Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ಲಕ್ಷ ರೂ.ಗಿಂತ ಹೆಚ್ಚಿನ ನಗದು ಹಣ...

ಮೂರು ಲಕ್ಷ ರೂ.ಗಿಂತ ಹೆಚ್ಚಿನ ನಗದು ಹಣ ಸ್ವೀಕರಿಸಿದರೆ ಅಷ್ಟೇ ಮೊತ್ತದ ದಂಡ:ಆಧಿಯಾ

ವಾರ್ತಾಭಾರತಿವಾರ್ತಾಭಾರತಿ5 Feb 2017 2:27 PM IST
share
ಮೂರು ಲಕ್ಷ ರೂ.ಗಿಂತ ಹೆಚ್ಚಿನ ನಗದು ಹಣ ಸ್ವೀಕರಿಸಿದರೆ ಅಷ್ಟೇ ಮೊತ್ತದ ದಂಡ:ಆಧಿಯಾ

ಹೊಸದಿಲ್ಲಿ,ಫೆ.5: ಕಪ್ಪುಹಣ ಸೃಷ್ಟಿಯಾಗುವುದನ್ನು ತಡೆಯಲು ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿರುವ ಕೇಂದ್ರವು ಎ.1ರಿಂದ ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ. ಯಾವುದೇ ವಹಿವಾಟಿಗೆ ಸಂಬಂಧಿಸಿದಂತೆ ಮೂರು ಲ.ರೂ.ಗಿಂತ ಅಧಿಕ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸಿದವರಿಗೆ ಅಷ್ಟೇ ಮೊತ್ತದ ದಂಡವನ್ನು ವಿಧಿಸಲಾಗುತ್ತದೆ.

ಮೂರು ಲಕ್ಷ ರೂ.ಗಿಂತ ಹೆಚ್ಚಿನ ನಗದು ಪಾವತಿಯ ನಿಷೇಧವನ್ನು 2017-18ನೇ ಸಾಲಿನ ಮುಂಗಡಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕಂದಾಯ ಕಾರ್ಯದರ್ಶಿ ಹಸ್ಮುಖ್ ಆಧಿಯಾ ಅವರು ಈ ವಿಷಯವನ್ನು ತಿಳಿಸಿದರು.

 ವ್ಯಕ್ತಿಯೋರ್ವ ಮೂರು ಲ.ರೂ.ಗೂ ಅಧಿಕ ವೌಲ್ಯದ ವಾಚನ್ನು ಖರೀದಿಸಿದ ಎಂದಿಟ್ಟುಕೊಳ್ಳಿ. ಅಂಗಡಿಯಾತ ಆ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸಿದರೆ ಆತ ಅಷ್ಟೇ ದಂಡವನ್ನು ಪಾವತಿಸಬೇಕಾಗುತ್ತದೆ. ಜನರು ದೊಡ್ಡ ಮೊತ್ತದ ನಗದು ವಹಿವಾಟು ನಡೆಸದಂತಿರಲು ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದರು.

ನೋಟು ಅಮಾನ್ಯ ಕ್ರಮದಿಂದ ಹೆಚ್ಚಿನ ಕಪ್ಪುಹಣ ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ. ಭವಿಷ್ಯದಲ್ಲಿ ಕಪ್ಪುಹಣ ಸೃಷ್ಟಿಯಾಗುವುದನ್ನು ನಿಲ್ಲಿಸಲು ಸರಕಾರವೀಗ ಮುಂದಾಗಿದೆ.

ದೊಡ್ಡ ಪ್ರಮಾಣದ ಎಲ್ಲ ನಗದು ವಹಿವಾಟುಗಳ ಮೆಲೆ ಸರಕಾರವು ಕಣ್ಣಿರಿಸಲಿದೆ ಎಂದು ಆಧಿಯಾ ತಿಳಿಸಿದರು.

ಭಾರೀ ಪ್ರಮಾಣದಲ್ಲಿ ಕಪ್ಪುಹಣ ಹೊಂದಿರುವವರು ಸಾಮಾನ್ಯವಾಗಿ ಅದನ್ನು ರಜಾದಿನಗಳ ಮೋಜಿಗಾಗಿ ಅಥವಾ ಕಾರು,ವಾಚ್,ಚಿನ್ನಾಭರಣದಂತಹ ಐಷಾರಾಮಿ ವಸ್ತುಗಳ ಖರೀದಿಗಾಗಿ ಬಳಸುತ್ತಾರೆ. ಹೊಸ ನಿಯಮವು ಇಂತಹ ವೆಚ್ಚದ ಮಾರ್ಗಗಳನ್ನು ಮುಚ್ಚಲಿದೆ ಮತ್ತು ಕಪ್ಪುಹಣ ಸೃಷ್ಟಿಯನ್ನು ನಿರುತ್ತೇಜಿಸುತ್ತದೆ ಎನ್ನುವುದು ಸರಕಾರದ ಲೆಕ್ಕಾಚಾರವಾಗಿದೆ.

ಎರಡು ಲಕ್ಷ ರೂ.ಗೂ ಅಧಿಕ ನಗದು ವಹಿವಾಟಿಗೆ ಪಾನ್ ಸಂಖ್ಯೆಯನ್ನು ನೀಡಬೇಕು ಎಂಬ ನಿಯಮ ಮುಂದುವರಿಯಲಿದೆ ಎಂದು ಆಧಿಯಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X