳನಗಳನ್ನು ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಯುವ ಸಹಕಾರಿ ಸಂಸ್ಥೆಗೆ ವಹಿಸಿಕೊಡಲಾಗಿದೆ.


ಈ ಸಂಸ್ಥೆ ದೇಶದೆಲ್ಲೆಡೆಯಿಂದ 100, 200, 400 ಮೀಟರ್ ವೇಗದ ಓಟಗಾರರನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಿಂದ ಆಯ್ಕೆ ಮಾಡುತ್ತಿದೆ. ಈಗಾಗಲೇ ಈ ಸಂಸ್ಥೆ ದೇಶದ 29 ರಾಜ್ಯದ 660 ಜಿಲ್ಲೆಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿದೆ.


                 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X