Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೆಂಗು ಬೆಳೆಯ ಕಪ್ಪು ತಲೆ ಹುಳು ಬಾಧೆಗೆ...

ತೆಂಗು ಬೆಳೆಯ ಕಪ್ಪು ತಲೆ ಹುಳು ಬಾಧೆಗೆ ಪರಿಹಾರೋಪಾಯ

ಕಲ್ಲಾಪುವಿನಲ್ಲಿ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಕೇಂದ್ರದಿಂದ ಮಾಹಿತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ1 Feb 2017 8:42 PM IST
share
ತೆಂಗು ಬೆಳೆಯ ಕಪ್ಪು ತಲೆ ಹುಳು ಬಾಧೆಗೆ ಪರಿಹಾರೋಪಾಯ

ಉಳ್ಳಾಲ , ಫೆ. 1 : ಜಿಲ್ಲೆಯಾದ್ಯಂತ ಇತ್ತೀಚೆಗೆ ತೆಂಗಿನ ಮರದ ಗರಿಗಳಿಗೆ ಕಪ್ಪುತಲೆ ಹುಳು ಬಾಧೆಯು ಆವರಿಸಿ ಸಂಪೂರ್ಣ ಬೆಳೆಯು ನಶಿಸುತ್ತಿದ್ದು , ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.

ತೆಂಗು ಬೆಳೆಗೆ ಬಂದಿರುವ ಕಪ್ಪು ತಲೆ ಹುಳು ಬಾಧೆಗೆ ದಕ್ಷಿಣ ಕನ್ನಡ ತೋಟಗಾರಿಕೆ ಇಲಾಖೆ, ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಕೇಂದ್ರ ಕಾಸರಗೋಡು ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಜಂಟಿಯಾಗಿ ಪರಿಸರ ಸ್ನೇಹಿ ಜೈವಿಕ ವಿಧಾನವನ್ನು ಕಂಡುಕೊಂಡಿದ್ದು , ಈ ಹಿನ್ನೆಲೆಯಲ್ಲಿ ಬುಧವಾರ ತೊಕ್ಕೊಟ್ಟಿನ ಕಲ್ಲಾಪುವಿನಲ್ಲಿರುವ ಖಾಸಗಿ ಜಮೀನಿನ ತೆಂಗಿನ ತೋಟದಲ್ಲಿ ತೆಂಗು ಬೆಳೆಗಾರರಿಗಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಯಿತು.

ಶಿಬಿರದಲ್ಲಿ ರೈತರಿಗೆ ತೋಟಗಾರಿಕಾ ವಿಜ್ಞಾನಿಗಳು ಪರೋಪಜೀವಿಗಳನ್ನು ತೆಂಗಿನ ಮರಗಳಿಗೆ ಬಿಟ್ಟು ಕಪ್ಪುತಲೆ ಹುಳು ಬಾಧೆಯನ್ನು ತಡೆಗಟ್ಟುವುದರ ಬಗ್ಗೆ ಪ್ರಾತ್ಯಕ್ಷಿಕೆಯನ್ನು ತೋರಿಸಿದರು.

ಜಿಲ್ಲೆಯಲ್ಲಿ ತೆಂಗಿನ ಮರಗಳಿಗೆ ಕಪ್ಪುತಲೆ ಹುಳುಗಳಿಂದ ಈಗಾಗಲೇ ಸಾಕಷ್ಟು ಹಾನಿಯುಂಟಾಗಿದ್ದು  , ಇದು ಹೀಗೇ ಮುಂದುವರಿದಲ್ಲಿ ತೆಂಗಿನ ಬೆಳೆಯೇ ಸಂಪೂರ್ಣವಾಗಿ ನಶಿಸುವ ಭೀತಿಯುಂಟಾಗಿದೆ. ರಾಸಾಯನಿಕ ಸಿಂಪಡನೆ ನಡೆಸಿದಲ್ಲಿ ರೈತರು ತಕ್ಷಣಕ್ಕೆ ಮರದ ಸೀಯಾಳಗಳನ್ನು ಮಾರುಕಟ್ಟೆಗೆ ಮಾರಾಟ ಮಾಡುವುದರಿಂದ ರೋಗಗಳು ಉಲ್ಬಣಿಸಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳೇ ಹೆಚ್ಚು. ಪರಿಣಿತ ವಿಜ್ಞಾನಿಗಳು ಸೇರಿ ಕಪ್ಪು ತಲೆ ಹುಳು ಬಾಧೆಯನ್ನು ನಿಯಂತ್ರಿಸಲು ಪರೋಪಜೀವಿಗಳನ್ನು ಬಳಸುವ ಜೈವಿಕ ವಿಧಾನವನ್ನು ಕಂಡುಕೊಂಡಿದ್ದು,ಇದರ ಬಳಸುವಿಕೆಯ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಿದರು.

