Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎಂ ಮೂಲಕ ಶಶಿಕಲಾ ಮಾಡುತ್ತಿರುವುದೇನು ?

ಸಿಎಂ ಮೂಲಕ ಶಶಿಕಲಾ ಮಾಡುತ್ತಿರುವುದೇನು ?

ತಮಿಳುನಾಡಿನಲ್ಲಿ ಬದಲಾವಣೆಯ ಅಲೆ

ವಾರ್ತಾಭಾರತಿವಾರ್ತಾಭಾರತಿ4 Feb 2017 10:52 AM IST
share
ಸಿಎಂ ಮೂಲಕ ಶಶಿಕಲಾ ಮಾಡುತ್ತಿರುವುದೇನು ?

ಚೆನ್ನೈ, ಫೆ.4: ಅತ್ಯಂತ ಅಚ್ಚರಿಯ ಬೆಳವಣಿಗೆಯಲ್ಲಿ ಮಾಜಿ ಕಾರ್ಯದರ್ಶಿ, ಸರಕಾರದ ಸಲಹೆಗಾರ್ತಿ ಶೀಲಾ ಬಾಲಕೃಷ್ಣನ್ ಸಹಿತ ಮೂವರು ಉನ್ನತಾಧಿಕಾರಿಗಳಿಗೆ ರಾಜೀನಾಮೆ ನೀಡಲು ಸೂಚಿಸುವ ಮೂಲಕ ತಮಿಳುನಾಡು ರಾಜ್ಯದೆಲ್ಲೆಡೆ ಹೊಸ ಬದಲಾವಣೆಯ ಅಲೆ ಎದ್ದಿದೆ.

   ಶೀಲಾ ಬಾಲಕೃಷ್ಣನ್, ಕೆಎನ್ ವೆಂಕಟರಮಣನ್‌ರಿಗೆ ತಮ್ಮ ಹುದ್ದೆಯನ್ನು ತ್ಯಜಿಸುವಂತೆ ಸಿಎಂ ಓ. ಪನ್ನೀರ್ ಸೆಲ್ವಂ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಯ ಕಾರ್ಯದರ್ಶಿಯಾಗಿರುವ ರಾಮಲಿಂಗಂ ಸೇವೆಯಲ್ಲಿರುವ ಅಧಿಕಾರಿಯಾಗಿದ್ದು, ಅವರಿಗೂ ಹುದ್ದೆ ತ್ಯಜಿಸಲು ಸೂಚಿಸಲಾಗಿದೆ ಎನ್ನಲಾಗಿದೆ.

2014ರಲ್ಲಿ ನಾಗರಿಕ ಸೇವೆಯಿಂದ ನಿವೃತ್ತಿಯಾದ ಬಳಿಕ ಮಾಜಿ ಮುಖ್ಯಮಂತ್ರಿ ಜಯಲಲಿತಾರಿಂದ ಸಲಹೆಗಾರ್ತಿಯಾಗಿ ನೇಮಕಗೊಂಡಿದ್ದ ಶೀಲಾ ಅವರು ಅವರು ಈಗಾಗಲೇ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ವೆಂಕಟರಾಮನ್ ರಾಜೀನಾಮೆಗಾಗಿ ಕಾಯಲಾಗುತ್ತಿದೆ. ಈ ಮೂವರು ಉನ್ನತಾಧಿಕಾರಿಗಳು ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾಗೆ ತುಂಬಾ ಆತ್ಮೀಯರಾಗಿದ್ದವರು. ಜಯಲಲಿತಾ ನಿಧನರಾದ ಎರಡು ತಿಂಗಳ ಬಳಿಕ ಸರಕಾರ ಈ ಹೆಜ್ಜೆ ಇಟ್ಟಿದೆ.

‘‘ಸಿಎಂ(ಪನ್ನೀರ್‌ಸೆಲ್ವಂ) ಪೊಯೆಸ್ ಗಾರ್ಡನ್‌ನಿಂದ(ಶಶಿಕಲಾ) ಬರುವ ಸೂಚನೆಯಂತೆ ನಡೆದುಕೊಳ್ಳುತ್ತಿದ್ದಾರೆ. ಇದೊಂದು ಅತ್ಯಂತ ಆಘಾತಕಾರಿ ಹೆಜ್ಜೆ’’ ಎಂದು ಓರ್ವ ಅಧಿಕಾರಿ ತಿಳಿಸಿದ್ದಾರೆ.

