Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಸಿಸಿಐ ವಿರೋಧದ ನಡುವೆ ಆದಾಯ ಹಂಚಿಕೆ...

ಬಿಸಿಸಿಐ ವಿರೋಧದ ನಡುವೆ ಆದಾಯ ಹಂಚಿಕೆ ವ್ಯವಸ್ಥೆಯ ಬದಲಾವಣೆಗೆೆ ಐಸಿಸಿ ಮಂಡಳಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ4 Feb 2017 11:37 PM IST
share
ಬಿಸಿಸಿಐ ವಿರೋಧದ ನಡುವೆ ಆದಾಯ ಹಂಚಿಕೆ ವ್ಯವಸ್ಥೆಯ ಬದಲಾವಣೆಗೆೆ ಐಸಿಸಿ ಮಂಡಳಿ ನಿರ್ಧಾರ

ದುಬೈ, ಫೆ.4: ಐಸಿಸಿನ ಮುಖ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಐಸಿಸಿಯ ಆದಾಯ ಹಂಚಿಕೆ ವ್ಯವಸ್ಥೆಯ ಬದಲಾವಣೆಗೆ ಐಸಿಸಿ ಮಂಡಳಿಯ ಹೆಚ್ಚಿನ ಸದಸ್ಯರು ಬೆಂಬಲ ವ್ಯಕ್ತಪಡಿಸಿದರೆ, ಬಿಸಿಸಿಐ ಪ್ರತಿನಿಧಿ ವಿಕ್ರಂ ಲಿಮಯೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

2014ರಲ್ಲಿ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಜಾರಿಗೆ ತಂದಿದ್ದ ‘ಬಿಗ್ ತ್ರಿ’ ವ್ಯವಸ್ಥೆಗೆ ಭಾರತ ಹಾಗೂ ಶ್ರೀಲಂಕಾ ಮಾತ್ರ ಬೆಂಬಲ ನೀಡಿದರೆ, ಝಿಂಬಾಬ್ವೆ ತಟಸ್ಥ ನಿಲುವು ತಾಳಿತು. ಪಾಕಿಸ್ತಾನ, ನ್ಯೂಝಿಲೆಂಡ್, ದಕ್ಷಿಣ ಆಫ್ರಿಕ, ವೆಸ್ಟ್‌ಇಂಡೀಸ್, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ಆದಾಯ ಹಂಚಿಕೆ ಹಾಗೂ ಆಡಳಿತ ವ್ಯವಸ್ಥೆಯ ಬದಲಾವಣೆಯ ಪರ ಮತ ಚಲಾಯಿಸಿದವು.

ಭಾರತ, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿಗಳು ‘ಬಿಗ್ ತ್ರಿ’ ವ್ಯವಸ್ಥೆಯ ಮೂಲಕ ಐಸಿಸಿ ಆದಾಯದ ಸಿಂಹಪಾಲು ಆದಾಯ ಪಡೆಯಲು ಅರ್ಹತೆ ಪಡೆದಿದ್ದವು. ‘ಬಿಗ್ ತ್ರಿ’ ವ್ಯವಸ್ಥೆಯ ಬಗ್ಗೆ ಸ್ವತಃ ಇಂಗ್ಲೆಂಡ್, ಆಸ್ಟ್ರೇಲಿಯ ಸಹಿತ ಎಲ್ಲ ಟೆಸ್ಟ್ ಆಡುವ ದೇಶಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ತಾನು ಐಸಿಸಿ ಮಂಡಳಿಯ ‘ನಂಬಿಕೆ’ ಹಾಗೂ ‘ಸಮಾನತೆ’ಯನ್ನು ಆಧರಿಸಿದ ಅಧಿಕೃತ ಮೂಲ ದಾಖಲೆಯ ಬಗ್ಗೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದ್ದೆ. ಐಸಿಸಿ ಚೇರ್ಮನ್ ಶಶಾಂಕ್ ಮನೋಹರ್ ಕೂಡ ಇನ್ನಷ್ಟು ಕಾಲ ಕಾಯಲು ಬಯಸಿದ್ದು, ಈ ವಿಷಯಕ್ಕೆ ಸಂಬಂಧಿಸಿ ಮತದಾನ ಮಾಡಬೇಕಾದ ಸಂದರ್ಭ ಬಂದಾಗ ಬದಲಾವಣೆಯ ವಿರುದ್ಧ ಮತ ಹಾಕುವುದಾಗಿ ತಿಳಿಸಿದ್ದಾರೆ. ಇದಕ್ಕೆ ಯಾರೆಲ್ಲಾ ಪರವಾಗಿ ಮತಹಾಕಬೇಕೆಂದು ಹೇಳಲು ತಾನು ಬಯಸುವುದಿಲ್ಲ ಎಂದು ಅಧಿಕೃತ ಮೂಲ ದಾಖಲೆಯನ್ನು ನೋಡಿದ ಬಳಿಕ ಬಿಸಿಸಿಐ ಪ್ರತಿನಿಧಿ ವಿಕ್ರಂ ಹೇಳಿದ್ದಾರೆ.

