Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಕಂಪಾಡಿ: ಹದಗೆಟ್ಟ ರಸ್ತೆಯ ವಿರುದ್ಧ...

ಬೈಕಂಪಾಡಿ: ಹದಗೆಟ್ಟ ರಸ್ತೆಯ ವಿರುದ್ಧ ಧ್ವನಿ ಎತ್ತಿದ ನಾಗರಿಕರು

ಉಡಾಫೆ ವರ್ತನೆ ತೋರಿ ಕ್ಷಮೆಯಾಚಿಸಿದ ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ30 Jan 2017 6:39 PM IST
share
ಬೈಕಂಪಾಡಿ: ಹದಗೆಟ್ಟ ರಸ್ತೆಯ ವಿರುದ್ಧ ಧ್ವನಿ ಎತ್ತಿದ ನಾಗರಿಕರು

ಮಂಗಳೂರು, ಜ.30: ಬೈಕಂಪಾಡಿ ಕೈಗಾರಿಕಾ ವಲಯ ವ್ಯಾಪ್ತಿಯ ಅಂಗರಗುಂಡಿ ಎಂಬಲ್ಲಿ ಹದಗೆಟ್ಟ ಸುಮಾರು 1 ಕಿ.ಮೀ.ರಸ್ತೆಯನ್ನು ದುರಸ್ತಿಪಡಿಸುವಂತೆ ಆಗ್ರಹಿಸಿದ ನಾಗರಿಕರ ಜೊತೆ ಉಡಾಫೆ ವರ್ತನೆ ತೋರಿದ ಕೆಐಎಡಿಬಿ ಅಭಿವೃದ್ಧಿ ಅಧಿಕಾರಿಯು ಸ್ಥಳೀಯ ಶಾಸಕರ ಮಧ್ಯಪ್ರವೇಶದ ಬಳಿಕ ಕ್ಷಮೆಯಾಚಿಸಿದ ಘಟನೆ ಸೋಮವಾರ ನಡೆದಿದೆ.

ಬೈಕಂಪಾಡಿ-ಅಂಗರಗುಂಡಿಯ ರಸ್ತೆಯ ಅಲ್ಲಲ್ಲಿ ಹೊಂಡ ಬಿದ್ದಿದೆ. ಇದನ್ನು ದುರಸ್ತಿಪಡಿಸುವಂತೆ ಸ್ಥಳೀಯ ನಾಗರಿಕರು ರಾಜ್ಯ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು. ಆವಾಗ ಎರಡು ವಾರದ ಸಮಯವಕಾಶ ಕೇಳಿದ್ದ ಕೆಐಡಿಬಿ ಅಧಿಕಾರಿಗಳು ಬಳಿಕ ಅದನ್ನು ಮರೆತಿದ್ದರು.

ಆ ಹಿನ್ನಲೆಯಲ್ಲಿ ಸೋಮವಾರ ಸ್ಥಳೀಯ ಪ್ರಮುಖರು ಕೆಐಡಿಬಿ ಕಚೇರಿಗೆ ಹೋಗಿ ರಸ್ತೆಯ ಬಗ್ಗೆ ಗಮನ ಸೆಳೆದಾಗ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಉಡಾಫೆಯಿಂದ ವರ್ತಿಸಿದರು ಎನ್ನಲಾಗಿದೆ. ವರ್ತನೆಯಿಂದ ರೋಸಿಹೋದ ಮುಖಂಡರು ಪ್ರತಿ ಮಾತುಗಳನ್ನಾಡಿದಾಗ ಅಧಿಕಾರಿ ಅಲ್ಲಿಂದ ಮರೆಯಾದರು. ಅಧಿಕಾರಿಯ ಈ ವರ್ತನೆಯನ್ನು ಮತ್ತಷ್ಟು ಕೆರಳಿದ ಸ್ಥಳೀಯ ಪ್ರಮುಖರು ರಿಕ್ಷಾ ಚಾಲಕ-ಮಾಲಕರು ಹಾಗು ನಾಗರಿಕರ ಜೊತೆಗೂಡಿ ಪ್ರತಿಭಟನೆ ನಡೆಸಿದರು. ಅಲ್ಲದೆ ಶಾಸಕ ಮೊಯ್ದಿನ್ ಬಾವಾ ಮತ್ತು ಕಾರ್ಪೊರೇಟರ್ ಪುರುಷೋತ್ತಮ ಚಿತ್ರಾಪುರ ಅವರ ಗಮನ ಸೆಳೆದರು ಎನ್ನಲಾಗಿದೆ.

