Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲಾವಿಭಾಗದ ವಿಷಯವನ್ನು ಪ್ರತ್ಯೇಕಿಸಿ...

ಕಲಾವಿಭಾಗದ ವಿಷಯವನ್ನು ಪ್ರತ್ಯೇಕಿಸಿ ವಿಜ್ಞಾನ ವಿಭಾಗಕ್ಕೆ ಸೇರ್ಪಡೆ ಪ್ರಸ್ತಾಪಕ್ಕೆ ಮಂಗಳೂರು ವಿ.ವಿ.ಶೈಕ್ಷಣಿಕ ಮಂಡಳಿ

ವಾರ್ತಾಭಾರತಿವಾರ್ತಾಭಾರತಿ3 Feb 2017 8:24 PM IST
share
ಕಲಾವಿಭಾಗದ ವಿಷಯವನ್ನು ಪ್ರತ್ಯೇಕಿಸಿ ವಿಜ್ಞಾನ ವಿಭಾಗಕ್ಕೆ ಸೇರ್ಪಡೆ ಪ್ರಸ್ತಾಪಕ್ಕೆ ಮಂಗಳೂರು ವಿ.ವಿ.ಶೈಕ್ಷಣಿಕ ಮಂಡಳಿ

ಮಂಗಳೂರು.ಫೆ.3: ಸ್ನಾತಕೋತ್ತರ ಪದವಿಯಲ್ಲಿ ಏಕರೂಪತೆ ತರಲು ಮನಃಶಾಸ್ತ್ರ , ಭೂಗೋಳ ಶಾಸ್ತ್ರ, ಸಂಖ್ಯಾ ಶಾಸ್ತ್ರ, ಗಣಿತ ಶಾಸ್ತ್ರ, ಮಾನವ ಶಾಸ್ತ್ರ ಹಾಗೂ ಅಪರಾಧ ಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಬಿಎಸ್ಸಿ, ಎಂಎಸ್ಸಿಗಳಲ್ಲಿ ಮಾತ್ರ ಪದವಿ ನೀಡುವಂತೆ ವಿಶ್ವ ವಿದ್ಯಾನಿಲಯಗಳಿಗೆ ಸೂಚನೆ ನೀಡಲು ಸರಕಾರದ ಸುತ್ತೋಲೆಗೆ ಮಂಗಳೂರು ವಿಶ್ವ ವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ವಿರೋಧ ವ್ಯಕ್ತಪಡಿಸಿದೆ.

 ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಕೆ.ಭೈರಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಗಳ ಗಂಗೋತ್ರಿ ವಿಶ್ವ ವಿದ್ಯಾನಿಲಯದ ಸೆನೆಟ್ ಸಭಾಂಗಣದಲ್ಲಿ ಇಂದು ನಡೆದ ಶೈಕ್ಷಣಿಕ ಮಂಡಳಿಯ ಸಭೆ ನಡೆಯಿತು.

 ಉನ್ನತ ಶಿಕ್ಷಣ ಮಂಡಳಿಯ ನಿರ್ಣಯವನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಮಂಡಿಸಿದ ಸಂದರ್ಭದಲ್ಲಿ ಮಂಡಳಿಯ ಸದಸ್ಯರಾದ ಕಿಶೋರಿ ,ಅಮೃತ ಶೆಣೈ, ಡಾ.ವರದರಾಜ ಚಂದ್ರಗಿರಿ, ಆಡ್ರೋ ಪಿಂಟೋ ಸೇರಿದಂತೆ ಹೆಚ್ಚಿನ ಸದಸ್ಯರು ,  ಇದರಿಂದ ಕಲಾವಿಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಪ್ರಸಕ್ತ ಕಲಾವಿಭಾಗದ ಸಾಕಷ್ಟು ವಿದ್ಯಾರ್ಥಿಗಳು ಪದವಿ ಹಂತದಲ್ಲಿ ಮನಃಶಾಸ್ತ್ರ, ಅಪರಾಧ ಶಾಸ್ತ್ರವನ್ನು ಇತರ ಕಲಾವಿಭಾಗದ ವಿಷಯಗಳೊಂದಿಗೆ ಓದಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಆದರೆ ಸರಕಾರದ ಈ ರೀತಿಯ ತೀರ್ಮಾನವನ್ನು ವಿಶ್ವ ವಿದ್ಯಾನಿಲಯಗಳಲ್ಲಿ ಜಾರಿಗೆ ತಂದರೆ ಮುಂದಿನ ಹಂತದಲ್ಲಿ ಮನಃಶಾಸ್ತ್ರದಂತಹ ಪ್ರಮುಖ ವಿಷಯಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಕಲಾವಿಭಾಗದ ವಿದ್ಯಾರ್ಥಿಗಳಿಗೆ ಸಾಧ್ಯವಾಗದೆ ಹೋಗಬಹುದು.ಇದರಿಂದ ಕಲಾವಿಭಾಗದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ಶೈಕ್ಷಣಿಕ ಮಂಡಳಿಯ ಸದಸ್ಯರ ಒಮ್ಮತದ ಅಭಿಪ್ರಾಯದ ಹಿನ್ನೆಲೆಯಲ್ಲಿ ಈ ಅಭಿಪ್ರಾಯವನ್ನು ಕುಲಾಧಿಪತಿಗಳ ಹಾಗೂ ಸರಕಾರದ ಗಮನಕ್ಕೆ ತರಲು ಸಭೆಯಲ್ಲಿ ನಿರ್ಣಯಿಸಲಾಯಿತು.