 ಜಯಲಲಿತಾ 75 ದಿನಗಳ ಕಾಲ ಅಪೊಲೊ ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಶೀಲಾ ಅವರು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹಾಗೂ ಮುಖ್ಯಮಂತ್ರಿ ಜಯಲಲಿತಾರ ನಡುವೆ ಕೇಂದ್ರ ವ್ಯಕ್ತಿಯಾಗಿ ಗುರುತಿಸಿಕೊಂಡು ತಮಿಳುನಾಡಿನ ಆಡಳಿತವನ್ನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಮುನ್ನಡೆಸಿದ್ದರು.

ಕೇರಳ ಮೂಲದ 1976ರ ಐಎಎಸ್ ಬ್ಯಾಚಿನ ಶೀಲಾ ಬಾಲಕೃಷ್ಣನ್ 1977ರಲ್ಲಿ ತಮಿಳುನಾಡಿನ ತಂಜಾವೂರಿನಲ್ಲಿ ಸಹಾಯಕ ಕಲೆಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. 2002 ರಿಂದ 2006ರ ತನಕ ರಾಜ್ಯ ಕಾರ್ಯದರ್ಶಿಯಾಗಿ ಆಗಿನ ಮುಖ್ಯಮಂತ್ರಿ ಜಯಲಲಿತಾರ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಶೀಲಾ 2013ರ ಜ.1ರಂದು ಮುಖ್ಯ ಕಾರ್ಯದರ್ಶಿಯಾಗಿ ಭಡ್ತಿ ಪಡೆದಿದ್ದರು. 2014ರ ಮಾ.14ರ ತನಕ ಇದೇ ಹುದ್ದೆಯಲ್ಲಿ ಮುಂದುವರಿದಿದ್ದರು.

ಜಯಲಲಿತಾರ ‘ಕಣ್ಣು ಹಾಗೂ ಕಿವಿ’’ಯಾಗಿದ್ದ ಶೀಲಾ ನಿವೃತ್ತಿಯ ಬಳಿಕ ಒಂದು ವರ್ಷಗಳ ಕಾಲ ಸರಕಾರದ ಸಲಹೆಗಾರ್ತಿಯಾಗಿದ್ದರು. 2015ರಲ್ಲಿ ಅವರ ಸೇವೆಯನ್ನು ಎರಡು ವರ್ಷಕ್ಕೆ ವಿಸ್ತರಿಸಲಾಗಿತ್ತು. ವೆಂಕಟರಮಣನ್ 1987ರ ಕೆಎಎಸ್ ಅಧಿಕಾರಿಯಾಗಿದ್ದು 2012ರಲ್ಲಿ ಪ್ರಿನ್ಸಿಪಾಲ್ ಸೆಕ್ರಟರಿಯಾಗಿ ನಿವೃತ್ತಿಯಾಗಿದ್ದರು.ಈ ವರ್ಷದ ಮೇನಲ್ಲಿ ಅವರ ಐದು ವರ್ಷಗಳ ಅವಧಿ ಮುಕ್ತಾಯವಾಗಬೇಕಾಗಿತ್ತು.

  ಕಳೆದ ವರ್ಷ ಡಿ.5 ರಂದು ಜಯಲಲಿತಾ ನಿಧನರಾದ ಬಳಿಕ ಎಐಎಡಿಎಂಕೆ ನಾಯಕಿ ಜಯಲಲಿತಾ ನೇಮಕ ಮಾಡಿರುವ ಅಧಿಕಾರಿಗಳನ್ನು ಕಿತ್ತ್ತುಹಾಕಿ ಹೊಸಬರನ್ನು ನೇಮಕಮಾಡಲಾಗುತ್ತದೆ ಎಂಬ ಮಾತು ಕೇಳಿಬಂದಿತ್ತು. ಇದೀಗ ಅದು ನಿಜವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X