Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧಿಕಾರಿಗಳಿಂದ ನೆರವು ನಿರಾಕರಣೆ:ತಾಯಿಯ...

ಅಧಿಕಾರಿಗಳಿಂದ ನೆರವು ನಿರಾಕರಣೆ:ತಾಯಿಯ ಶವವನ್ನು ಹೊತ್ತು ಹಿಮದ ರಾಶಿಯಲ್ಲಿ 50 ಕಿ.ಮೀ.ನಡೆದ ಕಾಶ್ಮೀರಿ ಯೋಧ

ವಾರ್ತಾಭಾರತಿವಾರ್ತಾಭಾರತಿ3 Feb 2017 11:26 PM IST
share
ಅಧಿಕಾರಿಗಳಿಂದ ನೆರವು ನಿರಾಕರಣೆ:ತಾಯಿಯ ಶವವನ್ನು ಹೊತ್ತು ಹಿಮದ ರಾಶಿಯಲ್ಲಿ 50 ಕಿ.ಮೀ.ನಡೆದ ಕಾಶ್ಮೀರಿ ಯೋಧ

ಪಠಾಣ್‌ಕೋಟ್,ಫೆ.3: ಆ ಕಾಶ್ಮೀರಿ ಯೋಧನ ತಾಯಿ ಸತ್ತು ಹೋಗಿದ್ದಳು. ತಾಯಿಯ ಅಂತ್ಯಸಂಸ್ಕಾರವನ್ನು ಸ್ವಗ್ರಾಮದಲ್ಲಿ ನೆರವೇರಿಸಲು ಬಯಸಿದ್ದ ಯೋಧನಿಗೆ ಹೆಲಿಕಾಪ್ಟರ್ ಒದಗಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಆ ಭರವಸೆ ಭರವಸೆಯಾಗಿಯೇ ಉಳಿದಾಗ ಆರು ದಿನಗಳ ಹಿಂದೆ ಕೊನೆಯುಸಿರೆಳೆದಿದ್ದ ತಾಯಿಯನ್ನು ಹೊತ್ತುಕೊಂಡು ಆತ ಆರು ಅಡಿ ಎತ್ತರದ ಹಿಮದ ರಾಶಿಯಲ್ಲಿ ಬರೋಬ್ಬರಿ 50 ಕಿ.ಮೀ.ನಡೆದು ತಾಯಿಯ ಋಣವನ್ನು ತೀರಿಸಿದ್ದಾನೆ. ಬಂಧುಗಳೂ ಆತನೊಂದಿಗೆ ಸಹಕರಿಸಿದ್ದರು.

 ಮೊಹಮ್ಮದ್ ಅಬ್ಬಾಸ್(25) ಪಠಾಣ್‌ಕೋಟ್‌ನಲ್ಲಿ ವಾಸವಾಗಿದ್ದು, ತಾಯಿ ಸಕೀನಾ ಬೇಗಂ ಕೂಡ ಜೊತೆಯಲ್ಲಿದ್ದಳು. ಆರು ದಿನಗಳ ಹಿಂದೆ ಆಕೆ ನಿಧನಳಾಗಿದ್ದಳು. ಭಾರೀ ಹಿಮಪಾತದಿಂದ ಕುಪ್ವಾರಾದಿಂದ ಆತನ ಸ್ವಗ್ರಾಮ ಕರ್ನಾವನ್ನು ಸಂಪರ್ಕಿಸುವ ರಸ್ತೆ ಮುಚ್ಚಿಹೋಗಿತ್ತು. ಹೆಲಿಕಾಪ್ಟರ್ ಒದಗಿಸುವ ಅಧಿಕಾರಿಗಳ ಭರವಸೆ ಸುಳ್ಳಾದಾಗ ಹೆಗಲ ಮೇಲೆ ಹೊತ್ತುಕೊಂಡೇ ಸ್ವಗ್ರಾಮಕ್ಕೆ ತಾಯಿಯ ಶವವನ್ನು ಸಾಗಿಸಲು ನಿರ್ಧರಿಸಿದ್ದ. ಆತ ಮತ್ತು ಬಂಧುಗಳು ಸಕೀನಾಳ ಶವವನ್ನು ಬಿದಿರನ ಅಟ್ಟಣಿಗೆಯಲ್ಲಿ ಹೊತ್ತುಕೊಂಡು ಸಾಗಿಸುತ್ತಿದ್ದಾಗ ಗ್ರಾಮಸ್ಥರು ಹಿಮದ ರಾಶಿಗಳನ್ನು ಸರಿಸುವ ಮೂಲಕ ತಮ್ಮ ಕೈಲಾದಷ್ಟು ಸಹಾಯ ನೀಡಿದ್ದರು.

ಸುದೀರ್ಘ,ಶ್ರಮದಾಯಕ ನಡಿಗೆಯ ಬಳಿಕ ಅಬ್ಬಾಸ್ ಗುರುವಾರ ಸಂಜೆ ಸ್ವಗ್ರಾಮವನ್ನು ತಲುಪಿದ್ದ. ನೂರಾರು ಗ್ರಾಮಸ್ಥರು ಯೋಧನ ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಇದು ತೀರ ಅವಮಾನದ ಸಂಗತಿ. ನನ್ನ ತಾಯಿಯ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನಡೆಸಲೂ ನನ್ನಿಂದ ಸಾಧ್ಯವಾಗಲಿಲ್ಲ. ತಾಯಿಯ ಶವದೊಂದಿಗೆ ನನ್ನನ್ನು ಅಧಿಕಾರಿಗಳು ಕಾಯಿಸುತ್ತಲೇ ಇದ್ದರು,ಆದರೆ ಅವರು ಹೆಲಿಕಾಪ್ಟರ್ ಕಳುಹಿಸಲೇ ಇಲ್ಲ ಎಂದು ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅಬ್ಬಾಸ್ ತಿಳಿಸಿದ.

ಆದರೆ ಅಧಿಕಾರಿಗಳು ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದಾರೆ. ನಾವು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದೆವು.. ಆದರೆ ಹವಾಮಾನದ ಬಗ್ಗೆ ಆ ಕುಟುಂಬಕ್ಕೆ ಗ್ಯಾರಂಟಿ ಇರಲಿಲ್ಲ, ಹೆಲಿಕಾಪ್ಟರ್ ಮೇಲಕ್ಕೆ ಹಾರುವ ಭರವಸೆಯೂ ಅವರಿಗಿರಲಿಲ್ಲ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X