Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಗಾಂಡದಲ್ಲಿ ದಯನೀಯ ಸ್ಥಿತಿಯಲ್ಲಿ...

ಉಗಾಂಡದಲ್ಲಿ ದಯನೀಯ ಸ್ಥಿತಿಯಲ್ಲಿ ಬೆಳ್ತಂಗಡಿಯ ಕುಟುಂಬ

# ಒಪ್ಪೊತ್ತಿನ ಊಟಕ್ಕೂ ಪರದಾಟ, ಸಹಾಯಕ್ಕೆ ಮನವಿ

-ರಶೀದ್ ವಿಟ್ಲ.-ರಶೀದ್ ವಿಟ್ಲ.4 Feb 2017 9:05 AM IST
share
ಉಗಾಂಡದಲ್ಲಿ ದಯನೀಯ ಸ್ಥಿತಿಯಲ್ಲಿ ಬೆಳ್ತಂಗಡಿಯ ಕುಟುಂಬ

ಮಂಗಳೂರು, ಫೆ.4: ಬೆಳ್ತಂಗಡಿ ತಾಲೂಕಿನ ಯುವಕನೊಬ್ಬ ತನ್ನ ಕುಟುಂಬ ಸಮೇತ ಆಫ್ರಿಕಾ ಉಗಾಂಡದ ಕೇಂದ್ರಸ್ಥಾನ ಕಂಪಾಲಾದಲ್ಲಿ ದಯನೀಯ ಸ್ಥಿತಿಯಲ್ಲಿ ದಿನದೂಡುತ್ತಿದ್ದಾರೆ. ತಾನು ಮದುವೆಯಾಗಿರುವ ಸೋಮಾಲಿಯಾದ ಪತ್ನಿ, 5 ಹಾಗೂ 3 ವರ್ಷದ ಇಬ್ಬರು ಹೆಣ್ಮಕ್ಕಳು, 1 ವರ್ಷದ ಗಂಡು ಮಗುವಿನೊಂದಿಗೆ ಹೊಟ್ಟೆಗೆ ಅನ್ನವಿಲ್ಲದೆ ಅಕ್ಷರಶಃ ಸೊರಗಿ ಹೋಗಿದ್ದಾರೆ.

ಬೆಳ್ತಂಗಡಿಯ ಈ ಯುವಕ ಹಲವು ವರ್ಷಗಳಿಂದ ಉಗಾಂಡದ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಸೋಮಾಲಿಯಾದ ಪ್ರಜೆಯನ್ನು ಮದುವೆಯಾಗಿದ್ದು, ಮೂವರು ಮಕ್ಕಳೂ ಇದ್ದಾರೆ. ಅವರೆಲ್ಲಾ ಉಗಾಂಡದ ಕಂಪಾಲಾ ಸಮೀಪದ ನಮುವೊಂಗೋ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಹೀಗಿರುವಾಗ 4 ತಿಂಗಳ ಹಿಂದೆ ಬೆಳ್ತಂಗಡಿಯ ಯುವಕ ತನ್ನ ಕಂಪೆನಿ ಕಚೇರಿಗೆ ಬೀಗ ಹಾಕಿ ಕಂಪೆನಿಯ ಹಣದೊಂದಿಗೆ ಬೈಕ್'ನಲ್ಲಿ ಮನೆಕಡೆ ತೆರಳುತ್ತಿದ್ದಾಗ ಯಾರೋ ಅಪರಿಚಿತರು ಆತನ ಕೈಯಲ್ಲಿದ್ದ ಮೊತ್ತವನ್ನು ಮತ್ತು ಕಚೇರಿಯ ಕೀಯನ್ನು ದರೋಡೆ ಮಾಡಿ ಪರಾರಿಯಾಗುತ್ತಾರೆ. ಭಾರತೀಯ ಮೌಲ್ಯ ಸುಮಾರು 12 ಲಕ್ಷ ರೂ. ದರೋಡೆಯಾಗಿದೆ. ಕಂಪೆನಿಯು ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿಯ ಯುವಕನನ್ನು ಹೊಣೆ ಮಾಡಿದೆ. ದರೋಡೆಯಾಗಿರುವ ಹಣ ಹೊಂದಿಸಲು ಯುವಕನಿಗೆ ಕಷ್ಟವಾದಾಗ ಕಂಪೆನಿ ಪೊಲೀಸ್ ದೂರು ನೀಡಿದ್ದು, ಯುವಕನನ್ನು ಪೊಲೀಸರು ಬಂಧಿಸಿದ್ದರು. ಇತ್ತ ಆತನ ಪತ್ನಿ ಮತ್ತು ಮೂವರು ಮಕ್ಕಳು ಅಸಹಾಯಕರಾದರು. ಇದೀಗ ಇಡೀ ಕುಟುಂಬ ಬೀದಿ ಪಾಲಾಗುವಂತಾಯಿತು. ಬೆಳ್ತಂಗಡಿಯ ಯುವಕನ ಮನೆಯವರೂ ಏನೂ ಮಾಡಲಾಗದೆ ಅತಂತ್ರರಾದರು.

