Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಉಪ ಸಂಪಾದಕರಿಂದ ಕೇಂದ್ರ ಸಚಿವರವರೆಗೆ ಇ....

ಉಪ ಸಂಪಾದಕರಿಂದ ಕೇಂದ್ರ ಸಚಿವರವರೆಗೆ ಇ. ಅಹ್ಮದ್‌ರ ಪಯಣ

ವಾರ್ತಾಭಾರತಿವಾರ್ತಾಭಾರತಿ1 Feb 2017 12:22 PM IST
share
ಉಪ ಸಂಪಾದಕರಿಂದ ಕೇಂದ್ರ ಸಚಿವರವರೆಗೆ ಇ. ಅಹ್ಮದ್‌ರ ಪಯಣ

ಕ್ಯಾಲಿಕಟ್, ಫೆ.1: ಮುಸ್ಲಿಂ ಲೀಗ್ ಮುಖವಾಣಿ ಚಂದ್ರಿಕಾದ ಉಪಸಂಪಾದಕರಾಗಿ ಕೆಲಸ ಆರಂಭಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೂ ಇ. ಅಹ್ಮದ್ ತಲುಪಿದ್ದರು. ಇಬ್ರಾಹೀಂ ಸುಲೇಮಾನ್ ಸೇಠ್ ಹಾಗೂ ಜಿ.ಎಂ.ಬನಾತ್‌ವಾಲರ ಉತ್ತರಾಧಿಕಾರಿಯಾಗಿ ಅಹ್ಮದ್ ಪಕ್ಷ ವಹಿಸಿದ ದಿಲ್ಲಿ ದೌತ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸಯ್ಯಿದ್ ಅಬ್ದುರ್ರಹ್ಮಾನ್ ಬಾಫಕಿ ತಂಙಳ್ ಹಾಗೂ ಇಬ್ರಾಹೀಂ ಸುಲೇಮಾನ್ ಸೇಠ್‌ರ ಬಳಿಕ ಕೇರಳದ ಲೀಗ್ ಅಧ್ಯಕ್ಷರಾದ ಮೂರನೆ ವ್ಯಕ್ತಿ ಅವರು.

ಎಂಎಸ್‌ಎಫ್ ವಿದ್ಯಾರ್ಥಿ ಸಂಘಟನೆಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಅಹ್ಮದ್ ರಾಜಕೀಯ ಪ್ರವೇಶಿಸಿದ್ದರು. ಕಣ್ಣೂರ್ ನಗರದ ಮುಕ್ಕಡವ್ ಶಾಖೆಯಲ್ಲಿ ಚಟುವಟಿಕೆ ಆರಂಭಿಸಿದ್ದರು. ಮುಸ್ಲಿಂ ವಿದ್ಯಾರ್ಥಿ ಫೆಡರೇಷನ್‌ನ ಪ್ರಥಮ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಲಬಾರ್ ಜಿಲ್ಲಾ ಕಾರ್ಯದರ್ಶಿಯಾದರು. ಮುಕ್ಕಡವ್ ವಾರ್ಡ್‌ನಿಂದ ನಗರಸಭೆಗೆ ಗೆದ್ದು ಬಂದರು. ನಂತರ ನಗರಸಭೆ ಅಧ್ಯಕ್ಷರಾದರು. ತಾವಕ್ಕರ ಸಬ್ ವೇ ಸಹಿತ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಅವರು ಚಾಲನೆ ನೀಡಿದರು.

1976ರಲ್ಲಿ ಕಣ್ಣೂರಿನಿಂದ 29ವರ್ಷದ ಸಣ್ಣಪ್ರಾಯದಲ್ಲೇ ವಿಧಾನಸಭೆಗೆ ಆಯ್ಕೆಯಾದರು. ಅಂದು ಕೇರಳ ವಿಧಾನಸಭೆಯ ಎಳೆಪ್ರಾಯದ ಶಾಸಕರೆಂಬ ಹೆಗ್ಗಳಿಕೆ ಅವರದ್ದಾಗಿತ್ತು. 19ವರ್ಷ ವಿಧಾನಸಭೆ ಸದಸ್ಯರಾಗಿ 82,87ರವರೆಗೆ ರಾಜ್ಯದ ವಾಣಿಜ್ಯ ಸಚಿವರಾಗಿ ಕೆಲಸ ನಿರ್ವಹಿಸಿದರು. ಆದರೆ 1970 ಚುನಾವಣೆಯಲ್ಲಿ ಅವರು ಸೋಲುಂಡಿದ್ದರು. ಲೀಗ್ ಚುನಾವಣಾ ಸೋಲಿನ ಹೊಣೆ ಹೊತ್ತು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪಿ.ಕೆ.ಕುಂಞಾಲಿಕುಟ್ಟಿ ರಾಜಿನಾಮೆ ನೀಡಿದಾಗ ಇ. ಅಹ್ಮದ್ ಆ ಸ್ಥಾನತುಂಬಿದರು. ಕೇಂದ್ರ ಸಚಿವರೆನ್ನುವ ಕಾರಣದಿಂದ ನಂತರ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದರು.

ಹಲವಾರು ಪಾರ್ಲಿಮೆಂಟ್ ಸಮಿತಿಗಳಲ್ಲಿ ಅವರು ಸದಸ್ಯರಾಗಿದ್ದರು. ವಿಶ್ವಸಂಸ್ಥೆಯ ಭಾರತ ಪ್ರತಿನಿಧಿ ತಂಡದಲ್ಲಿ ಐವರು ಪ್ರಧಾನಿಗಳ ನಿರ್ದೇಶನ ಪ್ರಕಾರ ನಿರಂತರವಾಗಿ ಆರು ಬಾರಿ ಸದಸ್ಯರಾದ ದಾಖಲೆ ಅವರ ಹೆಸರಿನಲ್ಲಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X