Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುರಕ್ಷತಾ ಗಾರ್ಡ್ ನಿಂದಲೇ ಬರ್ಬರ...

ಸುರಕ್ಷತಾ ಗಾರ್ಡ್ ನಿಂದಲೇ ಬರ್ಬರ ಕೊಲೆಯಾದ ಯುವ ಇನ್ಫೋಸಿಸ್ ಟೆಕ್ಕಿ

ಪ್ರತಿಷ್ಠಿತ ಕಂಪೆನಿಗಳ ಕಚೇರಿಯೂ ಮಹಿಳೆಯರಿಗೆ ಸುರಕ್ಷಿತವಲ್ಲ!

ವಾರ್ತಾಭಾರತಿವಾರ್ತಾಭಾರತಿ31 Jan 2017 11:58 AM IST
share
ಸುರಕ್ಷತಾ ಗಾರ್ಡ್ ನಿಂದಲೇ ಬರ್ಬರ ಕೊಲೆಯಾದ ಯುವ ಇನ್ಫೋಸಿಸ್ ಟೆಕ್ಕಿ

ಪುಣೆ ಜ.31: ನಗರದ ಹಿಂಜೇವಾಡಿಯಲ್ಲಿರುವ ರಾಜೀವ್ ಇನ್ಫೋಟೆಕ್ ಪಾರ್ಕ್ ನಲ್ಲಿನ ಇನ್ಫೋಸಿಸ್ ಕಟ್ಟಡದ ಒಂಬತ್ತನೆ ಮಹಡಿಯಲ್ಲಿ ಸಂಸ್ಥೆಯ ಸೆಕ್ಯುರಿಟಿ ಗಾರ್ಡ್ ನಿಂದಲೇ ಕೊಲೆಗೀಡಾದ ಕೇರಳ ಮೂಲದ ಸಾಫ್ಟ್ ವೇರ್ ಇಂಜಿನಿಯರ್ ರಸೀಲಾ ರಾಜು ಒ.ಪಿ. ಪ್ರಕರಣವು ಪ್ರತಿಷ್ಠಿತ ಕಂಪೆನಿಗಳ ಕಚೇರಿಯೂ ಮಹಿಳೆಯರಿಗೆ ಸುರಕ್ಷಿತವಲ್ಲವೆಂಬುದನ್ನು ಸ್ಪಷ್ಟಪಡಿಸಿದೆ.

ಘಟನೆ ಇನ್ಫೋಸಿಸ್ ನ ಕಾನ್ಫರೆನ್ಸ್ ರೂಂನಲ್ಲಿ ರವಿವಾರ ನಡೆದಿದ್ದು, ಪೊಲೀಸರು ಆರೋಪಿ ಅಸ್ಸಾಂ ಮೂಲದ ಭಾಬೆನ್ ಸೈಕಿಯಾನನ್ನು ಮುಂಬೈಯ ಛತ್ರಪತಿ ಶಿವಾಜಿ ಟರ್ಮಿನಸ್ ನಿಂದ ಬಂಧಿಸಿದ್ದರು. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನಿಗೆ ಫೆಬ್ರವರಿ 4ರ ತನಕ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.

ರಸೀಲಾ ಅವರು ರವಿವಾರ ಅಪರಾಹ್ನ 2:30ಕ್ಕೆ ಕಚೇರಿಗೆ ಬಂದಿದ್ದು, ಅವರ ಹಿಂದಿನ ಶಿಫ್ಟ್ ನ ಸಹೊದ್ಯೋಗಿ ಹೊರಟು ಹೋದ ನಂತರ ಒಬ್ಬಂಟಿಯಾಗಿದ್ದರು. ಆದರೆ ಸಂಸ್ಥೆಯ ಬೆಂಗಳೂರಿನ ತಂಡದ ಸದಸ್ಯರು ರಸೀಲಾ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ದೂರಿದಾಗ ಪರಿಶೀಲಿಸಿದಾತ ಅವರು ಸತ್ತು ಬಿದ್ದಿರುವುದು ಕಂಡು ಬಂದಿತ್ತು.
ಪೊಲೀಸರ ಪ್ರಕಾರ ರವಿವಾರ ಅಪರಾಹ್ನ ರಸೀಲಾ ಅವರು ಆರೋಪಿ ತನ್ನನ್ನು ದಿಟ್ಟಿಸಿ ನೋಡುತ್ತಿರುವುದನ್ನು ತಿಳಿದು ಅದಕ್ಕೆ ಆಕ್ಷೇಪಿಸಿದ್ದರಲ್ಲದೆ ದೂರು ನೀಡುವುದಾಗಿಯೂ ಹೇಳಿದ್ದರು. ಕೆಲಸದ ಒಂದು ಸಣ್ಣ ಬ್ರೇಕ್ ತೆಗೆದುಕೊಂಡ ನಂತರ ಆಕೆ ತನ್ನ ಕಚೇರಿಗೆ ಮತ್ತೆ ಮರಳಿದಾಗ ಕೆಲ ಕಂಪ್ಯೂಟರ್ ಗಳ ಮಾಹಿತಿ ಕಲೆ ಹಾಕುವ ನೆಪದಲ್ಲಿ  ಆಕೆಯ ಹಿಂದೆಯೇ ಒಳಕ್ಕೆ ಬಂದು ಆರೋಪಿ ಆಕೆಯೊಡನೆ ವಾಗ್ವಾದಕ್ಕಿಳಿದಿದ್ದ. ಆಕೆಯ ಮುಖಕ್ಕೆ ಬಡಿದು ಕಂಪ್ಯೂಟರ್ ಕೇಬಲನ್ನು ಕುತ್ತಿಗೆಗೆ ಬಿಗಿದು ನಂತರ ಆಕೆಯ ಪ್ರವೇಶಾತಿ ಕಾರ್ಡ್ ಉಪಯೋಗಿಸಿ ಅಲ್ಲಿಂದ ಹೊರನಡೆದಿದ್ದ.

ರಸೀಲಾ ಕೊಲೆ ನಡೆಸಿದ ನಂತರ ತಾನೂ ಸಾಯಬೇಕೆಂದು ನಿರ್ಧರಿಸಿ ಟೆರೇಸಿಗೆ ಹೋಗಿದ್ದರೂ, ಇನ್ನೊಬ್ಬ ಗಾರ್ಡ್ ಆತನನ್ನು ತಡೆದಿದ್ದ. ನಂತರ ತನ್ನ ತಾಯಿಗೆ ಕರೆ ಮಾಡಿ ನಡೆದಿದ್ದನ್ನು ಹೇಳಿದಾಗ ಶರಣಾಗುವಂತೆ ಆಕೆ ಸಲಹೆ ನೀಡಿದ್ದರೂ ಅದಕ್ಕೆ ಕಿವಿಗೊಡದೆ ಛತ್ರಪತಿ ಶಿವಾಜಿ ಟರ್ಮಿನಸ್ ಗೆ ಆಗಮಿಸಿ ಅಲ್ಲಿಂದ ಪರಾರಿಯಾಗಲು ಯೋಚಿಸಿದ್ದ. ಆದರೆ ಬಳಿಕ ಪೊಲೀಸರ ಕೈಗೆ ಸಿಕ್ಕಿ ಬಿದಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X