Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ಯಾನ್ಸರ್ ಪೀಡಿತ ಬಾಕ್ಸರ್ ಡಿಂಕೊಗೆ...

ಕ್ಯಾನ್ಸರ್ ಪೀಡಿತ ಬಾಕ್ಸರ್ ಡಿಂಕೊಗೆ ಕೇಂದ್ರದಿಂದ ನೆರವಿನ ಭರವಸೆ

ಚಿಕಿತ್ಸೆ ವೆಚ್ಚ ಭರಿಸಲು ಮನೆ ಮಾರಿದ್ದ ಮಣಿಪುರದ ಬಾಕ್ಸರ್

ವಾರ್ತಾಭಾರತಿವಾರ್ತಾಭಾರತಿ4 Feb 2017 8:31 PM IST
share
ಕ್ಯಾನ್ಸರ್ ಪೀಡಿತ ಬಾಕ್ಸರ್ ಡಿಂಕೊಗೆ ಕೇಂದ್ರದಿಂದ ನೆರವಿನ ಭರವಸೆ

ಹೊಸದಿಲ್ಲಿ, ಫೆ.4: ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿರುವ 1998ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತ ಬಾಕ್ಸರ್ ಡಿಂಕೊ ಸಿಂಗ್ ದಯನೀಯ ಸ್ಥಿತಿ ಬಗ್ಗೆ ವರದಿಯಾದ ಬಳಿಕ ಎಚ್ಚ್ಚ್ಚೆತ್ತುಕೊಂಡಿರುವ ಕೇಂದ್ರ ಸರಕಾರ ಸಹಾಯ ಹಸ್ತ ನೀಡುವ ಭರವಸೆ ನೀಡಿದೆ.

ಡಿಂಕೊ ಸಿಂಗ್ ಸಂಪೂರ್ಣ ಚೇತರಿಸಿಕೊಳ್ಳಲು ಸರಕಾರದಿಂದ ಸಾಧ್ಯವಿರುವ ಎಲ್ಲ ಸಹಾಯಹಸ್ತವನ್ನು ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೊಯೆಲ್ ಹೇಳಿದ್ದಾರೆ.

ಅಸಹಾಯಕ ಸ್ಥಿತಿಯಲ್ಲಿರುವ ಡೆಂಕೊ ಸಿಂಗ್ ಕಳೆದ ತಿಂಗಳು ತನ್ನ ಚಿಕಿತ್ಸೆಯ ವೆಚ್ಚಭರಿಸಲು ಇಂಪಾಲದಲ್ಲಿರುವ ಮನೆಯನ್ನು 10 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಆಪರೇಶನ್‌ನ ವೇಳೆ 70 ಶೇ. ಲಿವರ್‌ನ್ನು ಕತ್ತರಿಸಲಾಗಿದೆ.

 ‘‘ಮಣಿಪುರದ ಬಾಕ್ಸರ್‌ಗೆ ಸರಕಾರ ಎಲ್ಲ ರೀತಿಯ ಆರ್ಥಿಕ ನೆರವು ನೀಡಲಿದೆ. ಅವರು ಬಯಸುವ ಎಲ್ಲ ಚಿಕಿತ್ಸೆಯನ್ನು ನೀಡಲಾಗುತ್ತದೆ. ಡಿಂಕೊ ಇಂಪಾಲದ ಸಾಯ್ ಕೇಂದ್ರದಲ್ಲಿ ಕೋಚ್ ಆಗಿದ್ದು, ಅವರನ್ನು ಭೇಟಿಯಾಗಿ ನೆರವಿನಿಂದ ಭರವಸೆ ನೀಡಿರುವೆ. ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ’’ ಎಂದು ಸರಣಿ ಟ್ವೀಟ್ ಮಾಡಿರುವ ಗೊಯೆಲ್ ತಿಳಿಸಿದ್ದಾರೆ.

ನೌಕಾಪಡೆಯ ಮಾಜಿ ನೌಕರ, ಇಬ್ಬರು ಮಕ್ಕಳ ತಂದೆಯಾಗಿರುವ ಸಿಂಗ್ ಸಾಯ್ ಕೇಂದ್ರದಿಂದ 50,000 ರೂ. ಮುಂಗಡ ಹಣ ಪಡೆದಿದ್ದಾರೆ. 38ರ ಹರೆಯದ ಸಿಂಗ್ ಅವರು ಕಿಮೋಥೆರಪಿ ಚಿಕಿತ್ಸೆ ಶೀಘ್ರವೇ ಆರಂಭವಾಗಲಿದೆ.

ಜೀವ ಉಳಿಸಿಕೊಳ್ಳಲು ಹೋರಾಡುತ್ತಿರುವ ಬಾಕ್ಸರ್

ಬ್ಯಾಂಕಾಕ್‌ನಲ್ಲಿ 1998ರಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ತನ್ನ 19ರ ಹರೆಯದಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದ ಡಿಂಕೊ ಸಿಂಗ್ ಭಾರತಕ್ಕೆ ಮರಳಿದ ಬಳಿಕ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು. ಸರಕಾರಿ ಕೆಲಸವನ್ನು ಗಿಟ್ಟಿಸಿಕೊಂಡಿದ್ದ ಸಿಂಗ್‌ಗೆ ಇಂಪಾಲದಲ್ಲಿ ಮೂರು ಬೆಡ್‌ರೂಮ್ ಮನೆ ಉಡುಗೊರೆಯಾಗಿ ಲಭಿಸಿತ್ತು. 2013ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

ಡಿಂಕೊ ಸಿಂಗ್ ಬಳಿ ಈಗ ಪದಕಗಳಿವೆ ಹಾಗೂ ಸಾಯ್ ಕೇಂದ್ರದಲ್ಲಿ ಕೋಚ್ ಹುದ್ದೆಯೂ ಇದೆ. ಆದರೆ, ಕಳೆದ ನಾಲ್ಕು ತಿಂಗಳಲ್ಲಿ ಅವರು ಮನೆಯನ್ನು ಮಾರಾಟ ಮಾಡಿದ್ದಾರೆ. ಅವರನ್ನು ಬಾಧಿಸುತ್ತಿರುವ ಕ್ಯಾನ್ಸರ್‌ನಿಂದಾಗಿ ಅವರ ಲಿವರ್‌ನ ಶೇ.70ರಷ್ಟು ಭಾಗ ಹಾನಿಯಾಗಿದೆ. ಇದೀಗ ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಡಿಂಕೊ ಪ್ರಸ್ತುತ ದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜ.6 ರಂದು 14 ಗಂಟೆಗಳ ಕಾಲ ನಡೆದ ಲಿವರ್ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ದಿಲ್ಲಿಯ ಶಾಹಪುರದ ಜಾಟ್ ಹಳ್ಳಿಯಲ್ಲಿ ಗೆಳೆಯ ಮೂರು ಕೊಠಡಿಯ ಬಾಡಿಗೆಯ ಫ್ಲ್ಯಾಟ್‌ನಲ್ಲಿ ಪತ್ನಿ ಹಾಗೂ ಇಬ್ಬರ ಮಕ್ಕಳೊಂದಿಗೆ ನೆಲೆಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X