ಆ ಬಳಿಕ ಕೆಐಎಡಿಬಿ ಅಧಿಕಾರಿ ಕ್ಷಮೆಯಾಚಿಸದ ಹೊರತು ತಾವು ಸ್ಥಳದಿಂದ ತೆರಳುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು. ಅಂತಿಮವಾಗಿ ಶಾಸಕರು ಕೆಐಡಿಬಿ ಕಚೇರಿಗೆ ಆಗಮಿಸಿ ಕಚೇರಿಯಿಂದ ಹೊರ ಹೋಗಿದ್ದ ಅಧಿಕಾರಿಯನ್ನು ಮತ್ತೆ ಕರೆಸಿ ತೀವ್ರ ತರಾಟೆಗೆ ತೆಗೆದುಕೊಂಡರು. ‘ನೀವು ಕೈಗಾರಿಕೆಗಳ ಪರ ವಾದಿಸುವ ಬದಲು ನಾಗರಿಕರ ಸಮಸ್ಯೆಗೆ ಮೊದಲು ಪರಿಹಾರ ಕಲ್ಪಿಸಿ’ ಎಂದ ಶಾಸಕ ಮೊಯ್ದಿನ್ ಬಾವಾ, ನಾಗರಿಕರೊಂದಿಗೆ ಉಡಾಫೆಯಿಂದ ವರ್ತಿಸಿದ್ದಕ್ಕೆ ಕ್ಷಮೆಯಾಚಿಸುವಂತೆ ಸೂಚಿಸಿದರು. ಅಂತಿಮವಾಗಿ ಕೆಐಡಿಬಿ ಅಧಿಕಾರಿ ಕ್ಷಮೆಯಾಚಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾರ್ಪೊರೇಟರ್ ಹಾಗು ಮಾಜಿ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ರಸ್ತೆಯ ಅಸ್ತವ್ಯವಸ್ಥೆಯ ಬಗ್ಗೆ ಗಮನ ಸೆಳೆಯಲು ಹೋದ ನಾಗರಿಕರ ಜೊತೆ ಉಡಾಫೆಯಿಂದ ವರ್ತಿಸಿದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕೆಐಡಿಬಿ ಕಚೇರಿಗೆ ತೆರಳಿದೆ. ವಿಷಯ ತಿಳಿದುಕೊಂಡು ಆ ಅಧಿಕಾರಿಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಬಳಿಕ ಶಾಸಕರು ಆಗಮಿಸಿ ಇತರ ಅಧಿಕಾರಿಯ ಮೂಲಕ ಉಡಾಫೆಯಿಂದ ವರ್ತಿಸಿದ ಅಧಿಕಾರಿಯನ್ನು ಕರೆಸಿ ತೀವ್ರ ತರಾಟೆಗೆ ತೆಗೆದುಕೊಂಡ ಬಳಿಕ ಕ್ಷಮೆ ಯಾಚಿಸಿದರು. ಅಲ್ಲದೆ, 10 ದಿನದಲ್ಲಿ ಈ ರಸ್ತೆಯ ದುರಸ್ತಿ ಮಾಡುವ ಭರವಸೆಯನ್ನು ಶಾಸಕರು ನೀಡಿದರು’ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X