Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕೊಡಗು ಮುಸ್ಲಿಮ್ ಒಕ್ಕೂಟ’...

‘ಕೊಡಗು ಮುಸ್ಲಿಮ್ ಒಕ್ಕೂಟ’ ವಾಟ್ಸ್‌ಆ್ಯಪ್ ಗ್ರೂಪ್‌ನಿಂದ ವಿನೂತನ ಸಮಾಜ ಸೇವೆ

ವಾಟ್ಸ್‌ಆ್ಯಪ್‌ನಿಂದ ಬಡ ಹೆಣ್ಣುಮಕ್ಕಳ ವಿವಾಹ ಶ್ಲಾಘನೀಯ: ಜಿಪಂ ಅಧ್ಯಕ್ಷ ಅಬ್ದುಲ್ಲತೀಫ್

ವಾರ್ತಾಭಾರತಿವಾರ್ತಾಭಾರತಿ29 Jan 2017 11:11 PM IST
share
‘ಕೊಡಗು ಮುಸ್ಲಿಮ್ ಒಕ್ಕೂಟ’ ವಾಟ್ಸ್‌ಆ್ಯಪ್ ಗ್ರೂಪ್‌ನಿಂದ ವಿನೂತನ ಸಮಾಜ ಸೇವೆ

ಸಿದ್ದಾಪುರ, ಜ.29: ಕೊಡಗು ಮುಸ್ಲಿಮ್ ಒಕ್ಕೂಟ ವಾಟ್ಸ್‌ಆ್ಯಪ್ ಗ್ರೂಪ್ ವತಿಯಿಂದ ಎರಡು ಬಡ ಹೆಣ್ಣುಮಕ್ಕಳ ವಿವಾಹ ಕಾರ್ಯಕ್ರಮ ಇಲ್ಲಿನ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಈ ಸಂದರ್ಭ ಜಿಪಂ ಸದಸ್ಯ ಅಬ್ದುಲ್ಲತೀಫ್ ಮಾತನಾಡಿ, ವಾಟ್ಸ್‌ಆ್ಯಪ್ ಮೂಲಕ ಯುವಕರು ಬಡ ಕುಟುಂಬದ ಹೆಣ್ಣು ಮಕ್ಕಳ ವಿವಾಹ ಕಾರ್ಯಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಉಳ್ಳವರು ಇಲ್ಲದವರಿಗೆ ಸಹಾಯ ಮಾಡಬೇಕು. ದೇವರು ಕೊಟ್ಟಿರುವ ಸಂಪತ್ತನ್ನು ಬಚ್ಚಿಡದೆ ಬಡವರಿಗೆ ಹಾಗೂ ನಿರ್ಗತಿಕರಿಗೆ ನೀಡಿ ಸಹಾಯ ಮಾಡಿದರೆ ಖಂಡಿತ ದೇವರು ನಿಮ್ಮನ್ನು ಕಷ್ಟದಲ್ಲಿ ಸಹಾಯ ಮಾಡುತ್ತಾನೆ ಎಂದರು.


ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹ್ಸಿನ್ ಮಾತನಾಡಿ, ಸಾಮಾಜಿಕ ಜಾಲತಾಣದ ಮೂಲಕ ಬಡ ಕುಟುಂಬದ ಕೈ ಹಿಡಿದು ಸಹಾಯಕ್ಕೆ ಮುಂದಾಗಿರುವ ಯುವಕರು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದ್ದಾರೆ. ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಡುತ್ತಾ ವರದಕ್ಷಿಣೆಯನ್ನು ಕಿತ್ತೊಗೆಯಲು ಯುವಕರು ಪ್ರಯತ್ನಿಸುತ್ತಿದ್ದು, ಇಂತಹ ಕಾರ್ಯಕ್ರಮಗಳು ಇನ್ನೂ ಮೂಡಿ ಬರಲಿ ಎಂದು ಹಾರೈಸಿದರು.


