Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಕ್ಚಾತುರ್ಯದ ಗಿಮಿಕ್ : ಸಿಪಿಐ-ಎಂ ಟೀಕೆ

ವಾಕ್ಚಾತುರ್ಯದ ಗಿಮಿಕ್ : ಸಿಪಿಐ-ಎಂ ಟೀಕೆ

ವಾರ್ತಾಭಾರತಿವಾರ್ತಾಭಾರತಿ1 Feb 2017 8:34 PM IST
share
ವಾಕ್ಚಾತುರ್ಯದ ಗಿಮಿಕ್ : ಸಿಪಿಐ-ಎಂ ಟೀಕೆ

ಹೊಸದಿಲ್ಲಿ, ಫೆ.1:ಕೇವಲ ವಾಕ್ಚಾತುರ್ಯದ, ಸೇಡಿನ ಬಜೆಟ್ ಎಂದು ಸಿಪಿಐ-ಎಂ ಟೀಕಿಸಿದೆ. ಸ್ಥಳೀಯ ಬೇಡಿಕೆ ಅಥವಾ ಉದ್ಯೋಗಾವಕಾಶ ಹೆಚ್ಚಿಸುವಲ್ಲಿ ಯಾವುದೇ ರೀತಿಯಲ್ಲಿ ನೆರವಾಗದ ಈ ಬಜೆಟ್‌ನಲ್ಲಿ ಅಪರೋಕ್ಷ ತೆರಿಗೆ ಹೆಚ್ಚಿಸುವ ಮೂಲಕ ಸಂಪನ್ಮೂಲ ಕ್ರೋಢೀಕರಿಸಲು ಸರಕಾರ ಉದ್ದೇಶಿಸಿದೆ . ವಾಕ್ಚಾತುರ್ಯ ಪ್ರದರ್ಶಿಸುವ ಪ್ರಧಾನಿ ಮತ್ತು ಬಿಜೆಪಿಯ ಅಧ್ಯಕ್ಷರ ಚಾಳಿ ಈಗ ವಿತ್ತ ಸಚಿವರಿಗೂ ತಟ್ಟಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಸುದ್ದಿಗಾರರಿಗೆ ತಿಳಿಸಿದರು.

ಆಂತರಿಕ ಬೇಡಿಕೆ ಹೆಚ್ಚಿಸುವತ್ತ ಸರಕಾರ ಕಾರ್ಯ ಪ್ರವತ್ತರಾಗಬೇಕು ಎಂದು ಇತ್ತೀಚಿನ ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದ್ದರೂ ಬಜೆಟ್ ಇದಕ್ಕೆ ಸಂಪೂರ್ಣ ತದ್ವಿರುದ್ದವಾಗಿದೆ. ಇದು ಅಭಿವೃದ್ಧಿಯ ಬಜೆಟ್ ಅಲ್ಲ, ದ್ವೇಷದ ಬಜೆಟ್ ಎಂದವರು ಹೇಳಿದರು. ಬಜೆಟ್‌ನಲ್ಲಿ ಕಳೆದ ವರ್ಷದ ಜಿಡಿಪಿ ಶೇ.13.36 , ಈ ವರ್ಷದ ಜಿಡಿಪಿ 12.74 ಎಂದು ತಿಳಿಸಲಾಗಿದೆ. ಈ ವರ್ಷದ ಬಜೆಟ್‌ನಲ್ಲಿ ರೈಲ್ವೇಯ ಆದಾಯವನ್ನೂ ಸೇರಿಸಲಾಗಿದೆ ಎಂಬುದನ್ನು ಗಮನಿಸಬೇಕು ಎಂದು ಯೆಚೂರಿ ತಿಳಿಸಿದರು.

ಆರ್ಥಿಕ ಕ್ರೋಢೀಕರಣದ ಕುರಿತ ಸಚಿವ ಜೇಟ್ಲೀ ಹೇಳಿಕೆಯನ್ನು ಉಲ್ಲೇಖಿಸಿದ ಯೆಚೂರಿ, ಕಳೆದ ವರ್ಷ ಶೇ.3.5ರಷ್ಟಿದ್ದ ವಿತ್ತೀಯ ಕೊರತೆ , ಶೇ.3.2ಕ್ಕೆ ಇಳಿಯಲು ಕಾರಣ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬ್ಕಾರಿ ಸುಂಕದ ಹೆಚ್ಚಳ ಕಾರಣ ಎಂದರು.

ಸರಕಾರವು ಸೇವಾ ತೆರಿಗೆ, ಅಬ್ಕಾರಿ ಮತ್ತು ಸೀಮಾ ಸುಂಕ ಹೆಚ್ಚಿಸುವ ಮೂಲಕ 60 ಸಾವಿರ ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದೆ. ಇದು ಜನಸಾಮಾನ್ಯರ ಮೇಲೆ ತೀವ್ರ ಹೊರೆಯಾಗಿದೆ. ಬ್ಯಾಂಕ್‌ಗಳ ಅನುತ್ಪಾದಕ ಆಸ್ತಿ(ಎನ್‌ಪಿಎ) ವಸೂಲಿ ಮಾಡುವ ಕುರಿತು ಉಲ್ಲೇಖವಿಲ್ಲ. ದೇಶಬಿಟ್ಟು ತಲೆಮರೆಸಿಕೊಂಡ ಸುಸ್ತಿದಾರರ ಮೇಲೆ ಮಾತ್ರ ಕ್ರಮ ಕೈಗೊಳ್ಳುವ ಸಂಪ್ರದಾಯವನ್ನು ಸರಕಾರ ಅನುಸರಿಸುತ್ತಿದೆ ಎಂದು ಟೀಕಿಸಿದ ಯೆಚೂರಿ, ಬಜೆಟ್‌ನ ಮೊತ್ತ 24 ಲಕ್ಷ ಕೋಟಿ ರೂ. ದೇಶದ ಬ್ಯಾಂಕ್‌ಗಳಲ್ಲಿರುವ ಎನ್‌ಪಿಎ ಮೊತ್ತ 11 ಲಕ್ಷ ಕೋಟಿ ರೂ. ಎಂದು ವಿವರಿಸಿದರು.

  ಎಫ್‌ಐಪಿಬಿ ರದ್ದುಗೊಳಿಸುವ ಪ್ರಸ್ತಾವನೆಯ ಮೂಲಕ ಎಫ್‌ಡಿಐ ಸ್ವಯಂ ಹೆಚ್ಚಲು ಸರಕಾರ ದಾರಿ ಮಾಡಿಕೊಟ್ಟಿದೆ. ವಿದೇಶಿ ಬಂಡವಾಳಕ್ಕೆ ಇನ್ನು ಯಾವುದೇ ನಿಯಂತ್ರಣ ಇರದು ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X