Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಲಿ ಹೊಟ್ಟೆಗೆ ಈ ಹಣ್ಣು ತಿಂದರೆ ನಿಮ್ಮ...

ಖಾಲಿ ಹೊಟ್ಟೆಗೆ ಈ ಹಣ್ಣು ತಿಂದರೆ ನಿಮ್ಮ ಜೀವಕ್ಕೇ ಸಂಚಕಾರ!

ತಮಾಷೆಯಲ್ಲ

ವಾರ್ತಾಭಾರತಿವಾರ್ತಾಭಾರತಿ3 Feb 2017 9:01 AM IST
share
ಖಾಲಿ ಹೊಟ್ಟೆಗೆ ಈ ಹಣ್ಣು ತಿಂದರೆ ನಿಮ್ಮ ಜೀವಕ್ಕೇ ಸಂಚಕಾರ!

ಹೊಸದಿಲ್ಲಿ, ಫೆ.3: ಮುಜಾಫರ್‌ ನಗರದ ಈ ಕುತೂಹಲಕಾರಿ ಮತ್ತು ವಿಸ್ಮಯದ ಪ್ರಕರಣ, ಸಂಶೋಧಕರು ಹಾಗೂ ವೈದ್ಯರನ್ನು ದಂಗುಬಡಿಸಿದೆ. ಸಕಾರಣವಿಲ್ಲದೇ ಇದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಿದೆ.

ಕಳೆದ ಮೂರು ವರ್ಷಗಳಿಂದ ಕಡುಬೇಸಿಗೆಯಲ್ಲಿ ಅಂದರೆ ಮೇ ಮಧ್ಯದಲ್ಲಿ ಮಕ್ಕಳು ಸೆಳವು, ಅಧಿಕ ಜ್ವರ ಹಾಗೂ ಜೋರಾಗಿ ಬೊಬ್ಬೆ ಹೊಡೆಯುವ ಹಲವು ಪ್ರಕರಣಗಳು ವರದಿಯಾದವು. ಕೇವಲ ಮಕ್ಕಳು ಮಾತ್ರವಲ್ಲದೇ, ಯುವಕರು, ಆರೋಗ್ಯವಂತರು ಕೂಡಾ ಇದ್ದಕ್ಕಿದ್ದಂತೆ ಪ್ರಜ್ಞಾಹೀನರಾಗುವ ಪರಿಸ್ಥಿತಿ ಎದುರಾಗಿತ್ತು. ವಿಚಿತ್ರವೆಂದರೆ ಮುಂಗಾರು ಆರಂಭವಾದಂತೆ ಸಮಸ್ಯೆ ಮಾಯವಾಗುತ್ತಿತ್ತು.

ಇದು ಬಿಸಿಲಿನ ಝಳದಿಂದಾದ ಸಮಸ್ಯೆ ಎಂದು ಕೆಲವರು ಹೇಳಿದರೆ, ಕೀಟಗಳಿಂದಾಗುವ ಸೋಂಕು ಎಂದು ಮತ್ತೆ ಕೆಲವರು, ಕೀಟನಾಶಕದ ಪರಿಣಾಮ ಎಂದು ಇನ್ನು ಕೆಲವರು ವಿಶ್ಲೇಷಿಸಿದರು. ಆದರೆ ಇದನ್ನು ಪರಿಹರಿಸುವುದು ಸಾಧ್ಯವಾಗಲಿಲ್ಲ. ಏಕೆಂದರೆ ಯಾವ ರೋಗಲಕ್ಷಣವೂ ಕಾಣಿಸಿಕೊಳ್ಳುತ್ತಿರಲಿಲ್ಲ.