ಐಸಿಸಿ ತನ್ನ ಈ ನಿರ್ಣಯವನ್ನು ಎಪ್ರಿಲ್‌ನಲ್ಲಿ ನಡೆಯಲಿರುವ ಮಂಡಳಿ ಸಭೆಯಲ್ಲಿ ಅನುಮೋದಿಸುವ ಸಾಧ್ಯತೆಯಿದೆ. ಶುಕ್ರವಾರ ನಡೆದ ಐಸಿಸಿನ ಮುಖ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಹೊಸ ಬದಲಾವಣೆ ಮಾಡಲು ಚಿಂತಿಸಲಾಗಿದ್ದು, ಪಂದ್ಯಗಳಿಗೆ ಮತ್ತಷ್ಟು ಆಕರ್ಷಣೆ ತರಲು ಲೀಗ್ ಮಾದರಿಯನ್ನು ಜಾರಿಗೆ ತರಲು ಯೋಚಿಸಲಾಗಿದೆ. ಶುಕ್ರವಾರದ ಈ ಬೆಳವಣಿಗೆಯು ಬಿಸಿಸಿಐಯನ್ನು ಆತಂಕಕ್ಕೀಡು ಮಾಡಿದೆ.

ಐಸಿಸಿ ಹೊಸ ಬದಲಾವಣೆಯತ್ತ ದಿಟ್ಟ ಹೆಜ್ಜೆ ಇಟ್ಟರೆ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಎನಿಸಿಕೊಂಡಿರುವ ಬಿಸಿಸಿಐ ಮುಂಬರುವ 2017ರ ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯನ್ನು ಬಹಿಷ್ಕರಿಸಲು ನಿರ್ಧರಿಸುವುದಲ್ಲದೆ, ಎಲ್ಲ ದ್ವಿಪಕ್ಷೀಯ ಸರಣಿಯಿಂದ ದೂರವುಳಿಯಲು ನಿರ್ಧರಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ 13 ತಂಡಗಳಿರುವ ಎರಡು ಹಂತದ ಟೆಸ್ಟ್ ಲೀಗ್ ನಡೆಸಲು ಪ್ರಸ್ತಾವನೆ ಸಲ್ಲಿಸಿದ್ದು, ಈ ಲೀಗ್ 2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಅರ್ಹತೆ ಪಡೆಯುವ ತಂಡಗಳನ್ನು ನಿರ್ಧರಿಸಲಿದೆ.

ಪ್ರಮುಖ ಹಂತದ ಲೀಗ್‌ನಲ್ಲಿ ಐಸಿಸಿ ರ್ಯಾಂಕಿಂಗ್‌ನಲ್ಲಿರುವ ಅಗ್ರ-9 ತಂಡಗಳು ಇರಲಿವೆ. ಝಿಂಬಾಬ್ವೆ, ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳ ಸಹಿತ ಇತರ ಅಸೋಸಿಯೇಟ್ ತಂಡಗಳು ಎರಡನೆ ಹಂತದಲ್ಲಿ ಇರಲಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X