Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶುಭ್ಮನ್ ಗಿಲ್ ಅಜೇಯ ಶತಕ, ಭಾರತಕ್ಕೆ ಜಯ

ಶುಭ್ಮನ್ ಗಿಲ್ ಅಜೇಯ ಶತಕ, ಭಾರತಕ್ಕೆ ಜಯ

ಅಂಡರ್-19 ಏಕದಿನ ಸರಣಿ

ವಾರ್ತಾಭಾರತಿವಾರ್ತಾಭಾರತಿ3 Feb 2017 11:23 PM IST
share
ಶುಭ್ಮನ್ ಗಿಲ್ ಅಜೇಯ ಶತಕ, ಭಾರತಕ್ಕೆ ಜಯ

 ಹೊಸದಿಲ್ಲಿ, ಫೆ.3: ಆರಂಭಿಕ ಆಟಗಾರ ಶುಭ್ಮನ್ ಗಿಲ್ ಬಾರಿಸಿದ ಅಜೇಯ ಶತಕದ ನೆರವಿನಿಂದ ಭಾರತದ ಅಂಡರ್-19 ತಂಡ 3ನೆ ಪಂದ್ಯದಲ್ಲಿ ಇಂಗ್ಲೆಂಡ್‌ನ್ನು 7 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಈ ಮೂಲಕ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡವನ್ನು 215 ರನ್‌ಗೆ ನಿಯಂತ್ರಿಸಿದ್ದ ಭಾರತದ ಅಂಡರ್-19 ತಂಡ ಕೇವಲ 3 ವಿಕೆಟ್ ನಷ್ಟದಲ್ಲಿ 45ನೆ ಓವರ್‌ನಲ್ಲಿ 216 ರನ್ ಗಳಿಸಿ ಗೆಲುವಿನ ದಡ ಸೇರಿತು.

ಅಜೇಯ 138 ರನ್ ಗಳಿಸಿದ ಗಿಲ್ 157 ಎಸೆತಗಳಲ್ಲಿ 17 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿದರು. ವಿಕೆಟ್‌ಕೀಪರ್ ಹಾರ್ವಿಕ್ ದೇಸಾಯಿ(ಅಜೇಯ 37, 50 ಎಸೆತ) ಅವರೊಂದಿಗೆ 4ನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 115 ರನ್ ಸೇರಿಸಿದ ಗಿಲ್ ಭಾರತಕ್ಕೆ ಸುಲಭ ಗೆಲುವು ತಂದರು.

6ನೆ ಓವರ್‌ಗೆ 50 ರನ್ ಕಲೆ ಹಾಕಿದ ಆರಂಭಿಕ ಆಟಗಾರರಾದ ಗಿಲ್ ಹಾಗೂ ಹಿಮಾಂಶು ರಾಣಾ(19)ಮೊದಲ ವಿಕೆಟ್‌ಗೆ 63 ರನ್ ಸೇರಿಸಿ ಭಾರತ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ವೇಗಿ ಆ್ಯರೊನ್ ಬಿಯರ್ಡ್ ಎಸೆದ ಇನಿಂಗ್ಸ್‌ನ ಮೊದಲ ಓವರ್‌ನಲ್ಲಿ 3 ಬೌಂಡರಿ ಚಚ್ಚಿದ ಗಿಲ್ ತನ್ನ ಉದ್ದೇಶ ಸ್ಪಷ್ಟಪಡಿಸಿದರು.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡ 38 ರನ್‌ಗೆ 2 ವಿಕೆಟ್ ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ಭಾರತೀಯ ಸ್ಪಿನ್ನರ್‌ಗಳು 7 ವಿಕೆಟ್‌ಗಳನ್ನು ಹಂಚಿಕೊಂಡಿದ್ದು, ಲೆಗ್ ಸ್ಪಿನ್ನರ್ ರಾಹುಲ್ ಚಾಹರ್(4-33) ಹಾಗೂ ಎಡಗೈ ಸ್ಪಿನ್ನರ್ ಅನುಕೂಲ್ ರಾಯ್(3-39) ಇಂಗ್ಲೆಂಡ್ ಬ್ಯಾಟಿಂಗ್ ಸರದಿಯನ್ನು ಭೇದಿಸಿದರು.

ಫಾರ್ಮ್‌ನಲ್ಲಿರುವ ರಾವ್‌ಲಿನ್ಸ್(96 ರನ್, 106 ಎಸೆತ, 11 ಬೌಂಡರಿ, 2 ಸಿಕ್ಸರ್) ಉತ್ತಮ ಪ್ರದರ್ಶನ ಮುಂದುವರಿಸಿದರೆ, ಜಾರ್ಜ್ ಬಾರ್ಟ್‌ಲೆಟ್(55, 6 ಬೌಂಡರಿ, 1 ಸಿಕ್ಸರ್) ಎರಡಂಕೆ ಸ್ಕೋರ್ ದಾಖಲಿಸಿದರು. ರಾವ್‌ಲಿನ್ಸ್-ಬಾರ್ಟ್‌ಲೆಟ್ 3ನೆ ವಿಕೆಟ್‌ಗೆ 84 ರನ್ ಜೊತೆಯಾಟ ನಡೆಸಿದರು. ರಾವ್‌ಲಿನ್ಸ್ ನಿರ್ಗಮಿಸಿದ ಬಳಿಕ ಇಂಗ್ಲೆಂಡ್‌ನ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಬೇಗನೆ ಔಟಾದರು.

ಒಂದು ಹಂತದಲ್ಲಿ 6 ವಿಕೆಟ್‌ಗೆ 198 ರನ್ ಗಳಿಸಿದ್ದ ಇಂಗ್ಲೆಂಡ್ 215 ರನ್‌ಗೆ ಆಲೌಟಾಯಿತು. ಉಭಯ ತಂಡಗಳು ಫೆ.6 ರಂದು 4ನೆ ಪಂದ್ಯವನ್ನು ಆಡಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X