Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗವರ್ನರ್ -ಎಐಎಡಿಎಂಕೆ ಶಾಸಕರ ಭೇಟಿ ರದ್ದು

ಗವರ್ನರ್ -ಎಐಎಡಿಎಂಕೆ ಶಾಸಕರ ಭೇಟಿ ರದ್ದು

ವಾರ್ತಾಭಾರತಿವಾರ್ತಾಭಾರತಿ5 Feb 2017 6:33 PM IST
share
ಗವರ್ನರ್ -ಎಐಎಡಿಎಂಕೆ ಶಾಸಕರ ಭೇಟಿ ರದ್ದು

ಚೆನ್ನೈ, ಫೆ.5: ತಮಿಳುನಾಡಿನ ಆಡಳಿತಾರೂಢ ಮುಖ್ಯ ಮಂತ್ರಿ ಪನ್ನೀರ್‌ ಸೆಲ್ವಂ ,ಎಐಎಡಿಎಂಕೆ ಪಕ್ಷದ ಶಾಸಕರು ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾಗುವ ಕಾರ್ಯಕ್ರಮ ರದ್ಧಾಗಿದೆ.
ಉಸ್ತುವಾರಿ ರಾಜ್ಯಪಾಲ ವಿದ್ಯಾ ಸಾಗರ್‌ ರಾವ್‌ ಹೊಸದಿಲ್ಲಿಯಿಂದ ವಾಪಸಾಗದಿರುವ ಹಿನ್ನೆಲೆಯಲ್ಲಿ ಅವರನ್ನು ಶಾಸಕರಿಗೆ  ಭೇಟಿಯಾಗಲು ಸಾಧ್ಯವಾಗದು.
ರಾಜ್ಯಪಾಲ ವಿದ್ಯಸಾಗರ‍್ ಹಿಂದೆ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೊಯಮತ್ತೂರಿನಿಂದ ನೇರವಾಗಿ ಹೊಸದಿಲ್ಲಿಗೆ ತೆರಳಿದ್ದಾರೆ. ಸೋಮವಾರ ಅವರು ಹೊಸದಿಲ್ಲಿಯಿಂದ ವಾಪಸಾದ ಬಳಿಕ ರಾಜ್ಯಪಾಲರು ಭೇಟಿಗೆ ಸಿಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಪಕ್ಷದ ಕಚೇರಿಯಲ್ಲಿ ಇಂದು ನಡೆದ ಎಐಎಡಿಎಂಕೆ ಶಾಸಕಾಂಗ ಸಭೆಯಲ್ಲಿ ಶಶಿಕಲಾ ನಟರಾಜನ್‌  ಅವರನ್ನು ನೂತನ ಸಿಎಂ  ಆಗಿ ಆಯ್ಕೆ ಮಾಡಲಾಗಿತ್ತು.
ಮಾಜಿ ಮುಖ್ಯ ಮಂತ್ರಿ ದಿವಂಗತ ಜಯಲಲಿತಾ ಅವರ ಸ್ನೇಹಿತೆಯಾಗಿರುವ ಶಶಿಕಲಾ ಇತ್ತೀಚೆಗೆ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು
ಮುಖ್ಯ ಮಂತ್ರಿ ಪನ್ನೀರ್‌ ಸೆಲ್ವಂ ಅವರು ಸಭೆಯಲ್ಲಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿ, ಶಶಿಕಲಾ ನಟರಾಜನ್‌ ಅವರನ್ನು ಮುಖ್ಯ ಮಂತ್ರಿಯಾಗಿ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟರು.  ಸಭೆ ಅವರನ್ನು ಮುಖ್ಯಮಂತ್ರಿಯಾಗಿ ಅಂಗೀಕರಿಸಿತು.
ಜಯಲಲಿತಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ಮಂತ್ರಿ ಹುದ್ದೆಯನ್ನು ಒಟ್ಟಿಗೆ ನಿಭಾಯಿಸಿದ್ದರು. ಶಶಿಕಲಾ ನಟರಾಜನ್‌ ಅದೇ ದಾರಿಯಲ್ಲಿ ಮುನ್ನಡೆಯುವುದಾಗಿ  ಭರವಸೆ ನೀಡಿದ್ದಾರೆಂದು  ಪಕ್ಷದ ಮೂಲಗಳು ತಿಳಿಸಿವೆ.
ಮುಖ್ಯ ಮಂತ್ರಿಯಾಗಿ ನಿಯೋಜನೆಗೊಂಡ ಬಳಿಕ ಅವರು ತನ್ನ ಬೆಂಬಲಿಗರೊಂದಿಗೆ ಬಾಲ್ಕನಿಯಲ್ಲಿ ಕಾಣಿಸಿಕೊಂಡರು. 
ಒ.ಪನ್ನೀರ‍್ ಸೆಲ್ವಂ ಅವರು ಜಯಲಲಿತಾ ಅನುಪಸ್ಥಿತಿಯಲ್ಲಿ ಎರಡು ಬಾರಿ ಮುಖ್ಯ ಮಂತ್ರಿಯಾಗಿದ್ದರು. ಹಿಂದೆ ಜಯಲಲಿತಾ ಭ್ರಷ್ಟಾಚಾರ ಹಗರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಸಮಯದಲ್ಲಿ ಸೆಲ್ವಂ ಮುಖ್ಯಮಂತ್ರಿಯಾಗಿದ್ದರು. ಜಯಲಲಿತಾ ಅವರು ಬಿಡುಗಡೆಗೊಂಡ ಬೆನ್ನಲ್ಲೆ ಅವರಿಗೆ ಮುಖ್ಯ ಮಂತ್ರಿ ಪಟ್ಟ ಬಿಟ್ಟುಕೊಟ್ಟಿದ್ದರು. 
ಕಳೆದ ಡಿಸೆಂಬರ್‌ನಲ್ಲಿ ಜಯಲಲಿತಾ ನಿಧನರಾದ ಬೆನ್ನಲ್ಲೆ ಮತ್ತೆ ಸೆಲ್ವಂ ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಜಯಲಲಿತಾ ಅವರ ಸ್ನೇಹಿತೆ ಶಶಿಕಲಾ ಅವರಿಗೆ ಮುಖ್ಯ ಮಂತ್ರಿ ಹುದ್ದೆಯನ್ನು ಬಿಟ್ಟುಕೊಟ್ಟಿದ್ದಾರೆ.
61ರ ಹರೆಯದ ಶಶಿಕಲಾ ಅವರು ಚುನಾಯಿತ ಶಾಸಕರಲ್ಲ.ಜಯಲಲಿತಾ ಇರುವಾಗ ಪಕ್ಷದಲ್ಲಿ ಹಿಂದೆ ಯಾವುದೇ ಹುದ್ದೆಯನ್ನು ವಹಿಸಿಕೊಂಡಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X