ವಿಶ್ವ ವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭಿಸಿ:

‘‘ಮಂಗಳೂರು ವಿಶ್ವ ವಿದ್ಯಾನಿಲಯದಿಂದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೂರವಾಣಿಯ ಮೂಲಕ ಕರೆ ಮಾಡಿದರೆ ತಕ್ಷಣ ಸರಿಯಾದ ಸ್ಪಂದನ ದೊರೆಯುತ್ತಿಲ್ಲ .  ಶೈಕ್ಷಣಿಕ ಮಂಡಳಿಯ ಸದಸ್ಯನಾಗಿ ನನಗೆ ಈ ರೀತಿಯ ಅನುಭವವಾಗಿದೆ. ಆದುದರಿಂದ ವಿದ್ಯಾರ್ಥಿಗಳ ಸಮಸ್ಯೆಗೆ ವಿಶ್ವ ವಿದ್ಯಾನಿಲಯದಿಂದ ತಕ್ಷಣ ಸ್ಪಂದಿಸುವ ಸಹಾಯವಾಣಿಯನ್ನು ಆರಂಭಿಸಿ’’ಎಂದು ಶೈಕ್ಷಣಿಕ ಮಂಡಳಿಯ ಸದಸ್ಯ ಅಭಿಷೇಕ್ ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳುವುದಾಗಿ ಕುಲಪತಿ ಭರವಸೆ ನೀಡಿದರು.

ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದರೂ ಕೆಲವು ವಿದ್ಯಾರ್ಥಿಗಳ ಅಂಕಪಟ್ಟಿ ಬಾರದೆ ಇರುವ ಬಗ್ಗೆ ಬಂದಿರುವ ದೂರುಗಳ ಬಗ್ಗೆ ಸದಸ್ಯರು ಸಭೆಯ ಗಮನಸೆಳೆದರು.  ಈ ವರ್ಷದ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲಿ ಕಳೆದ ವರ್ಷ ಆಗಿರುವ ಸಮಸ್ಯೆ ಮರುಕಳಿಸದಂತೆ ಕ್ರಮ ಕೈಗೊಂಡಿದ್ದೇವೆ. ಫಲಿತಾಂಶ ಪ್ರಕಟಕ್ಕೆ ಮುಂಚಿತವಾಗಿ ಅಂಕಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಆಯಾ ಕಾಲೇಜುಗಳ ಹೆಸರುಗಳೊಂದಿಗೆ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಿದೆ. ಹೆಲ್ಪ್ ಡೆಸ್ಕ್ ಆರಂಭಿಸಲಾಗಿದೆ .  ಈ ನಡುವೆ ಏನಾದರೂ ಸಮಸ್ಯೆಗಳಿದ್ದರೆ ಆಯಾ ಕಾಲೇಜಿನ ಪ್ರಾಂಶುಪಾಲರು ಸಂಪರ್ಕಿಸಬಹುದಾಗಿದೆ. ಈ ಬಗ್ಗೆ ಬಂದ ದೂರುಗಳನ್ನು ದಾಖಲಿಸಿ ಕ್ರಮ ಕೈ ಗೊಳ್ಳಲಾಗುತ್ತಿದೆ ಎಂದು ಪರೀಕ್ಷಾಂಗ ವಿಭಾಗದ ಕುಲಸಚಿವ ಪಿ.ಎ.ಖಾನ್ ತಿಳಿಸಿದ್ದಾರೆ.

 ಸಭೆಯಲ್ಲಿ ಅಂಚೆ ತರೆಪಿನ ಶಿಕ್ಷಣದಡಿ ಪ್ರಾಂಭಿಸಲಿರುವ ಪಿ.ಜಿ.ಡಿಪ್ಲೋಮಾ ಇನ್ ರೂರಲ್ ಡೆವಲಪ್ ಮೆಂಟ್ ವಿನಿಮಯ ಮತ್ತು ಪರಿಷ್ಕೃತ ಪಠ್ಯಕ್ರಮಕ್ಕೆ ಅನುಮೋದನೆ ನೀಡಲಾಯಿತು. ವಿಶ್ವ ವಿದ್ಯಾನಿಲಯದ ಘಟಕ ಕಾಲೇಜಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮಡಿಕೇರಿ ಇಲ್ಲಿ ಸ್ನಾತಕೋತ್ತರ ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್ ಮೆಂಟ್ ವಿಭಾಗ ಸ್ಥಾಪನೆ ಹಾಗೂ ಹುದ್ದೆಗಳ ಸೃಜನೆ ಬಗ್ಗೆ ಸಭೆ ಅನುಮೋದನೆ ನೀಡಿತು.

ಸಭೆಯಲ್ಲಿ ಕುಲಸಚಿವ (ಆಡಳಿತ) ಕೆ.ಎಂ.ಲೋಕೇಶ್, (ಪರೀಕ್ಷಾಂಗ ಕುಲಸಚಿವ) ಎ.ಎಂ.ಖಾನ್  , ಹಣಕಾಸು ಅಧಿಕಾರಿ ಶ್ರೀಪತಿ ಕಲ್ಲೂರಾಯ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X