Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತನ್ನ 6ನೇ ಪುತ್ರಿಯ ವಿವಾಹದಂದೇ 6 ಬಡ...

ತನ್ನ 6ನೇ ಪುತ್ರಿಯ ವಿವಾಹದಂದೇ 6 ಬಡ ಹೆಣ್ಣು ಮಕ್ಕಳ ಮದುವೆಯನ್ನೂ ನೆರವೇರಿಸಲಿರುವ ಸುಳ್ಯದ ಮೀನು ವ್ಯಾಪಾರಿ

ವಾರ್ತಾಭಾರತಿವಾರ್ತಾಭಾರತಿ1 Feb 2017 3:27 PM IST
share
ತನ್ನ 6ನೇ ಪುತ್ರಿಯ ವಿವಾಹದಂದೇ 6 ಬಡ ಹೆಣ್ಣು ಮಕ್ಕಳ ಮದುವೆಯನ್ನೂ ನೆರವೇರಿಸಲಿರುವ ಸುಳ್ಯದ ಮೀನು ವ್ಯಾಪಾರಿ

ಮಂಗಳೂರು, ಫೆ.1: ತಮ್ಮಪುತ್ರ ಪುತ್ರಿಯರ ವಿವಾಹಕ್ಕೆ ಕೋಟಿಗಟ್ಟಲೆ ಹಣ ವ್ಯಯಿಸುವ ಶ್ರೀಮಂತರಿಗೆ ಪಾಠವಾಗಬಲ್ಲಂತಹ ಹೆಜ್ಜೆಯನ್ನಿಡಲು ಸುಳ್ಯದ ಅನಕ್ಷರಸ್ಥ ಮೀನು ಮಾರಾಟಗಾರರೊಬ್ಬರು ಮುಂದಾಗಿದ್ದಾರೆ. ತಮ್ಮ ಆರನೆ ಪುತ್ರಿಯ ವಿವಾಹದ ದಿನದಂದು ಆರು ಮಂದಿ ಬಡ ಕುಟುಂಬದ ಹಾಗೂ ಅನಾಥ ಹೆಣ್ಣು ಮಕ್ಕಳನ್ನೂ ಅವರು ವಿವಾಹ ಮಾಡಿ ಕೊಡಲಿದ್ದಾರೆ.

ಸುಳ್ಯದ ಗುಂಡ್ಯಡ್ಕ ಹಳೆಗೇಟು ನಿವಾಸಿಯಾಗಿರುವ 56 ವರ್ಷದ ಇಬ್ರಾಹಿಂ ಅವರಿಗೆ ಬಡಹೆಣ್ಣು ಮಕ್ಕಳ ವಿವಾಹಕ್ಕೆ ಸಹಾಯ ಮಾಡಬೇಕೆಂಬುದು ಬಹು ದಿನಗಳ ಕನಸು. ಅವರಿಗೆ ಒಟ್ಟು ಏಳು ಮಂದಿ ಪುತ್ರಿಯರು ಹಾಗೂ ಮೂವರು ಪುತ್ರರು. ತಮ್ಮ ಐದು ಮಂದಿ ಹೆಣ್ಣುಮಕ್ಕಳನ್ನು ಕಷ್ಟಪಟ್ಟು ವಿವಾಹ ಮಾಡಿ ಇದೀಗ ಫೆಬ್ರವರಿ 5ರಂದು ತಮ್ಮ ಆರನೇ ಪುತ್ರಿಯ ವಿವಾಹವ ದಿನದಂದೇ ಇತರ ಆರು ಮಂದಿ ಬಡ ಹೆಣ್ಣುಮಕ್ಕಳ ವಿವಾಹವನ್ನೂ ನಡೆಸಿಕೊಡಲಿದ್ದಾರೆ. ಆರು ಮಂದಿ ಅರ್ಹ ಹೆಣ್ಣು ಮಕ್ಕಳನ್ನು ಹುಡುಕುವ ಸಲುವಾಗಿ ಸುಳ್ಯ, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನಾದ್ಯಂತ ಅವರು ಹುಡುಕಿ ಇಬ್ಬರು ಮದುವೆಯ ವಯಸ್ಸಿಗೆ ಬಂದ ಅನಾಥ ಹೆಣ್ಣುಮಕ್ಕಳು ಹಾಗೂ ನಾಲ್ಕು ಮಂದಿ ಬಡ ಕುಟುಂಬಕ್ಕೆ ಸೇರಿದ ಹೆಣ್ಣುವಕ್ಕಳನ್ನುಆರಿಸಿದ್ದಾರೆ. ವಿವಾಹದ ದಿನದಂದು ತಮ್ಮ ಮಗಳಿಗೆ ನೀಡಿದಂತೆ ಅವರಿಗೂ ಬಟ್ಟೆಬರೆ ಒಡವೆಗಳನ್ನು ನೀಡಲಿದ್ದಾರಲ್ಲದೆ ಅವರ ಕುಟುಂಬಗಳಿಗೂ ಆದರಾತಿಥ್ಯ ನೀಡಲಿದ್ದಾರೆ.

ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಹೀಗೆ ಮಾಡುತ್ತಿದ್ದೇನೆಂದು ಬಡತನವೇನೆಂದು ಹತ್ತಿರದಿಂದ ಕಂಡ ಇಬ್ರಾಹಿಂ ಹೇಳುತ್ತಾರೆ. ‘‘ನನ್ನನ್ನು ಬೆಳೆಸಲು ನನ್ನ ತಾಯಿ ಗದ್ದೆಗಳಲ್ಲಿ ದುಡಿಯುತ್ತಿದ್ದರು. ಶಾಲೆಗೆ ಹೋಗಲೂ ನಮ್ಮಲ್ಲಿ ಹಣವಿರಲಿಲ್ಲ,’’ ಎಂದು ಅವರು ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕುತ್ತಾರೆ.

ಯುವಕರಾಗಿದ್ದಾಗ ಕೆಲಸ ಅರಸಿಕೊಂಡು ಗಲ್ಫ್ ರಾಷ್ಟ್ರಕ್ಕೆ ಹೋಗಿದ್ದ ಇಬ್ರಾಹಿಂ ಅಲ್ಲಿ ಎರಡು ವರ್ಷ ಕೆಲಸ ಮಾಡಿ ಮತ್ತೆ ಸುಳ್ಯಕ್ಕೆ ಹಿಂದಿರುಗಿ ಟೆಂಪೊದಲ್ಲಿ ಮೀನು ಮಾರಾಟ ಮಾಡುತ್ತಿದ್ದಾರೆ. ಅವರು ಸುಳ್ಯ ತಾಲೂಕಲ್ಲದೆ, ಪುತ್ತೂರು, ಮಡಿಕೇರಿಗೂ ಮೀನು ಸರಬರಾಜು ಮಾಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X