 ಎಮ್ಮೆಮಾಡು ಜುಮಾ ಮಸೀದಿಯ ಖತೀಬ್ ಇಸ್ಮಾಯಿಲ್ ಲತೀಫಿ ಹಾಗೂ ಗೋಣಿಕೊಪ್ಪಮಸೀದಿಯ ಖತೀಬ್ ಮುಹಮ್ಮದ್ ಅಲಿ ಫೈಝಿ ನಿಖಾಹ್ ನೇತೃತ್ವ ವಹಿಸಿದರು. ಸಮಸ್ತ ಕೊಡಗು ನಾಯಬ್ ಖಾಝಿ ಎಂ.ಎಂ. ಅಬ್ದುಲ್ಲಾ ಫೈಝಿ ಪ್ರಾರ್ಥನೆ ನಿರ್ವಹಿಸಿದರು. ಕೊಡಗು ಮುಸ್ಲಿಮ್ ಒಕ್ಕೂಟದ ವಾಟ್ಸ್‌ಆ್ಯಪ್ ಗ್ರೂಪ್‌ನ ಅಧ್ಯಕ್ಷ ಕೆ.ಎಚ್. ಮುಹಮ್ಮದ್ ರಾಫಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಹೊಳಮಾಳದ ಶಾಹಿಲ್ ಖಿರಾಹತ್ ಕೊಡಗು ಪಾರಾಯಣ ಮಾಡಿದರು. ಜಮೀಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಉದ್ಘಾಟಿಸಿದರು. ಸಿದ್ದಾಪುರ ಜುಮಾ ಮಸೀದಿಯ ಖತೀಬ್ ಅಬ್ದು ಸಲಾಂ ಲತೀಫಿ ನಿಖಾಹ್ ಮಹತ್ವದ ಬಗ್ಗೆ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಭದ್ರಾವತಿಯ ಹಾರೂನ್ ಅಲ್ ಬುಖಾರಿ ತಂಙಳ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್, ಸಿದ್ದಾಪುರ ಮುಸ್ಲಿಮ್ ಜಮಾಅತ್ ಅಧ್ಯಕ್ಷ ಕೆ.ಉಸ್ಮಾನ್ ಹಾಜಿ, ಕೊಡಗು ಮುಸ್ಲಿಮ್ ಒಕ್ಕೂಟ ವಾಟ್ಸ್ ಆ್ಯಪ್ ಗ್ರೂಪಿನ ಗೌರವಾಧ್ಯಕ್ಷ ನಾಸಿರ್ ಮಕ್ಕಿ, ವೀರಾಜಪೇಟೆ ಅನ್ವಾರುಲ್ ಹುದಾ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಲಿಯಾಕತ್ ಅಲಿ, ಗೋಣಿಕೊಪ್ಪಶಾಫಿ ಮುಸಿಮ್ ಜಮಾಅತ್ ಸದಸ್ಯ ಪಿ.ಎ. ಹಕೀಂ, ಗೋಣಿಕೊಪ್ಪಗ್ರಾಪಂ ಸದಸ್ಯರಾದ ಪ್ರಮೋದ್ ಗಣಪತಿ, ಸಿ. ಸೋಮಣ್ಣ, ಸಿದ್ದಾಪುರ ಗ್ರಾಪಂ ಸದಸ್ಯರಾದ ಹುಸೈನ್, ಅಬ್ದುಲ್ ಶುಕೂರ್, ಜಾಫರ್ ಅಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಗೋಣಿಕೊಪ್ಪದ ಸರ್ಫುದ್ದೀನ್ ಸ್ವಾಗತಿಸಿ, ಮೂರ್ನಾಡಿನ ಸೈಫ್ ಅಲಿ ನಿರೂಪಿಸಿ, ಪಾಲಿಬೆಟ್ಟದ ಅಬ್ದುಲ್ ರಶೀದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X