Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಣಂತಿ,ಶಿಶು ಮರಣ ಪ್ರಮಾಣದಲ್ಲಿ ತೀವ್ರ...

ಬಾಣಂತಿ,ಶಿಶು ಮರಣ ಪ್ರಮಾಣದಲ್ಲಿ ತೀವ್ರ ಕುಸಿತ: ಸಚಿವ ನಡ್ಡಾ

ವಾರ್ತಾಭಾರತಿವಾರ್ತಾಭಾರತಿ29 Jan 2017 8:16 PM IST
share
ಬಾಣಂತಿ,ಶಿಶು ಮರಣ ಪ್ರಮಾಣದಲ್ಲಿ ತೀವ್ರ ಕುಸಿತ: ಸಚಿವ ನಡ್ಡಾ

ಮುಂಬೈ,ಜ.29: ಹಾಲಿ ಸರಕಾರವು ಕೈಗೊಂಡ ವಿವಿಧ ಆರೋಗ್ಯ ಪಾಲನಾ ಯೋಜನೆಗಳು ಹಾಗೂ ಜಾಗೃತಿ ಕಾರ್ಯಕ್ರಮಗಳಿಂದಾಗಿ ಭಾರತದಲ್ಲಿ ಬಾಣಂತಿ ಹಾಗೂ ಶಿಶು ಮರಣ ಪ್ರಮಾಣದಲ್ಲಿ ತೀವ್ರ ಕುಸಿತವುಂಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ತಿಳಿಸಿದ್ದಾರೆ.

 2005 ಹಾಗೂ 2015ರಲ್ಲಿ ಬಿಡುಗಡೆಗೊಳಿಸಲಾದ ಮಾದರಿ ನೋಂದಣಿ ವ್ಯವಸ್ಥೆಯ ವರದಿಯು ದೇಶದಲ್ಲಿ ಬಾಣಂತಿಯರು ಹಾಗೂ ಶಿಶು ಮರಣ ಪ್ರಮಾಣ ಕುಸಿದಿರುವುದನ್ನು ಸ್ಪಷ್ಟವಾಗಿ ತೋರಿಸಿಕೊಟ್ಟಿದೆ. ನೂತನ ಸರಕಾರವು ಜಾರಿಗೊಳಿಸಿದ ವಿವಿಧ ಕಾರ್ಯಕ್ರಮಗಳ ಪರಿಣಾಮ ಇದಾಗಿದೆ ಎಂದವರು ತಿಳಿಸಿದ್ದಾರೆ. ಮುಂಬೈ ಟಾಟಾ ಸ್ಮಾರಕ ಕೇಂದ್ರವು ರವಿವಾರ ಆಯೋಜಿಸಿದ ‘‘ ಆರೋಗ್ಯಪಾಲನೆ: ಸಾಮಾಗ್ರಿ ಅಥವಾ ಮೂಲಭೂತ ಮಾನವ ಅವಶ್ಯಕತೆ’ ಕುರಿತ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

 ‘‘ದೇಶಾದ್ಯಂತ ನಾವು ರೋಗ ನಿರೋಧತೆಯ ಪ್ರಮಾಣವನ್ನು ಹೆಚ್ಚಿಸಿದ್ದೇವೆ. ಆರೋಗ್ಯಪಾಲನೆ, ಆರೋಗ್ಯ ಕಾರ್ಯಕರ್ತರ ಸಬಲೀಕರಣದಂತಹ ಕ್ರಮಗಳು ಸರಕಾರ ಪ್ರಯತ್ನಗಳನ್ನು ಬೆಂಬಲಿಸುತ್ತಿವೆ. ಈ ಎಲ್ಲಾ ಕ್ರಮಗಳು ಸಮಾಜಕ್ಕೆ ಪ್ರಯೋಜನಕಾರಿಯಾಗಿವೆ’’ ಎಂದು ಸಚಿವರು ತಿಳಿಸಿದ್ದಾರೆ.

 ಬಾಣಂತಿರು ಹಾಗೂ ಐದು ವರ್ಷಕ್ಕಿಂತ ಕೆಳಗಿನ ಶಿಶುಗಳ ಮರಣಪ್ರಮಾಣವು ಜಾಗತಿಕ ಸರಾಸರಿಗಿಂತ ಅಧಿಕ ವೇಗದಲ್ಲಿ ತಗ್ಗಿದೆ. ಒಟ್ಟು ಪ್ರಜನನ ದರದಲ್ಲೂ ಗಣನೀಯ ಕುಸಿತವುಂಟಾಗಿದೆ ಎಂದು ನಡ್ಡಾ ಹೇಳಿದ್ದಾರೆ.

 ನಮ್ಮ ದೇಶವು ಸೋಂಕು ಹಾಗೂ ಸೋಂಕುರಹಿತ ರೋಗಗಳ ಅವಳಿ ಹೊರೆಯನ್ನು ಎದುರಿಸುತ್ತಿದೆ. ಕಳೆದ ಶತಮಾನದಲ್ಲಿ ದೇಶವು ಸೋಂಕುರೋಗಗಳು ವ್ಯಾಪಕವಾಗಿದ್ದರೆ, ಪ್ರಸ್ತುತ ಅದು ಸೋಂಕುರಹಿತ ರೋಗಗಳ ಸವಾಲನ್ನು ಎದುರಿಸುತ್ತಿದೆ ಎಂದರು. ಕ್ಯಾನ್ಸರ್ ನಿಯಂತ್ರಣವು ದೇಶಕ್ಕೆ ಎದುರಾದ ಅತಿ ದೊಡ್ಡ ಸವಾಲಾಗಿದೆ ಎಂದು ನಡ್ಡಾ ಆತಂಕ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X