Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭೂ ಮಸೂದೆಯಿಂದ ಹೆಚ್ಚಿನ ಭೂಮಿ ಪಡೆದವರು...

ಭೂ ಮಸೂದೆಯಿಂದ ಹೆಚ್ಚಿನ ಭೂಮಿ ಪಡೆದವರು ದ.ಕ. ಜಿಲ್ಲೆಯವರು: ಸಚಿವ ರೈ

ಪುತ್ತೂರು ಎಪಿಎಂಸಿ: ವಿವಿಧ ಕಾಮಗಾರಿಗಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Feb 2017 4:12 PM IST
share
ಭೂ ಮಸೂದೆಯಿಂದ ಹೆಚ್ಚಿನ ಭೂಮಿ ಪಡೆದವರು ದ.ಕ. ಜಿಲ್ಲೆಯವರು: ಸಚಿವ ರೈ

ಪುತ್ತೂರು, ಫೆ.4: ಭೂ ಮಸೂದೆ ಕಾಯ್ದೆಯಡಿ ದೇಶದಲ್ಲಿಯೇ ಅತ್ಯಂತ ಹೆಚ್ಚು ಭೂಮಿ ಪಡೆದುಕೊಂಡು ಪರಿಣಾಮಕಾರಿಯಾಗಿ ಬಳಸಿಕೊಂಡವರು, ಬಗರ್ ಹುಕುಂ ಕಾಯ್ದೆಯಡಿಯಲ್ಲೂ ಅತ್ಯಂತ ಹೆಚ್ಚು ಭೂಮಿ ಪಡೆದವರು ದ.ಕ. ಜಿಲ್ಲೆಯ ಜನತೆಯಾಗಿದ್ದಾರೆ. ಅಲ್ಲದೆ 94ಸಿ ಯೋಜನೆಯಡಿ ಅತ್ಯಂತ ಹೆಚ್ಚು ಅರ್ಜಿ ಸಲ್ಲಿಸಿರುವವರು ಕೂಡ ನಮ್ಮ ಜಿಲ್ಲೆಯವರೇ ಆಗಿದ್ದಾರೆ. ಇದೊಂದು ಹೆಮ್ಮೆಯ ವಿಚಾರ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಲಾದ ರೈತ ಸಭಾಭವನ ಹಾಗೂ ಪ್ರವೇಶ ದ್ವಾರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಜಿಲ್ಲೆಯ ಕೃಷಿಕರನ್ನು ಇತರ ಜಿಲ್ಲೆಗಳ ರೈತರಿಗೆ ಹೋಲಿಕೆ ಮಾಡಲು ಆಗುವುದಿಲ್ಲ. ನಮ್ಮಲ್ಲಿರುವ ರೈತರು ಸಣ್ಣ ಹಿಡುವಳಿದಾರರಾಗಿದ್ದರೂ ವೌಲ್ಯಾಧಾರಿತ ಕೃಷಿ ಮಾಡುವ ಮೂಲಕ ಹೆಚ್ಚಿನ ಲಾ ಪಡೆಯುವವರಾಗಿದ್ದಾರೆ. ಇದರಿಂದಾಗಿಯೇ ಜಿಲ್ಲೆಯಲ್ಲಿ ಲಾಭದಾಯಕ ಕೃಷಿಯನ್ನು ಕಾಣಬಹುದಾಗಿದೆ. ಸಾಮಾಜಿಕ ಬದಲಾವಣೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡ ಜಿಲ್ಲೆ ನಮ್ಮದಾಗಿದೆ ಎಂದರು.

