Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾರಣಾಂತಿಕ ಹಲ್ಲೆ, ಜೀವಬೆದರಿಕೆ : ಮೂವರು...

ಮಾರಣಾಂತಿಕ ಹಲ್ಲೆ, ಜೀವಬೆದರಿಕೆ : ಮೂವರು ಅಪರಾಧಿಗಳಿಗೆ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ31 Jan 2017 10:51 PM IST
share
ಮಾರಣಾಂತಿಕ ಹಲ್ಲೆ, ಜೀವಬೆದರಿಕೆ : ಮೂವರು ಅಪರಾಧಿಗಳಿಗೆ ಶಿಕ್ಷೆ

ಮಂಗಳೂರು, ಜ. 31: ವ್ಯಕ್ತಿಯೋರ್ವನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಪರಾಧಿಗಳಿಗೆ ಮಂಗಳೂರಿನ ಒಂದನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದಂಡ ಸಹಿತ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ನಿವಾಸಿ ಛಾಯಾಗ್ರಾಹಕ ಸುರೇಂದ್ರ ಯಾನೆ ಸುರೇಂದ್ರ ಭಂಡಾರಿ (37), ವೃತ್ತಿಯಲ್ಲಿ ಚಾಲಕನಾಗಿರುವ ಕೆಂಪುಗುಡ್ಡೆಯ ಪ್ರಶಾಂತ್ (33) ಹಾಗೂ ಫೈನಾನ್ಸ್ ಜಪ್ತಿದಾರನಾಗಿರುವ ಕೊಡಂಬೆಟ್ಟು ಗ್ರಾಮದ ರಜನೀಶ (27) ಶಿಕ್ಷೆಗೊಳಗಾದ ಅಪರಾಧಿಗಳು.

ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ (ಸೆ.326) ಸಂಬಂಧಿಸಿ ಮೂವರಿಗೆ ತಲಾ 2 ವರ್ಷಗಳ ಸಾದಾ ಸಜೆ ಸಹಿತ 10 ಸಾವಿರ ರೂ. ದಂಡ ಹಾಗೂ ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಕಾರಾಗೃಹ ವಾಸ, ಅಕ್ರಮವಾಗಿ ತಡೆದು ನಿಲ್ಲಿಸಿದ್ದಕ್ಕೆ (ಸೆ.341) ಮೂವರಿಗೆ ತಲಾ 1 ತಿಂಗಳ ಸಾದಾ ಸಜೆ ಸಹಿತ 500 ರೂ. ದಂಡ ಮತ್ತು ದಂಡ ತೆರಲು ತಪ್ಪಿದಲ್ಲಿ 1 ವಾರದ ಸಾದಾ ಸಜೆ, ಅವಾಚ್ಯಶಬ್ಧಗಳಿಂದ ಬೈದು ನಿಂದಿಸಿದ್ದಕ್ಕೆ (ಸೆ.504) ತಲಾ 3 ತಿಂಗಳ ಸಾದಾ ಸಜೆ ಸಹಿತ 1 ಸಾವಿರ ರೂ. ದಂಡ ಮತ್ತು ದಂಡ ತೆರಲು ತಪ್ಪಿದಲ್ಲಿ 1 ತಿಂಗಳ ಸಾದಾ ಸಜೆ, ಜೀವ ಬೆದರಿಕೆಯೊಡ್ಡಿದ್ದಕ್ಕೆ (ಸೆ.506) ತಲಾ 3 ತಿಂಗಳ ಸಾದಾ ಸಜೆ ಸಹಿತ 1 ಸಾವಿರ ರೂ. ದಂಡ ಮತ್ತು ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳ ಸಾದಾ ಸಜೆ ವಿಧಿಸಿ ನ್ಯಾಯಾಲಯವು ಆದೇಶ ನೀಡಿದೆ.

ಈ ಎಲ್ಲಾ ಶಿಕ್ಷೆಯನ್ನು ಏಕಕಾಲಕ್ಕೆ ಅನುಭವಿಸಬೇಕು ಮತ್ತು ಮೂವರು ಅಪರಾಧಿಗಳು ಪಾವತಿಸುವ ಒಟ್ಟು 37,500 ರೂ. ದಂಡ ಮೊತ್ತದ ಪೈಕಿ 20 ಸಾವಿರ ರೂ.ಗಳನ್ನು ಗಾಯಾಳು ರಮಾನಾಥ ಅವರಿಗೆ ಪರಿಹಾರ ರೂಪದಲ್ಲಿ ಪಾವತಿಸುವಂತೆ ನ್ಯಾಯಾಧೀಶ ಸಿ.ಎಂ. ಜೋಶಿ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.ಸರಕಾರಿ ಅಭಿಯೋಜಕ ರಾಜುಪೂಜಾರಿ ಬನ್ನಾಡಿ ವಾದಿಸಿದ್ದರು.  

ಪ್ರಕರಣ 2012ರ ಡಿಸೆಂಬರ್ 30 ರಂದು ಬೆಳಗ್ಗೆ ಮೂವರು ಬಂಟ್ವಾಳ ತಾಲೂಕು ರಾಯಿ ಗ್ರಾಮದ ಗೋಳ್ತಬೆಟ್ಟುವಿನ ರಮಾನಾಥ(49) ಎಂಬವರು ಬಿ.ಸಿ.ರೋಡ್ ಬಸ್‌ಸ್ಟಾಂಡ್ ಸಮೀಪದ ಲಾಡ್ಜ್‌ವೊಂದರ ವರಾಂಡದಲ್ಲಿದ್ದಾಗ ಅಕ್ರಮವಾಗಿ ತಡೆದು ನಿಲ್ಲಿಸಿ ಕೊಲೆ ಬೆದರಿಕೆಯೊಡ್ಡಿ ಅವಾಚ್ಯವಾಗಿ ನಿಂದಿಸಿದ್ದರಲ್ಲದೇ ತಲವಾರು, ಕಬ್ಬಿಣದ ಸರಳು ಮತ್ತು ಕಲ್ಲಿನಿಂದ ತೀವ್ರ ಹಲ್ಲೆ ನಡೆಸಿದ್ದರು.ದನ ಸಾಗಾಟ ವಿಚಾರದ ಕುರಿತಾಗಿ ಪೊಲೀಸರಿಗೆ ಮಾಹಿತಿ ನೀಡಿದ ಶಂಕೆಯ ತಕರಾರಿನಲ್ಲಿ ಈ ದುಷ್ಕೃತ್ಯ ನಡೆದಿತ್ತು.

ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಅನಿಲ್‌ಕುಲಕರ್ಣಿ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.2017ರ ಜನವರಿ 5ರಂದು ನ್ಯಾಯಾಲಯದಲ್ಲಿ ಆರೋಪಿಗಳ ಕೃತ್ಯ ಸಾಬೀತಾಗಿತ್ತು. ಅಪರಾಧಿಗಳ ನಡವಳಿಕೆ ಬಗ್ಗೆ ನ್ಯಾಯಾಧೀಶರು ಪರಿವೀಕ್ಷಣಾಧಿಕಾರಿಗಳಿಂದ ವರದಿ ಕೋರಿದ್ದರು. ಪರಿವೀಕ್ಷಣಾಧಿಕಾರಿಗಳು ನೀಡಿದ ವರದಿಯ ಪರ -ವಿರೋಧ ವಾದವನ್ನಾಲಿಸಿದ ನ್ಯಾಯಾಧೀಶರು ಮಂಗಳವಾರ ಶಿಕ್ಷೆಯ ಪ್ರಮಾಣವನ್ನು ಘೋಷಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X