ಈ ಎಲ್ಲಾ ವಿದ್ಯಮಾನದಲ್ಲೂ ಆ ಯುವಕ, ಆತನ ಪತ್ನಿ, ಯುವಕನ ಮನೆಯವರು ನನ್ನ ಸಂಪರ್ಕದಲ್ಲಿದ್ದರು. ನಾನು ಕೂಡಾ ಉಗಾಂಡದಲ್ಲಿರುವ ಇಬ್ಬರನ್ನು ಸಂಪರ್ಕಿಸಿದರೂ ಅವರು ಮುತುವರ್ಜಿ ವಹಿಸಿಲ್ಲ. ನಾನು ಕೂಡಾ ಅಸಹಾಯಕನಾದೆ. ಯುವಕ ಬಂಧನದಲ್ಲಿದ್ದ ಸಂದರ್ಭ ಆತನ ಪತ್ನಿ, ಮಕ್ಕಳಿಗೆ ಹತ್ತಿರದ ಮಸೀದಿಯಿಂದ ಆಹಾರ ಸಾಮಗ್ರಿ ಪೂರೈಸಲಾಗುತ್ತಿತ್ತು. ಆದರೆ ಇದೀಗ ಯುವಕನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆ ಬಳಿಕ ಮಸೀದಿಯವರು ಆತನ ಕುಟುಂಬಕ್ಕೆ ಆಹಾರ ಸಾಮಗ್ರಿ ನೀಡುವುದನ್ನು ನಿಲ್ಲಿಸಿದ್ದಾರೆ. ಯುವಕ ಬಿಡುಗಡೆಯಾದರೂ ಕೇಸ್ ಇರುವ ಕಾರಣ ಕೆಲಸಕ್ಕೆ ಹೋಗುವಂತಿಲ್ಲ. ಮನೆಯಲ್ಲಿ ಕೂತು ಏನು ಮಾಡುವಾಗೂ ಇಲ್ಲ. ಸಂತ್ರಸ್ತ ಯುವಕ ತನ್ನ ಕುಟುಂಬಕ್ಕೆ ಊಟಕ್ಕೇನಾದರೂ ನೆರವಾಗುವಂತೆ ದೂರವಾಣಿ ಕರೆ ಮಾಡಿ ಮನವಿ ಮಾಡಿದ್ದಾರೆ.

ಯುಎಇ, ಸೌದಿ ಅಥವಾ ಇನ್ನಿತರ ಗಲ್ಫ್ ರಾಷ್ಟ್ರವಾಗುತ್ತಿದ್ದರೆ ಈ ಯುವಕನಿಗೆ ಅಗತ್ಯ ನೆರವಿನ ವ್ಯವಸ್ಥೆ ಕಲ್ಪಿಸಬಹುದಿತ್ತು. ಉಗಾಂಡದಲ್ಲಿ ಸಹಾಯಕ್ಕೆ ಯಾರೂ ಸಿಗುತ್ತಿಲ್ಲ. ಮೂವರು ಪುಟ್ಟ ಮಕ್ಕಳ ಈ ಕುಟುಂಬ ನೆರವಿಗಾಗಿ ಎದುರು ನೋಡುತ್ತಿದೆ. ಈ ವಿವರವನ್ನು ಓದುವ ಯಾರಾದರೂ ತಮ್ಮ ಪರಿಚಯದ ಉಗಾಂಡದಲ್ಲಿರುವವರಿದ್ದರೆ ಮಾಹಿತಿ ನೀಡಿ. ಸಂಕಷ್ಟದಲ್ಲಿರುವ ಬೆಳ್ತಂಗಡಿಯ ಈ ಯುವಕನ ಕುಟುಂಬ ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ.  

(ಗೌಪ್ಯತೆಗಾಗಿ ಸಂತ್ರಸ್ತ ಯುವಕನ ಹೆಸರು, ಊರು, ವಿವರವನ್ನು ನೀಡಿಲ್ಲ. ಉಗಾಂಡದಲ್ಲಿ ಯಾರಾದರೂ ಇದ್ದರೆ ಅಥವಾ ಸಹಕಾರ ನೀಡುವವರಿದ್ದರೆ ಹೆಚ್ಚಿನ ವಿವರಗಳಿಗೆ  ರಶೀದ್ ವಿಟ್ಲ (ಮೊ.+91 9741993313) ಅನ್ನು ಸಂಪರ್ಕಿಸಬಹುದು.)

share
-ರಶೀದ್ ವಿಟ್ಲ.
-ರಶೀದ್ ವಿಟ್ಲ.
Next Story
X