ಜೈವಿಕ ವಿದಾನದಿಂದಲೇ ರೋಗ ನಿಯಂತ್ರಣ:

ತೋಟಗಾರಿಕಾ ವಿಜ್ಞಾನಿಗಳು ಕಪ್ಪುತಲೆಯ ಹುಳುಗಳನ್ನು ತಿಂದು ಬದುಕುವಂತಹ ಪರೋಪಜೀವಿ ಹುಳುಗಳನ್ನು ಅವಿಷ್ಕರಿಸಿದ್ದು ಅದನ್ನು ಪ್ರಯೋಗಾಲಾಯದಿಂದ ಸಂಸ್ಕರಿಸಿ ತಂದು ಕಪ್ಪುತಲೆ ಹುಳು ಬಾಧಿತ ತೆಂಗಿನ ಮರಗಳಿಗೆ ಬಿಡಲಾಗುತ್ತದೆ. ಹೀಗೆ ಬಿಟ್ಟ ಪರೋಪಜೀವಿ ಹುಳುಗಳು ತೆಂಗಿನ ಮರವನ್ನೇ ಅವಲಂಬಿಸಿ ಅದನ್ನು ಬಿಟ್ಟು ಹೋಗದೆ ತುದಿವರೆಗೆ ಹೋಗಿ ಗರಿಗಳಲ್ಲಿ ಬಾಧೆ ನೀಡುವ ಕಪ್ಪುತಲೆ ಹುಳುಗಳನ್ನು ತಿಂದು ಮುಗಿಸುತ್ತವೆ. ಇದರಿಂದ ಜೈವಿಕ ವಿಧಾನದಲ್ಲೇ ಬಾಧೆಯನ್ನು ತಡೆಗಟ್ಟಲು ಸಾಧ್ಯವಾಗಿದ್ದು, ಯಾವುದೇ ರಾಸಾಯನಿಕಗಳನ್ನು ಪ್ರಯೋಗಿಸುವ ಅಗತ್ಯ ಬೀಳದು. ಈ ಜೈವಿಕ ವಿಧಾನದಲ್ಲಿ ಕಪ್ಪುತಲೆ ಹುಳು ಬಾಧೆಯನ್ನು ನಿಯಂತ್ರಿಸಲು ಕನಿಷ್ಠ 7,8 ತಿಂಗಳುಗಳ ಕಾಲಾವಕಾಶ ತಗಲುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಕೇಂದ್ರ ಕಾಸರಗೋಡುವಿನ ನಿರ್ದೇಶಕ ಡಾ.ಪಿ.ಚೌಡಪ್ಪ, ಮಂಗಳೂರು ತೋಟಗಾರಿಕಾ ಇಲಾಖಾ ಉಪನಿರ್ದೇಶಕರಾದ ಡಾ.ಯೋಗೀಶ್ ಹೆಚ್.ಆರ್, ವಿಜ್ಞಾನಿಗಳಾದ ಡಾ.ವಿನಾಯಕ ಹೆಗ್ಡೆ, ಡಾ ಡಾ.ಮನೊಜ್ ಕುಮಾರ್, ಮುಖ್ಯಸ್ಥರಾದ ಬಸವರಾಜು, ಪ್ರತಿಭಾ ಬಿ.ಎಸ್, ಹರೀಶ್ ಮೊದಲಾವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X