ಮಧ್ಯವರ್ತಿಗಳನ್ನು ದೂರ ಮಾಡಬೇಕೆಂಬ ದೃಷ್ಟಿಯಿಂದ ಮಾರುಕಟ್ಟೆ ಪ್ರಾಂಗಣ ನಿರ್ಮಿಸಲಾಗುತ್ತಿದ್ದು, ಜಿಲ್ಲೆಯ ಪುತ್ತೂರು, ಸುಳ್ಯ ಮತ್ತು ಬಂಟ್ವಾಳದಲ್ಲಿ ಮಾತ್ರ ಈ ವ್ಯವಸ್ಥೆಯನ್ನು ಕಾಣಬಹುದು. ಆದರೆ ಮಂಗಳೂರಿನಲ್ಲಿ ಕೋಟ್ಯಂತರ ಹಣ ಖರ್ಚು ಮಾಡಿದ ಎಪಿಎಂಸಿ ಪ್ರಾಂಗಣಕ್ಕೆ ತೆರಳಲು ಅಲ್ಲಿನ ಮಂದಿ ಒಪ್ಪದ ಕಾರಣ ವ್ಯಾಪಾರ ಸ್ಥಳಾಂತರಿಸಲು ಸಾಧ್ಯವಾಗಿಲ್ಲ ಎಂದ ಅವರು ನಮ್ಮ ಜಿಲ್ಲೆಯಲ್ಲಿ ಎಪಿಎಂಸಿ ವಿಚಾರದಲ್ಲಿ ಜಿಜ್ಞಾಸೆ ಇದೆ. ರೈತರಿಗೆ ಅನುಕೂಲಕರವಾದ ವ್ಯವಸ್ಥೆಗಳನ್ನು ಮಾಡಿಕೊಟ್ಟು, ರೈತರ ಕಷ್ಟ ನೋವುಗಳಿಗೆ ಸ್ಪಂದಿಸುವ ಕೆಲಸವನ್ನು ಕಾನೂನುಬದ್ಧವಾಗಿ ಮಾಡುವ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆಯು ರೈತರ ಪಾಲಿಗೆ ಆಪತ್ಭಾಂಧವವಾಗಬೇಕು ಎಂದರು.

ನೂತನವಾಗಿ ನಿರ್ಮಿಸಲಾಗಿರುವ ಅತಿಥಿಗೃಹವನ್ನು ಉದ್ಘಾಟಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಪುತ್ತೂರು ಎಪಿಎಂಸಿ ದಾಖಲೆಗಳತ್ತ ದಾಪುಗಾಲಿಡುತ್ತಿದೆ. ಮಂಗಳೂರಿನಲ್ಲಿ ವಾರ್ಷಿಕವಾಗಿ ಆರು ಕೋ.ರೂ. ವಾರ್ಷಿಕ ಆದಾಯ ಸಂಗ್ರಹವಾಗುತ್ತಿದ್ದು, ಪುತ್ತೂರು ಎಪಿಎಂಸಿ ಇದೀಗ ಆ ಸ್ಥಾನಕ್ಕೆ ಬಂದು ತಲುಪುವ ಮೂಲಕ ಇದೀಗ 2ನೆ ಸ್ಥಾನದಲ್ಲಿದೆ. ರಾಜ್ಯದ ಯಲ್ಲಾಪುರ ಎಪಿಎಂಸಿ ಬಿಟ್ಟರೆ ಸಭಾಂಗಣ ವ್ಯವಸ್ಥೆಯಿರುವ ಎರಡನೆ ಎಪಿಎಂಸಿ ಪುತ್ತೂರು ಆಗಿದೆ ಎಂದರು.

ನಿತ್ಯ ಮಾರುಕಟ್ಟೆ ಎಪಿಎಂಸಿಯಲ್ಲಿ ನಡೆಯುವಂತಾಗಬೇಕು ಎಂದ ಅವರು ರೈತರ ಮಕ್ಕಳು ಈ ಸಭಾಂಗಣದ ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆಯಿತ್ತರು.

ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ, ಪುತ್ತೂರು ಪುಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಶುಭ ಹಾರೈಸಿದರು.