ಇಂಡಿಯನ್ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಹಾಗೂ ಸೆಂಟರ್ಸ್‌ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಇನ್ ಅಟ್ಲಾಂಟಾ ಸಂಯುಕ್ತವಾಗಿ ನಡೆಸಿದ ಸಂಶೋಧನಾ ವರದಿ ಈ ಚಿದಂಬರ ರಹಸ್ಯವನ್ನು ಬಿಡಿಸಿದೆ. ಲಿಚಿ ಹಣ್ಣನ್ನು ಅಶಕ್ತ ಮಕ್ಕಳು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದು ಸಾವಿಗೆ ಕಾರಣವಾಗಬಹುದು ಎಂದು ಈ ಸಂಶೋಧನಾ ವರದಿ ಪ್ರತಿಪಾದಿಸಿದೆ.

2015ರಲ್ಲಿ ಆರೋಗ್ಯ ಅಧಿಕಾರಿಗಳು ಪೋಷಕರಿಗೆ ಸೂಚನೆ ನೀಡಿ, ಹಣ್ಣಿನ ಬದಲಾಗಿ, ಹೊಟ್ಟೆತುಂಬಾ ಊಟವನ್ನು ಸಂಜೆ ಕೂಡಾ ಮಕ್ಕಳಿಗೆ ನೀಡುವಂತೆ ಸಲಹೆ ಮಾಡಿದರು. ಇದರಿಂದಾಗಿ ಸಾಯುವ ಮಕ್ಕಳ ಸಂಖ್ಯೆ ಅರ್ಧಕ್ಕರ್ಧ ಕಡಿಮೆಯಾಯಿತು.

ಬಿಳಿ ರಕ್ತಕಣದ ಕೊರತೆ, ರಕ್ತದಲ್ಲಿ ಕಡಿಮೆ ಸಕ್ಕರೆ ಅಂಶದಿಂದಾಗಿ ಮೆದುಳು ಊದಿಕೊಳ್ಳುವ ಮತ್ತಿತರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಟ್ಲಾಂಟ ಸಹೋದ್ಯೋಗಿಗಳ ಜತೆ ಟೆಲಿಕಾನ್ಫರೆನ್ಸ್ ಮಾಡಿದಾಗ ಇದೇ ಬಗೆಯ ರೋಗವನ್ನು ಜಮೈಕನ್ ವಮಿಟಿಂಗ್ ಸಿಕ್‌ನೆಸ್ ಎಂದು ವಿವರಿಸಿದ್ದಾರೆ. ಈ ಬಗ್ಗೆ ಸಂಶೋಧನೆ ನಡೆಸಿದಾಗ ಮಕ್ಕಳ ಸಾವಿನ ರಹಸ್ಯ ಬಹಿರಂಗವಾಗಿದೆ. ದೇಶದಲ್ಲಿ ಒಟ್ಟುಬೆಳೆಯುವ ಲಿಚಿ ಹಣ್ಣಿನ ಶೇಕಡ 70ನ್ನು ಮುಜಾಫರ್‌ಪುರದಲ್ಲಿ ಬೆಳೆಯಲಾಗುತ್ತದೆ. ಇದರಲ್ಲಿ ಅಧಿಕ ಪ್ರಮಾಣದಲ್ಲಿ ಮೆಥಿಲೆನೆಸೈಕ್ಲೋಪ್ರೊಪೈಲ್ ಗ್ಲೈಸಿನ್ ಎಂಬ ಅಂಶ ಅಧಿಕವಾಗಿರುವುದು ಇದಕ್ಕೆ ಕಾರಣ ಎಂದು ಸಂಶೋಧನೆಯಿಂದ ದೃಢಪಟ್ಟಿದೆ. ಮಕ್ಕಳು ಸಂಪೂರ್ಣ ಹಣ್ಣಾಗದ ಲಿಚಿಯನ್ನು ಸೇವಿಸುವುದರಿಂದ ಈ ಸಮಸ್ಯೆ ಕಂಡುಬಂದಿದೆ. ಆದ್ದರಿಂದ ಖಾಲಿ ಹೊಟ್ಟೆಯಲ್ಲಿ ಲಿಚಿ ಹಣ್ಣು ಸೇವಿಸುವುದು ಅಪಾಯಕಾರಿ ಎಂಬ ನಿರ್ಧಾರಕ್ಕೆ ವೈದ್ಯರು ಬಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X