ಪ್ರಗತಿಪರ ಕೃಷಿಕರಿಗೆ ಸನ್ಮಾನ: ಈ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಪ್ರಗತಿ ಪರ ಕೃಷಿಕರಾದ ರೆಂಜಲಾಡಿ ಕೂಡಿಗೆಮನೆ ವಸಂತ, ಸರ್ವೆಯ ಅಣ್ಣು ಪೂಜಾರಿ, ಕರ್ನೂರು ಗುತ್ತು ಸತೀಶ್ ರೈ, ಮುಂಡೂರು ಪಜಿಮಣ್ಣು ತಿಮ್ಮಪ್ಪಗೌಡ, ಪಡ್ಡಮೆ ದಯಾನಂದ ಗೌಡ, ಕುಮಾರ್ ಪೆರ್ನಾಜೆ, ಬಜತ್ತೂರು ಕೋಡಿಮನೆ ಲಿಂಗಪ್ಪಗೌಡ, ಕರ್ನೂರು ನೇರೋಲ್ತಡ್ಕ ಎನ್.ಮೂಸನ್, ಶಾಂತಿಗೋಡಿನ ಮಜಲುಮನೆ ರುಕ್ಮಯ ಗೌಡ, ಅರಿಯಡ್ಕದ ಗುಂಡ್ಯಡ್ಕ ವಾಸು ಪೂಜಾರಿ, ಉಪ್ಪಿನಂಗಡಿಯ ನೆಕ್ಕರೆ ರಾಮಣ್ಣ ಗೌಡ, ಬನ್ನೂರಿನ ಕುಂಟ್ಯಾನ ಧರ್ಣಪ್ಪ ಗೌಡ, ಕುರಿಯ ಬಳ್ಳಮಜಲಿನ ರವೀಂದ್ರನಾಥ ರೈ ಮತ್ತು ಹಿರಿಯ ವರ್ತಕ ಯುನಿಟಿ ಪಿ.ಬಿ.ಹಸನ್ ಹಾಜಿಯವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಮಾರುಕಟ್ಟೆ ಅಭಿವೃದ್ಧಿ ಯೋಜನೆಯ ಮೈಸೂರು ವಿಭಾಗದ ಆಡಳಿತವಾಹಕ ಅಭಿಯಂತರ ವಿ.ಟಿ.ಚಂದ್ರಶೇಖರ್, ಎಪಿಎಂಸಿ ಉಪಾಧ್ಯಕ್ಷ ಕರುಣಾಕರ ಗೌಡ ಎಲಿಯ, ಸದಸ್ಯರಾದ ರಂಗನಾಥ ರೈ ಗುತ್ತು, ಸೀತಾರಾಮ ಗೌಡ ಪೊಸವಳಿಕೆ, ಸಾಜ ರಾಧಾಕೃಷ್ಣ ಆಳ್ವ, ಶೀನಪ್ಪಗೌಡ ವಳಕಡಮ, ಗುರುನಾಥ ಗೌಡ, ಕೃಷ್ಣ ನಾಯ್ಕ, ಡಿ.ಸೋಮನಾಥ್, ತ್ರಿವೇಣಿ ಕರುಣಾಕರ್, ಪ್ರಮೋದ್ ಕೆ.ಎಸ್., ಯಶೋಧರ ಕೆ. ಗೌಡ, ಅಬ್ದುಲ್ ಶಕೂರ್ ವಿ.ಎಚ್., ಮಹೇಶ್ ರೈ ಅಂಕೋತಿಮಾರು, ಮಾಣಕ್ಯರಾಜ್ ಪಡಿವಾಳ್, ಶಾಲಿನಿ ಸತೀಶ್ ನಾಕ್, ದ.ಕ. ಜಿಲ್ಲಾ ಕೃಷಿ ಮಾರಾಟ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ಭಾರತಿ ಪಿ.ಎಸ್. ಉಪಸ್ಥಿತರಿದ್ದರು.

ಎಪಿಎಂಸಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸ್ವಾಗತಿಸಿದರು. ಕಾರ್ಯದರ್ಶಿ ಎಚ್.ಕೆ.ಕೃಷ್ಣಮೂರ್ತಿ ವಂದಿಸಿದರು. ಉಪನ್ಯಾಸಕ ರಾಜೇಶ್ ಬಿಜ್ಜಂಗಳ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X